AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕ್ ಧರಿಸಿಲ್ಲವೆಂದು ಮೇಕೆಯನ್ನೆ ಬಂಧಿಸಿದ ಪೊಲೀಸರು, ಎಲ್ಲಿ?

ಮೇಕೆಯೊಂದು ಮಾಸ್ಕ್ ಧರಿಸದೆ ಬೀದಿಯಲ್ಲಿ ಓಡಾಡುತ್ತಿದ್ದನ್ನು ಕಂಡ ಬಿಕಾನ್ ಗಂಜ್ ನಗರದ ಪೊಲೀಸರು ಮೇಕೆಯನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿರುವ ಘಟನೆ ನಡೆದಿದ್ದು ಈಗ ಎಲ್ಲೆಡೆ ಸುದ್ದಿಯಲ್ಲಿದೆ. ವಿಷಯ ತಿಳಿದು ಪೊಲೀಸ್ ಠಾಣೆಗೆ ಬಂದ ಮೇಕೆಯ ಯಜಮಾನ ಪೊಲೀಸರನ್ನು ಕಾಡಿ ಬೇಡಿದ ನಂತರ, ಪೊಲೀಸರು ಒಡೆಯನಿಗೆ ಮೇಕೆಯನ್ನು ಬೀದಿಯಲ್ಲಿ ಅಲೆಯಲು ಬಿಡಬಾರದೆಂದು ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ಈ ವಿಚಾರ ಎಲ್ಲೆಡೆ ಸುದ್ದಿಯಾದ ಬಳಿಕ ಎಚ್ಚೆತ್ತುಕೊಂಡ ಅನ್ವರ್ ಗಂಜ್ ಪೊಲೀಸ್ ಠಾಣೆಯ ಸರ್ಕಲ್ ಆಫೀಸರ್ ಸೈಫುದ್ದಿನ್ ಬೇಗ್ ಹೇಳಿರುವ […]

ಮಾಸ್ಕ್ ಧರಿಸಿಲ್ಲವೆಂದು ಮೇಕೆಯನ್ನೆ ಬಂಧಿಸಿದ ಪೊಲೀಸರು, ಎಲ್ಲಿ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jul 28, 2020 | 12:38 AM

Share

ಮೇಕೆಯೊಂದು ಮಾಸ್ಕ್ ಧರಿಸದೆ ಬೀದಿಯಲ್ಲಿ ಓಡಾಡುತ್ತಿದ್ದನ್ನು ಕಂಡ ಬಿಕಾನ್ ಗಂಜ್ ನಗರದ ಪೊಲೀಸರು ಮೇಕೆಯನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿರುವ ಘಟನೆ ನಡೆದಿದ್ದು ಈಗ ಎಲ್ಲೆಡೆ ಸುದ್ದಿಯಲ್ಲಿದೆ.

ವಿಷಯ ತಿಳಿದು ಪೊಲೀಸ್ ಠಾಣೆಗೆ ಬಂದ ಮೇಕೆಯ ಯಜಮಾನ ಪೊಲೀಸರನ್ನು ಕಾಡಿ ಬೇಡಿದ ನಂತರ, ಪೊಲೀಸರು ಒಡೆಯನಿಗೆ ಮೇಕೆಯನ್ನು ಬೀದಿಯಲ್ಲಿ ಅಲೆಯಲು ಬಿಡಬಾರದೆಂದು ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.

ಈ ವಿಚಾರ ಎಲ್ಲೆಡೆ ಸುದ್ದಿಯಾದ ಬಳಿಕ ಎಚ್ಚೆತ್ತುಕೊಂಡ ಅನ್ವರ್ ಗಂಜ್ ಪೊಲೀಸ್ ಠಾಣೆಯ ಸರ್ಕಲ್ ಆಫೀಸರ್ ಸೈಫುದ್ದಿನ್ ಬೇಗ್ ಹೇಳಿರುವ ಪ್ರಕಾರ ಮೇಕೆಯನ್ನು ಯುವಕನೊಬ್ಬ ಎತ್ತಿಕೊಂಡು ಹೋಗುತ್ತಿದ್ದು, ಪೊಲೀಸರನ್ನು ಕಂಡ ಬಳಿಕ ಸ್ಥಳದಲ್ಲಿಯೇ ಮೇಕೆಯನ್ನು ಬಿಟ್ಟು ಪರಾರಿಯಾಗಿದ್ದಾನೆ. ಹೀಗಾಗಿ ಮೇಕೆಯನ್ನು ಪೊಲೀಸ್ ಠಾಣೆಗೆ ತಂದು ರಕ್ಷಣೆ ನೀಡಿದೆವು ಎಂದಿದ್ದಾರೆ.

ಮೇಕೆಯನ್ನು ಠಾಣೆಗೆ ಕರೆತಂದ ಪೊಲೀಸ್ ಒಬ್ಬರು ಮೇಕೆ ಮಾಸ್ಕ್ ಧರಿಸದೆ ಬೀದಿಯಲ್ಲಿ ಓಡಾಡಿ ಲಾಕ್ ಡೌನ್ ನಿಯಮ ಉಲ್ಲಂಘಿಸಿದೆ. ಹಾಗಾಗಿ ಠಾಣೆಗೆ ಕರೆದುಕೊಂಡು ಬಂದಿದ್ದೇವೆ ಎಂದಿದ್ದರು. ಜೊತೆಗೆ ಇತ್ತೀಚಿನ ದಿನಗಳಲ್ಲಿ ನಾಯಿಗಳ ಮಾಲೀಕರು ತಮ್ಮ ನಾಯಿಗಳಿಗೆ ಮಾಸ್ಕ್ ವ್ಯವಸ್ಥೆ ಮಾಡಲಾಗಿದ್ದು, ಮೇಕೆಗಳಿಗ್ಯಾಕೆ ಮಾಸ್ಕ್ ವ್ಯವಸ್ಥೆ ಮಾಡಬಾರದು ಎಂದು ಪ್ರಶ್ನೆ ಮಾಡಿದ್ದರು. ಆದರೆ ಸಾಮಾಜಿಕ ತಾಣಗಳಲ್ಲಿ ಇದು ವೈರಲ್ ಆದ ಕಾರಣ ಈಗ ತಮ್ಮ ಹೇಳಿಕೆಯನ್ನು ಬದಲಾಯಿಸಿದ್ದಾರೆ.

Published On - 3:31 pm, Mon, 27 July 20

Follow Us
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು