AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coal Crisis: ಕಲ್ಲಿದ್ದಲು ಬಿಕ್ಕಟ್ಟಿನ ಪರಿಸ್ಥಿತಿ ಅವಲೋಕನ; ಇಂದು ಪ್ರಧಾನಿ ಕಚೇರಿಯಿಂದ ಪರಿಶೀಲನಾ ಸಭೆ

ದೇಶದ ಉಷ್ಣಸ್ಥಾವರಗಳಲ್ಲಿ ಕಲ್ಲಿದ್ದಲು ಅಭಾವ ಉಂಟಾಗಿದೆ. ಇದು ದೇಶದಲ್ಲಿ ವಿದ್ಯುತ್​ ವ್ಯತ್ಯಯ ಸಮಸ್ಯೆಗೆ ಕಾರಣವಾಗಬಹುದು ಎಂದು ಕೇಂದ್ರ ವಿದ್ಯುತ್​ ಪ್ರಾಧಿಕಾರ ಅಕ್ಟೋಬರ್​ 5ರಂದು ತಿಳಿಸಿತ್ತು.

Coal Crisis: ಕಲ್ಲಿದ್ದಲು ಬಿಕ್ಕಟ್ಟಿನ ಪರಿಸ್ಥಿತಿ ಅವಲೋಕನ; ಇಂದು ಪ್ರಧಾನಿ ಕಚೇರಿಯಿಂದ ಪರಿಶೀಲನಾ ಸಭೆ
ನರೇಂದ್ರ ಮೋದಿ
TV9 Web
| Edited By: |

Updated on: Oct 12, 2021 | 12:39 PM

Share

ದೇಶದ 100ಕ್ಕೂ ಹೆಚ್ಚು ವಿದ್ಯುತ್​ ಸ್ಥಾವರಗಳಲ್ಲಿ ಕಲ್ಲಿದ್ದಲು ಅಭಾವ (Coal Shortage) ಉಂಟಾಗಿದ್ದು, ಇದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ನಿನ್ನೆ ಗೃಹ ಸಚಿವ ಅಮಿತ್​ ಶಾ (Amit Shah), ಕೇಂದ್ರ ಇಂಧನ ಸಚಿವ ಆರ್​.ಕೆ.ಸಿಂಗ್​ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್​ ಜೋಶಿಯವರೊಟ್ಟಿಗೆ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಇನ್ನೂ ಕೆಲವು ಕೇಂದ್ರ ಸಚಿವರು ಪಾಲ್ಗೊಂಡಿದ್ದರು. ಅದರ ಬೆನ್ನಲ್ಲೇ ಈಗ ಪ್ರಧಾನಮಂತ್ರಿ ಕಚೇರಿ (PMO) ಕೂಡ ಇಂದು ಪರಿಶೀಲನಾ ಸಭೆ ನಡೆಸಲಿದೆ. ಭಾರತದಲ್ಲಿ ವಿದ್ಯುತ್​ ಸ್ಥಾವರಗಳಲ್ಲಿ ಎಷ್ಟರ ಮಟ್ಟಿಗೆ ಕಲ್ಲಿದ್ದಲು ಕೊರತೆ ಉಂಟಾಗಿದೆ? ನಿವಾರಿಸಲು ಏನೆಲ್ಲ ಕ್ರಮ ಕೈಗೊಳ್ಳಬೇಕು? ಎಂಬಿತ್ಯಾದಿ ವಿಷಯಗಳ ಬಗ್ಗೆ ಚರ್ಚೆ, ಪರಿಶೀಲನೆಗಳು ಈ ಸಭೆಯಲ್ಲಿ ನಡೆಯಲಿವೆ.  

ದೇಶದಲ್ಲಿ ಯಾವ ಭಾಗದಲ್ಲಿಯೂ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳುವುದಿಲ್ಲ ಎಂದು ಈಗಾಗಲೇ ಕೇಂದ್ರ ಕಲ್ಲಿದ್ದಲು ಸಚಿವ ಪ್ರಲ್ಹಾದ್​ ಜೋಶಿ ಹೇಳಿದ್ದಾರೆ. ಹಾಗಿದ್ದಾಗ್ಯೂ ಪಂಜಾಬ್​, ರಾಜಸ್ಥಾನ, ದೆಹಲಿ, ತಮಿಳುನಾಡು ಈ ಬಗ್ಗೆ ಧ್ವನಿ ಎತ್ತಿವೆ. ಕಲ್ಲಿದ್ದಲು ಪೂರೈಕೆ ಸಾಕಾಗುತ್ತಿಲ್ಲ. ಹೀಗಾದರೆ ವಿದ್ಯುತ್​ ಪೂರೈಕೆ ಕಷ್ಟವಾಗಲಿದೆ ಎಂದೂ ಹೇಳಿಕೊಂಡಿವೆ.  ವಿದ್ಯುತ್​ ಕೊರತೆ ಎದುರಾಗಿದ್ದು, ಪರಿಸ್ಥಿತಿ ಬಿಗಡಾಯಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯಗಳಿಗೆ ಕಲ್ಲಿದ್ದಲು ಪೂರೈಕೆಯನ್ನು ಸರಿಯಾಗಿ ಮಾಡಬೇಕು. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಬೇಕು ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​, ಪಂಜಾಬ್​ ಸಿಎಂ ಚರಣಜಿತ್​ ಸಿಂಗ್ ಛನ್ನಿ ಕೇಂದ್ರಕ್ಕೆ ಪತ್ರವನ್ನೂ ಬರೆದಿದ್ದಾರೆ.

ಇನ್ನು ದೇಶದ ಉಷ್ಣಸ್ಥಾವರಗಳಲ್ಲಿ ಕಲ್ಲಿದ್ದಲು ಅಭಾವ ಉಂಟಾಗಿದೆ. ಇದು ದೇಶದಲ್ಲಿ ವಿದ್ಯುತ್​ ವ್ಯತ್ಯಯ ಸಮಸ್ಯೆಗೆ ಕಾರಣವಾಗಬಹುದು ಎಂದು ಕೇಂದ್ರ ವಿದ್ಯುತ್​ ಪ್ರಾಧಿಕಾರ ಬಿಡುಗಡೆ ಮಾಡಿದ ಡಾಟಾದಲ್ಲಿ ಉಲ್ಲೇಖವಾಗಿದೆ.  ಕಲ್ಲಿದ್ದಲು ಬಳಸಿ ವಿದ್ಯುತ್​ ಉತ್ಪಾದನೆ ಮಾಡುವ ಒಟ್ಟು 135 ಥರ್ಮಲ್​ ಸ್ಥಾವರಗಳಲ್ಲಿ ಸುಮಾರು 106 ಸ್ಥಾವರಗಳು (ಶೇ.80) ಕಲ್ಲಿದ್ದಲು ಸಮಸ್ಯೆ ಎದುರಿಸುತ್ತಿವೆ. ಅವರ ಬಳಿ ಇನ್ನು 6-7 ದಿನಗಳಿಗೆ ಸಾಕಾಗುವಷ್ಟು ಮಾತ್ರ ಕಲ್ಲಿದ್ದಲು ಸಂಗ್ರಹ ಇದೆ ಎಂದು ಅಕ್ಟೋಬರ್​ 5ರಂದು ಬಿಡುಗಡೆ ಮಾಡಿದ ಮಾಹಿತಿಯಲ್ಲಿ ತಿಳಿಸಲಾಗಿತ್ತು. ಅಂದಿನಿಂದಲೂ ಒಂದು ಆತಂಕದ ವಾತಾವರಣ ಶುರುವಾಗಿದೆ.  ಆದರೆ ಕೇಂದ್ರ ಇಂಧನ ಸಚಿವಾಲಯ ಮತ್ತು ಕಲ್ಲಿದ್ದಲು ಸಚಿವಾಲಯಗಳು ಇದನ್ನು ಅಲ್ಲಗಳೆದಿವೆ. ಕಲ್ಲಿದ್ದಲು ಸಾಕಷ್ಟು ಪೂರೈಕೆ ಮಾಡಲಾಗುತ್ತಿದೆ. ವಿದ್ಯುತ್​ ಅಭಾವ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿವೆ.

ಇದನ್ನೂ ಓದಿ: ನಿಮ್ಮ ಈ ಕೆಲವು ದಿನನಿತ್ಯದ ಅಭ್ಯಾಸಗಳು ಮೂತ್ರಪಿಂಡದ ಆರೋಗ್ಯಕ್ಕೆ ಹಾನಿಯುಂಟು ಮಾಡಬಹುದು! ಎಚ್ಚರ

ಸ್ಟಾರ್​ ಚಿತ್ರಗಳ ಜೊತೆ ಡಾರ್ಲಿಂಗ್​ ಕೃಷ್ಣ ಪೈಪೋಟಿ: ಅ.15ಕ್ಕೆ ಶ್ರೀಕೃಷ್ಣ ಜಿಮೇಲ್​ ಡಾಟ್​ ಕಾಮ್​ ಬಿಡುಗಡೆ

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ