AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coal Crisis: ಕಲ್ಲಿದ್ದಲು ಬಿಕ್ಕಟ್ಟಿನ ಪರಿಸ್ಥಿತಿ ಅವಲೋಕನ; ಇಂದು ಪ್ರಧಾನಿ ಕಚೇರಿಯಿಂದ ಪರಿಶೀಲನಾ ಸಭೆ

ದೇಶದ ಉಷ್ಣಸ್ಥಾವರಗಳಲ್ಲಿ ಕಲ್ಲಿದ್ದಲು ಅಭಾವ ಉಂಟಾಗಿದೆ. ಇದು ದೇಶದಲ್ಲಿ ವಿದ್ಯುತ್​ ವ್ಯತ್ಯಯ ಸಮಸ್ಯೆಗೆ ಕಾರಣವಾಗಬಹುದು ಎಂದು ಕೇಂದ್ರ ವಿದ್ಯುತ್​ ಪ್ರಾಧಿಕಾರ ಅಕ್ಟೋಬರ್​ 5ರಂದು ತಿಳಿಸಿತ್ತು.

Coal Crisis: ಕಲ್ಲಿದ್ದಲು ಬಿಕ್ಕಟ್ಟಿನ ಪರಿಸ್ಥಿತಿ ಅವಲೋಕನ; ಇಂದು ಪ್ರಧಾನಿ ಕಚೇರಿಯಿಂದ ಪರಿಶೀಲನಾ ಸಭೆ
ನರೇಂದ್ರ ಮೋದಿ
TV9 Web
| Edited By: |

Updated on: Oct 12, 2021 | 12:39 PM

Share

ದೇಶದ 100ಕ್ಕೂ ಹೆಚ್ಚು ವಿದ್ಯುತ್​ ಸ್ಥಾವರಗಳಲ್ಲಿ ಕಲ್ಲಿದ್ದಲು ಅಭಾವ (Coal Shortage) ಉಂಟಾಗಿದ್ದು, ಇದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ನಿನ್ನೆ ಗೃಹ ಸಚಿವ ಅಮಿತ್​ ಶಾ (Amit Shah), ಕೇಂದ್ರ ಇಂಧನ ಸಚಿವ ಆರ್​.ಕೆ.ಸಿಂಗ್​ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್​ ಜೋಶಿಯವರೊಟ್ಟಿಗೆ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಇನ್ನೂ ಕೆಲವು ಕೇಂದ್ರ ಸಚಿವರು ಪಾಲ್ಗೊಂಡಿದ್ದರು. ಅದರ ಬೆನ್ನಲ್ಲೇ ಈಗ ಪ್ರಧಾನಮಂತ್ರಿ ಕಚೇರಿ (PMO) ಕೂಡ ಇಂದು ಪರಿಶೀಲನಾ ಸಭೆ ನಡೆಸಲಿದೆ. ಭಾರತದಲ್ಲಿ ವಿದ್ಯುತ್​ ಸ್ಥಾವರಗಳಲ್ಲಿ ಎಷ್ಟರ ಮಟ್ಟಿಗೆ ಕಲ್ಲಿದ್ದಲು ಕೊರತೆ ಉಂಟಾಗಿದೆ? ನಿವಾರಿಸಲು ಏನೆಲ್ಲ ಕ್ರಮ ಕೈಗೊಳ್ಳಬೇಕು? ಎಂಬಿತ್ಯಾದಿ ವಿಷಯಗಳ ಬಗ್ಗೆ ಚರ್ಚೆ, ಪರಿಶೀಲನೆಗಳು ಈ ಸಭೆಯಲ್ಲಿ ನಡೆಯಲಿವೆ.  

ದೇಶದಲ್ಲಿ ಯಾವ ಭಾಗದಲ್ಲಿಯೂ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳುವುದಿಲ್ಲ ಎಂದು ಈಗಾಗಲೇ ಕೇಂದ್ರ ಕಲ್ಲಿದ್ದಲು ಸಚಿವ ಪ್ರಲ್ಹಾದ್​ ಜೋಶಿ ಹೇಳಿದ್ದಾರೆ. ಹಾಗಿದ್ದಾಗ್ಯೂ ಪಂಜಾಬ್​, ರಾಜಸ್ಥಾನ, ದೆಹಲಿ, ತಮಿಳುನಾಡು ಈ ಬಗ್ಗೆ ಧ್ವನಿ ಎತ್ತಿವೆ. ಕಲ್ಲಿದ್ದಲು ಪೂರೈಕೆ ಸಾಕಾಗುತ್ತಿಲ್ಲ. ಹೀಗಾದರೆ ವಿದ್ಯುತ್​ ಪೂರೈಕೆ ಕಷ್ಟವಾಗಲಿದೆ ಎಂದೂ ಹೇಳಿಕೊಂಡಿವೆ.  ವಿದ್ಯುತ್​ ಕೊರತೆ ಎದುರಾಗಿದ್ದು, ಪರಿಸ್ಥಿತಿ ಬಿಗಡಾಯಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯಗಳಿಗೆ ಕಲ್ಲಿದ್ದಲು ಪೂರೈಕೆಯನ್ನು ಸರಿಯಾಗಿ ಮಾಡಬೇಕು. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಬೇಕು ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​, ಪಂಜಾಬ್​ ಸಿಎಂ ಚರಣಜಿತ್​ ಸಿಂಗ್ ಛನ್ನಿ ಕೇಂದ್ರಕ್ಕೆ ಪತ್ರವನ್ನೂ ಬರೆದಿದ್ದಾರೆ.

ಇನ್ನು ದೇಶದ ಉಷ್ಣಸ್ಥಾವರಗಳಲ್ಲಿ ಕಲ್ಲಿದ್ದಲು ಅಭಾವ ಉಂಟಾಗಿದೆ. ಇದು ದೇಶದಲ್ಲಿ ವಿದ್ಯುತ್​ ವ್ಯತ್ಯಯ ಸಮಸ್ಯೆಗೆ ಕಾರಣವಾಗಬಹುದು ಎಂದು ಕೇಂದ್ರ ವಿದ್ಯುತ್​ ಪ್ರಾಧಿಕಾರ ಬಿಡುಗಡೆ ಮಾಡಿದ ಡಾಟಾದಲ್ಲಿ ಉಲ್ಲೇಖವಾಗಿದೆ.  ಕಲ್ಲಿದ್ದಲು ಬಳಸಿ ವಿದ್ಯುತ್​ ಉತ್ಪಾದನೆ ಮಾಡುವ ಒಟ್ಟು 135 ಥರ್ಮಲ್​ ಸ್ಥಾವರಗಳಲ್ಲಿ ಸುಮಾರು 106 ಸ್ಥಾವರಗಳು (ಶೇ.80) ಕಲ್ಲಿದ್ದಲು ಸಮಸ್ಯೆ ಎದುರಿಸುತ್ತಿವೆ. ಅವರ ಬಳಿ ಇನ್ನು 6-7 ದಿನಗಳಿಗೆ ಸಾಕಾಗುವಷ್ಟು ಮಾತ್ರ ಕಲ್ಲಿದ್ದಲು ಸಂಗ್ರಹ ಇದೆ ಎಂದು ಅಕ್ಟೋಬರ್​ 5ರಂದು ಬಿಡುಗಡೆ ಮಾಡಿದ ಮಾಹಿತಿಯಲ್ಲಿ ತಿಳಿಸಲಾಗಿತ್ತು. ಅಂದಿನಿಂದಲೂ ಒಂದು ಆತಂಕದ ವಾತಾವರಣ ಶುರುವಾಗಿದೆ.  ಆದರೆ ಕೇಂದ್ರ ಇಂಧನ ಸಚಿವಾಲಯ ಮತ್ತು ಕಲ್ಲಿದ್ದಲು ಸಚಿವಾಲಯಗಳು ಇದನ್ನು ಅಲ್ಲಗಳೆದಿವೆ. ಕಲ್ಲಿದ್ದಲು ಸಾಕಷ್ಟು ಪೂರೈಕೆ ಮಾಡಲಾಗುತ್ತಿದೆ. ವಿದ್ಯುತ್​ ಅಭಾವ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿವೆ.

ಇದನ್ನೂ ಓದಿ: ನಿಮ್ಮ ಈ ಕೆಲವು ದಿನನಿತ್ಯದ ಅಭ್ಯಾಸಗಳು ಮೂತ್ರಪಿಂಡದ ಆರೋಗ್ಯಕ್ಕೆ ಹಾನಿಯುಂಟು ಮಾಡಬಹುದು! ಎಚ್ಚರ

ಸ್ಟಾರ್​ ಚಿತ್ರಗಳ ಜೊತೆ ಡಾರ್ಲಿಂಗ್​ ಕೃಷ್ಣ ಪೈಪೋಟಿ: ಅ.15ಕ್ಕೆ ಶ್ರೀಕೃಷ್ಣ ಜಿಮೇಲ್​ ಡಾಟ್​ ಕಾಮ್​ ಬಿಡುಗಡೆ

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು