AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಮೇಶ್ ಪಾಲ್ ಹತ್ಯೆ ಪ್ರಕರಣ: ಗ್ಯಾಂಗ್​ಸ್ಟರ್ ಗುಡ್ಡು ಮುಸ್ಲಿಂ ಮನೆ ಜಪ್ತಿ ಮಾಡಿದ ಪೊಲೀಸರು

ಉಮೇಶ್ ಪಾಲ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ, ಹತ್ಯೆಗೀಡಾದ ಗ್ಯಾಂಗ್​ಸ್ಟರ್ ಅತೀಕ್ ಅಹ್ಮದ್ ಅವರ ಸಹಾಯಕ ಗುಡ್ಡು ಮುಸ್ಲಿಂ ಮನೆಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಎಸಿಪಿ (ಧುಮಂಗಂಜ್) ವರುಣ್ ಕುಮಾರ್ ಪ್ರಕಾರ, ಆರೋಪಿಗೆ ಸೇರಿದ ಮನೆ ಮತ್ತು ಅಲ್ಲಿ ಇರಿಸಲಾಗಿದ್ದ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಉಮೇಶ್ ಪಾಲ್ ಹತ್ಯೆ ಪ್ರಕರಣ: ಗ್ಯಾಂಗ್​ಸ್ಟರ್ ಗುಡ್ಡು ಮುಸ್ಲಿಂ ಮನೆ ಜಪ್ತಿ ಮಾಡಿದ ಪೊಲೀಸರು
ಗುಡ್ಡು ಮುಸ್ಲಿಂ
ನಯನಾ ರಾಜೀವ್
|

Updated on: Dec 27, 2023 | 8:35 AM

Share

ಉಮೇಶ್ ಪಾಲ್(Umesh Pal) ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ, ಹತ್ಯೆಗೀಡಾದ ಗ್ಯಾಂಗ್​ಸ್ಟರ್ ಅತೀಕ್ ಅಹ್ಮದ್  ಸಹಾಯಕ ಗುಡ್ಡು ಮುಸ್ಲಿಂ( Guddu Muslim) ಮನೆಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಎಸಿಪಿ (ಧುಮಂಗಂಜ್) ವರುಣ್ ಕುಮಾರ್ ಪ್ರಕಾರ, ಆರೋಪಿಗೆ ಸೇರಿದ ಮನೆ ಮತ್ತು ಅಲ್ಲಿ ಇರಿಸಲಾಗಿದ್ದ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಈ ಹಿಂದೆಯೂ ಸಹ ಪೊಲೀಸ್ ತಂಡ ಅಲ್ಲಿಗೆ ಹೋಗಿತ್ತು, ಆದರೆ ಮನೆಗೆ ಪ್ರಯಾಗ್ರಾಜ್ ಅಭಿವೃದ್ಧಿ ಪ್ರಾಧಿಕಾರ (ಪಿಡಿಎ) ಸೀಲ್ ಮಾಡಿರುವುದು ಕಂಡುಬಂದಿದೆ. ಇಂದು ಪಿಡಿಎ ತಂಡದ ಸಮನ್ವಯದಲ್ಲಿ ಮನೆ ತೆರೆಯಲಾಗಿದೆ ಎಂದರು.

ಇಲ್ಲಿಯವರೆಗೆ, ನಾಲ್ವರು ಆರೋಪಿಗಳ ವಿರುದ್ಧ ಕ್ರಮ ಕೈಗೊಂಡಿದ್ದು, ಇತರ ಇಬ್ಬರು ಆರೋಪಿಗಳಾದ ಅತೀಕ್ ಅಹ್ಮದ್ ಅವರ ಪತ್ನಿ ಶೈಸ್ತಾ ಪರ್ವೀನ್ ಮತ್ತು ಅರ್ಮಾನ್ ವಿರುದ್ಧ ಮೂರ್ನಾಲ್ಕು ದಿನಗಳಲ್ಲಿ ವಿಚಾರಣೆಯನ್ನು ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಉಮೇಶ್ ಪಾಲ್ ಅವರ ಮೇಲೆ ನಡೆದ ಮಾರಣಾಂತಿಕ ದಾಳಿಯ ವೇಳೆ ಗುಡ್ಡು ಮುಸ್ಲಿಂ ಬಾಂಬ್ ಎಸೆದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ . ಬಿಎಸ್ಪಿ ಶಾಸಕ ರಾಜುಪಾಲ್ ಹತ್ಯೆ ಪ್ರಕರಣದ ಪ್ರಮುಖ ಸಾಕ್ಷಿ ಉಮೇಶ್ ಪಾಲ್ ಅವರನ್ನು ಫೆಬ್ರವರಿ 25, 2023 ರಂದು ಹಾಡಹಗಲೇ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಘಟನೆಯಿಂದ ಗುಡ್ಡು ಮುಸ್ಲಿಂ ತಲೆಮರೆಸಿಕೊಂಡಿದ್ದಾನೆ.

ಮತ್ತಷ್ಟು ಓದಿ: ಗುಡ್ಡು ಮುಸ್ಲಿಂ, ಅತಿಕ್ ಅಹ್ಮದ್ ಪತ್ನಿ ಶೈಸ್ತಾರನ್ನು ಶೀಘ್ರದಲ್ಲೇ ಬಂಧಿಸಲಾಗುವುದು: ಯುಪಿ ಪೊಲೀಸ್

ಉಮೇಶ್ ಪಾಲ್ ಅವರ ಪತ್ನಿ ಜಯಪಾಲ್ ಅವರ ದೂರಿನ ಮೇರೆಗೆ ಧುಮನಗಂಜ್ ಪೊಲೀಸ್ ಠಾಣೆಯಲ್ಲಿ ಮಾಫಿಯಾ ಅತೀಕ್ ಅಹ್ಮದ್, ಆತನ ಸಹೋದರ ಅಶ್ರಫ್, ಶೈಸ್ತಾ ಪರ್ವೀನ್, ಅತೀಕ್ ಅವರ ಇಬ್ಬರು ಪುತ್ರರು, ಗುಡ್ಡು ಮುಸ್ಲಿಂ, ಗುಲಾಮ್ ಮತ್ತು ಇತರ ಒಂಬತ್ತು ಸಹಚರರ ವಿರುದ್ಧ ಪ್ರಕರಣ ದಾಖಲಾಗಿದೆ.

ಉಮೇಶ್ ಪಾಲ್ ಕೊಲೆ ಪ್ರಕರಣ ಸೇರಿದಂತೆ 100 ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಲ್ಲಿ ಹೆಸರಿಸಲಾದ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅವರನ್ನು ಈ ವರ್ಷದ ಏಪ್ರಿಲ್ 15 ರಂದು ಪ್ರಯಾಗರಾಜ್‌ನ ಕ್ಯಾಲ್ವಿನ್ ಆಸ್ಪತ್ರೆಯ ಹೊರಗೆ ಗುಂಡಿಕ್ಕಿ ಕೊಲ್ಲಲಾಯಿತು. ಅತೀಕ್ ಅವರ ಪತ್ನಿ ಶಾಹಿಸ್ತಾ ಪರ್ವೀನ್ ಮತ್ತು ಅಶ್ರಫ್ ಅವರ ಪತ್ನಿ ಜೈನಾಬ್ ತಲೆಮರೆಸಿಕೊಂಡಿರುವವರಲ್ಲಿ ಸೇರಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ