AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

18 ಮಹಿಳೆಯರನ್ನು ಬರ್ಬರವಾಗಿ ಕೊಂದಿದ್ದ ಹಂತಕ ಅರೆಸ್ಟ್​; ಪತ್ನಿ ಬಿಟ್ಟು ಹೋದಾಗಿನಿಂದ ಇದೇ ಕಾಯಕವಾಗಿತ್ತು..!

21ನೇ ವರ್ಷದಲ್ಲೇ ಆತನಿಗೆ ಮದುವೆಯಾಗಿತ್ತು. ಆದರೆ ಕೆಲವೇ ಸಮಯದಲ್ಲಿ ಪತ್ನಿ ಆತನನ್ನು ಬಿಟ್ಟು ಹೋಗಿದ್ದಳು. ಅಲ್ಲಿಂದಲೇ ಇಂಥ ಅಪರಾಧದಲ್ಲಿ ತೊಡಗಿಕೊಂಡಿದ್ದ.

18 ಮಹಿಳೆಯರನ್ನು ಬರ್ಬರವಾಗಿ ಕೊಂದಿದ್ದ ಹಂತಕ ಅರೆಸ್ಟ್​; ಪತ್ನಿ ಬಿಟ್ಟು ಹೋದಾಗಿನಿಂದ ಇದೇ ಕಾಯಕವಾಗಿತ್ತು..!
ಸುದ್ದಿಗೋಷ್ಠಿಯ ಮೂಲಕ ಸೀರಿಯಲ್​ ಕಿಲ್ಲರ್​ ಅರೆಸ್ಟ್​ ಆದ ಮಾಹಿತಿ ನೀಡಿದ ಪೊಲೀಸರು
Lakshmi Hegde
|

Updated on: Jan 28, 2021 | 12:31 PM

Share

ಹೈದರಾಬಾದ್: 18 ಮಹಿಳೆಯರ ಸರಣಿ ಹಂತಕನನ್ನು ಹೈದರಾಬಾದ್​ನ ರಾಚಕೊಂಡ ಕಮಿಷನರೇಟ್​ ಪೊಲೀಸರು ಬಂಧಿಸಿದ್ದಾರೆ. ಈತ ಇತ್ತೀಚೆಗಷ್ಟೇ ಇಬ್ಬರು ಮಹಿಳೆಯರನ್ನು ಹತ್ಯೆಗೈದಿದ್ದ. ಹಾಗೇ ಬೇರೆ ಕೆಲವು ಅಪರಾಧ ಪ್ರಕರಣಗಳಲ್ಲೂ ಬೇಕಾದವನಾಗಿದ್ದ.

ಆರೋಪಿಯ ಹೆಸರು ಮೈನಾ ರಾಮುಲು.. 45ವರ್ಷ ವಯಸ್ಸು. ಕಲ್ಲು ಒಡೆಯುವ ಕೆಲಸ ಮಾಡುವ ಈತ ಈ ಹಿಂದೆ ಕೂಡ 16 ಕೊಲೆ ಪ್ರಕರಣ, ನಾಲ್ಕು ಆಸ್ತಿಗೆ ಸಂಬಂಧಪಟ್ಟ ಅಪರಾಧಗಳ ಪ್ರಕರಣದಡಿ ಬಂಧಿತನಾಗಿದ್ದ. ಆದರೆ 2011ರಲ್ಲಿ ಜೈಲಿನಿಂದ ತಪ್ಪಿಸಿಕೊಂಡಿದ್ದ. ಈ ವರ್ಷ ಜನವರಿ 4ರಂದು ಜ್ಯುಬ್ಲಿ ಹಿಲ್​​ನಲ್ಲಿ ವೆಂಕಟಮ್ಮ ಎಂಬುವರನ್ನು ಹತ್ಯೆ ಮಾಡಿ, ಆಕೆಯ ಗುರುತು ಸಿಗಬಾರದು ಎಂದು ಮುಖವನ್ನು ಪೆಟ್ರೋಲ್​ ಸುರಿದು, ಬೆಂಕಿ ಹಚ್ಚಿ ಸುಟ್ಟಿದ್ದ. ತನಿಖೆ ಪ್ರಾರಂಭಿಸಿದ ಪೊಲೀಸರು 20 ದಿನಗಳ ನಂತರ ರಾಮುಲುನನ್ನು ಬಂಧಿಸಿದ್ದಾರೆ.

21ನೇ ವರ್ಷದಲ್ಲೇ ಆತನಿಗೆ ಮದುವೆಯಾಗಿತ್ತು. ಆದರೆ ಕೆಲವೇ ಸಮಯದಲ್ಲಿ ಪತ್ನಿ ಆತನನ್ನು ಬಿಟ್ಟು ಹೋಗಿದ್ದಳು. ಅಲ್ಲಿಂದಲೇ ಇಂಥ ಅಪರಾಧದಲ್ಲಿ ತೊಡಗಿಕೊಂಡಿದ್ದ. ಕುಡಿತಕ್ಕೆ ದಾಸನಾಗಿದ್ದ ಈತ, ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡುತ್ತಿದ್ದ, ಲೈಂಗಿಕ ಬಯಕೆ ತೀರಿಸಿಕೊಳ್ಳಲು, ಹಣಕ್ಕಾಗಿ ಬೆನ್ನು ಹತ್ತುತ್ತಿದ್ದ.  ಅದರಲ್ಲೂ ವೈನ್​ ಶಾಪ್​ಗೆ ಬರುವ ಹೆಣ್ಣುಮಕ್ಕಳು, ಮಹಿಳೆಯರ ಮೇಲೆ ಒಂದು ಕಣ್ಣಿಟ್ಟು ಅವರನ್ನು ಪರಿಚಯ ಮಾಡಿಕೊಳ್ಳುತ್ತಿದ್ದ. ಅವರೊಂದಿಗೆ ಮದ್ಯ ಸೇವಿಸಿ, ನಂತರ ಕೊಂದು ಅವರ ಬಳಿ ಇದ್ದ ಬೆಲೆಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗುತ್ತಿದ್ದ.

ನಾಪತ್ತೆಯಾಗಿದ್ದ ಬಾಲಕಿ ಕೆರೆಯಲ್ಲಿ ಶವವಾಗಿ ಪತ್ತೆ: ಯುವಕನ ಮೇಲೆ ಅತ್ಯಾಚಾರ ಆರೋಪ

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ