AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕ್ ಧರಿಸಿಲ್ಲವೆಂದು ಮೇಕೆಯನ್ನೆ ಬಂಧಿಸಿದ ಪೊಲೀಸರು, ಎಲ್ಲಿ?

ಮೇಕೆಯೊಂದು ಮಾಸ್ಕ್ ಧರಿಸದೆ ಬೀದಿಯಲ್ಲಿ ಓಡಾಡುತ್ತಿದ್ದನ್ನು ಕಂಡ ಬಿಕಾನ್ ಗಂಜ್ ನಗರದ ಪೊಲೀಸರು ಮೇಕೆಯನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿರುವ ಘಟನೆ ನಡೆದಿದ್ದು ಈಗ ಎಲ್ಲೆಡೆ ಸುದ್ದಿಯಲ್ಲಿದೆ. ವಿಷಯ ತಿಳಿದು ಪೊಲೀಸ್ ಠಾಣೆಗೆ ಬಂದ ಮೇಕೆಯ ಯಜಮಾನ ಪೊಲೀಸರನ್ನು ಕಾಡಿ ಬೇಡಿದ ನಂತರ, ಪೊಲೀಸರು ಒಡೆಯನಿಗೆ ಮೇಕೆಯನ್ನು ಬೀದಿಯಲ್ಲಿ ಅಲೆಯಲು ಬಿಡಬಾರದೆಂದು ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ಈ ವಿಚಾರ ಎಲ್ಲೆಡೆ ಸುದ್ದಿಯಾದ ಬಳಿಕ ಎಚ್ಚೆತ್ತುಕೊಂಡ ಅನ್ವರ್ ಗಂಜ್ ಪೊಲೀಸ್ ಠಾಣೆಯ ಸರ್ಕಲ್ ಆಫೀಸರ್ ಸೈಫುದ್ದಿನ್ ಬೇಗ್ ಹೇಳಿರುವ […]

ಮಾಸ್ಕ್ ಧರಿಸಿಲ್ಲವೆಂದು ಮೇಕೆಯನ್ನೆ ಬಂಧಿಸಿದ ಪೊಲೀಸರು, ಎಲ್ಲಿ?
ಸಾಧು ಶ್ರೀನಾಥ್​
| Updated By: |

Updated on:Jul 28, 2020 | 12:38 AM

Share

ಮೇಕೆಯೊಂದು ಮಾಸ್ಕ್ ಧರಿಸದೆ ಬೀದಿಯಲ್ಲಿ ಓಡಾಡುತ್ತಿದ್ದನ್ನು ಕಂಡ ಬಿಕಾನ್ ಗಂಜ್ ನಗರದ ಪೊಲೀಸರು ಮೇಕೆಯನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿರುವ ಘಟನೆ ನಡೆದಿದ್ದು ಈಗ ಎಲ್ಲೆಡೆ ಸುದ್ದಿಯಲ್ಲಿದೆ.

ವಿಷಯ ತಿಳಿದು ಪೊಲೀಸ್ ಠಾಣೆಗೆ ಬಂದ ಮೇಕೆಯ ಯಜಮಾನ ಪೊಲೀಸರನ್ನು ಕಾಡಿ ಬೇಡಿದ ನಂತರ, ಪೊಲೀಸರು ಒಡೆಯನಿಗೆ ಮೇಕೆಯನ್ನು ಬೀದಿಯಲ್ಲಿ ಅಲೆಯಲು ಬಿಡಬಾರದೆಂದು ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.

ಈ ವಿಚಾರ ಎಲ್ಲೆಡೆ ಸುದ್ದಿಯಾದ ಬಳಿಕ ಎಚ್ಚೆತ್ತುಕೊಂಡ ಅನ್ವರ್ ಗಂಜ್ ಪೊಲೀಸ್ ಠಾಣೆಯ ಸರ್ಕಲ್ ಆಫೀಸರ್ ಸೈಫುದ್ದಿನ್ ಬೇಗ್ ಹೇಳಿರುವ ಪ್ರಕಾರ ಮೇಕೆಯನ್ನು ಯುವಕನೊಬ್ಬ ಎತ್ತಿಕೊಂಡು ಹೋಗುತ್ತಿದ್ದು, ಪೊಲೀಸರನ್ನು ಕಂಡ ಬಳಿಕ ಸ್ಥಳದಲ್ಲಿಯೇ ಮೇಕೆಯನ್ನು ಬಿಟ್ಟು ಪರಾರಿಯಾಗಿದ್ದಾನೆ. ಹೀಗಾಗಿ ಮೇಕೆಯನ್ನು ಪೊಲೀಸ್ ಠಾಣೆಗೆ ತಂದು ರಕ್ಷಣೆ ನೀಡಿದೆವು ಎಂದಿದ್ದಾರೆ.

ಮೇಕೆಯನ್ನು ಠಾಣೆಗೆ ಕರೆತಂದ ಪೊಲೀಸ್ ಒಬ್ಬರು ಮೇಕೆ ಮಾಸ್ಕ್ ಧರಿಸದೆ ಬೀದಿಯಲ್ಲಿ ಓಡಾಡಿ ಲಾಕ್ ಡೌನ್ ನಿಯಮ ಉಲ್ಲಂಘಿಸಿದೆ. ಹಾಗಾಗಿ ಠಾಣೆಗೆ ಕರೆದುಕೊಂಡು ಬಂದಿದ್ದೇವೆ ಎಂದಿದ್ದರು. ಜೊತೆಗೆ ಇತ್ತೀಚಿನ ದಿನಗಳಲ್ಲಿ ನಾಯಿಗಳ ಮಾಲೀಕರು ತಮ್ಮ ನಾಯಿಗಳಿಗೆ ಮಾಸ್ಕ್ ವ್ಯವಸ್ಥೆ ಮಾಡಲಾಗಿದ್ದು, ಮೇಕೆಗಳಿಗ್ಯಾಕೆ ಮಾಸ್ಕ್ ವ್ಯವಸ್ಥೆ ಮಾಡಬಾರದು ಎಂದು ಪ್ರಶ್ನೆ ಮಾಡಿದ್ದರು. ಆದರೆ ಸಾಮಾಜಿಕ ತಾಣಗಳಲ್ಲಿ ಇದು ವೈರಲ್ ಆದ ಕಾರಣ ಈಗ ತಮ್ಮ ಹೇಳಿಕೆಯನ್ನು ಬದಲಾಯಿಸಿದ್ದಾರೆ.

Published On - 3:31 pm, Mon, 27 July 20

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?