ಕಂದಮ್ಮಗಳನ್ನು ಮಾರಾಟ ಮಾಡುತ್ತಿದ್ದ 9 ಜನ ಅರೆಸ್ಟ್

ಹೈದರಾಬಾದ್: ತೆಲಂಗಾಣದಲ್ಲಿ ಕಂದಮ್ಮಗಳನ್ನು ಮಾರಾಟ ಮಾಡುತ್ತಿದ್ದ ದೊಡ್ಡ ಜಾಲವೊಂದು ಬೆಳಕಿಗೆ ಬಂದಿದೆ. ಮಕ್ಕಳ ಮಾರಾಟದ ಮೂಲಕ ಕೋಟ್ಯಂತರ ರೂಪಾಯಿ ವ್ಯವಹಾರ ನಡೆಸುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಆಗತಾನೆ ಹುಟ್ಟಿದ ಮಕ್ಕಳನ್ನು 10ರಿಂದ 14 ಲಕ್ಷದ ರೂಪಾಯಿಗಳಿಗೆ ಏಜಂಟರು ಮಾರಾಟ ಮಾಡುತ್ತಿದ್ದರು. ಆದ್ರೆ, ಮಗುವಿನ ತಾಯಿಗೆ ಕೇವಲ 70ಸಾವಿರ ರೂಪಾಯಿ ನೀಡಿ ದಂಧೆಕೋರರು ಮೋಸ ಮಾಡ್ತಿದ್ರು. ತೆಲಂಗಾಣದ ನಲ್ಗೊಂಡ, ಮೆಹಬೂಬನಗರ, ಕರೀಮನಗರ ಜಿಲ್ಲೆಗಳ ತಾಂಡಾಗಳಲ್ಲಿನ ಬಡ ಮಹಿಳೆಯರನ್ನೇ ಈ ತಂಡ ಟಾರ್ಗೆಟ್ ಮಾಡಿತ್ತು. ಇದಕ್ಕೆ ಸಂತಾನ ಸಾಫಲ್ಯ ಕೇಂದ್ರಗಳು […]

ಕಂದಮ್ಮಗಳನ್ನು ಮಾರಾಟ ಮಾಡುತ್ತಿದ್ದ 9 ಜನ ಅರೆಸ್ಟ್
ಸಾಧು ಶ್ರೀನಾಥ್​

Updated on: Feb 05, 2020 | 6:35 AM

ಹೈದರಾಬಾದ್: ತೆಲಂಗಾಣದಲ್ಲಿ ಕಂದಮ್ಮಗಳನ್ನು ಮಾರಾಟ ಮಾಡುತ್ತಿದ್ದ ದೊಡ್ಡ ಜಾಲವೊಂದು ಬೆಳಕಿಗೆ ಬಂದಿದೆ. ಮಕ್ಕಳ ಮಾರಾಟದ ಮೂಲಕ ಕೋಟ್ಯಂತರ ರೂಪಾಯಿ ವ್ಯವಹಾರ ನಡೆಸುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿದ್ದಾರೆ.

ಆಗತಾನೆ ಹುಟ್ಟಿದ ಮಕ್ಕಳನ್ನು 10ರಿಂದ 14 ಲಕ್ಷದ ರೂಪಾಯಿಗಳಿಗೆ ಏಜಂಟರು ಮಾರಾಟ ಮಾಡುತ್ತಿದ್ದರು. ಆದ್ರೆ, ಮಗುವಿನ ತಾಯಿಗೆ ಕೇವಲ 70ಸಾವಿರ ರೂಪಾಯಿ ನೀಡಿ ದಂಧೆಕೋರರು ಮೋಸ ಮಾಡ್ತಿದ್ರು. ತೆಲಂಗಾಣದ ನಲ್ಗೊಂಡ, ಮೆಹಬೂಬನಗರ, ಕರೀಮನಗರ ಜಿಲ್ಲೆಗಳ ತಾಂಡಾಗಳಲ್ಲಿನ ಬಡ ಮಹಿಳೆಯರನ್ನೇ ಈ ತಂಡ ಟಾರ್ಗೆಟ್ ಮಾಡಿತ್ತು. ಇದಕ್ಕೆ ಸಂತಾನ ಸಾಫಲ್ಯ ಕೇಂದ್ರಗಳು ಸಹಕಾರ ನೀಡುತ್ತಿದ್ವು ಅಂತಲೂ ಹೇಳಲಾಗ್ತಿದೆ.

ಈ ಅಕ್ರಮ ದಂಧೆ ನಡೆಸುತ್ತಿದ್ದ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ 9 ಜನರನ್ನು ಹೈದರಾಬಾದನ ವಿಶೇಷ ಪೊಲೀಸ್ ತಂಡ ಬಂಧಿಸಿದೆ. ವಿಚಾರಣೆ ವೇಳೆ ಈ ತಂಡ 14ಕ್ಕೂ ಹೆಚ್ಚು ಮಕ್ಕಳನ್ನು ಮಾರಾಟ ಮಾಡಿರುವುದು ಬಯಲಾಗಿದೆ. ಇದಕ್ಕೆ ಸಹಕರಿಸುತ್ತಿದ್ದ ಕೆಲ ಪರ್ಟಿಲಿಟಿ ಸೆಂಟರ್​ಗಳ ಮುಖ್ಯಸ್ಥರು ಪರಾರಿಯಾಗಿದ್ದಾರೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us