AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಮತ್ತವರ ಸೋದರನ ವಿರುದ್ಧ ಕಳ್ಳತನದ ಆರೋಪ; ಠಾಣೆಯಲ್ಲಿ ದೂರು ದಾಖಲು

ವಂಚನೆ ಪ್ರಕರಣದಡಿ ಸುವೇಂದು ಅಧಿಕಾರಿ ಆಪ್ತಸಹಾಯಕನೊಬ್ಬನನ್ನು ಕೋಲ್ಕತ್ತ ಪೊಲೀಸರು ಬಂಧಿಸಿದ್ದರು. ಅದೇ ದಿನ ಸುವೇಂದು ಮತ್ತು ಸೌಮೇಂದು ವಿರುದ್ಧ ಕೂಡ ದೂರು ದಾಖಲಾಗಿದೆ.

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಮತ್ತವರ ಸೋದರನ ವಿರುದ್ಧ ಕಳ್ಳತನದ ಆರೋಪ; ಠಾಣೆಯಲ್ಲಿ ದೂರು ದಾಖಲು
ಸುವೇಂದು ಅಧಿಕಾರಿ
TV9 Web
| Edited By: |

Updated on: Jun 06, 2021 | 9:38 AM

Share

ಕೋಲ್ಕತ್ತ: ಬಿಜೆಪಿ ಮುಖಂಡ (ಟಿಎಂಸಿ ಮಾಜಿ ನಾಯಕ) ಸುವೇಂದು ಅಧಿಕಾರಿ ಮತ್ತು ಅವರ ಸೋದರನ ವಿರುದ್ಧ ಕಳ್ಳತನದ ಆರೋಪ ದಾಖಲಾಗಿದೆ. ಇವರಿಬ್ಬರೂ ಪಶ್ಚಿಮಬಂಗಾಳದ ಕಾಂತಿ ಪುರಸಭಾ ಕಚೇರಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಪರಿಹಾರ ಸಾಮಗ್ರಿಗಳನ್ನು ಕದ್ದಿದ್ದಾರೆ ಎಂಬ ಆರೋಪದಡಿ ಪೊಲೀಸ್​ ಕೇಸ್​ ದಾಖಲಾಗಿದೆ. ಕೋಲ್ಕತ್ತದಿಂದ 150 ಕಿಮೀ ದೂರದಲ್ಲಿರುವ ಕಾಂತಿ ಪುರಸಭೆ ಆಡಳಿತ ಮಂಡಳಿ ಸದಸ್ಯ ರತ್ನದೀಪ್​ ಮನ್ನಾ ನೀಡಿದ ದೂರಿನ ಅನ್ವಯ ಕಾಂರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುವೇಂದು ಅಧಿಕಾರಿಯವರ ಸೋದರ ಸೌಮೇಂದು ಅಧಿಕಾರಿ ಈ ಪುರಸಭೆಯ ಮಾಜಿ ಮುಖ್ಯಸ್ಥರಾಗಿದ್ದರು. ಇವರಿಬ್ಬರೂ ಸೇರಿ ಮೇ 29ರಂದು ಮಧ್ಯಾಹ್ನ 12.30ರ ಹೊತ್ತಿಗೆ ಪುರಸಭೆಯ ಗೋಡೌನ್​ನ್ನು ಅಕ್ರಮವಾಗಿ ತೆರೆದು, ಅಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಟ್ರೈಪಲ್​​ಗಳನ್ನು ಕದ್ದಿದ್ದಾರೆ. ಗೋದಾಮಿನ ಬಾಗಿಲನ್ನು ಬಲವಂತವಾಗಿ, ಕಾನೂನು ಬಾಹಿರವಾಗಿ ತೆರೆಯಲಾಯಿತು ಎಂದೂ ರತ್ನದೀಪ್​ ಮನ್ನಾ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇನ್ನು ಈ ಕಳ್ಳತನ ಮಾಡುವಾಗ ಬಿಜೆಪಿ ನಾಯಕರು ಕೇಂದ್ರ ಸಶಸ್ತ್ರಪಡೆಗಳ ಬಳಕೆ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಜೂ.1ರಂದು ಈ ದೂರು ನೀಡಲ್ಪಟ್ಟಿದೆ.

ವಂಚನೆ ಪ್ರಕರಣದಡಿ ಸುವೇಂದು ಅಧಿಕಾರಿ ಆಪ್ತಸಹಾಯಕನೊಬ್ಬನನ್ನು ಕೋಲ್ಕತ್ತ ಪೊಲೀಸರು ಬಂಧಿಸಿದ್ದರು. ಅದೇ ದಿನ ಸುವೇಂದು ಮತ್ತು ಸೌಮೇಂದು ವಿರುದ್ಧ ಕೂಡ ದೂರು ದಾಖಲಾಗಿದೆ. ರಾಖಲ್​ ಭೇರಾ ಬಂಧಿತನಾಗಿದ್ದು, ಈತ 2019ರಲ್ಲಿ ವ್ಯಕ್ತಿಯೋರ್ವನಿಗೆ, ನೀರಾವರಿ ಮತ್ತು ಜಲಸಂಪನ್ಮೂಲ ಸಚಿವಾಲಯದಲ್ಲಿ ಕೆಲಸ ಕೊಡಿಸುತ್ತೇನೆ ಎಂದು ಸುಮಾರು 2 ಲಕ್ಷ ರೂ. ಪಡೆದಿದ್ದರು. ಆದರೆ ನಂತರ ಅವರು ಕೆಲಸ ಕೊಡಿಸಿರಲಿಲ್ಲ ಎಂಬ ಆರೋಪದಡಿ ಈತನ ವಿರುದ್ಧ ದೂರು ದಾಖಲಾಗಿತ್ತು.

ಸುವೇಂದು ಅಧಿಕಾರಿ ನವೆಂಬರ್​​ವರೆಗೆ ಮಮತಾ ಬ್ಯಾನರ್ಜಿಯವರ ಕ್ಯಾಬಿನೆಟ್​​ನಲ್ಲಿ ಸಚಿವರಾಗಿದ್ದರು. ಆದರೆ 2020ರ ಡಿಸೆಂಬರ್​​ನಲ್ಲಿ ಬಿಜೆಪಿ ಸೇರ್ಪಡೆಯಾಗಿ, ನಂದಿಗ್ರಾಮದಲ್ಲಿ ಗೆದ್ದು, ಇದೀಗ ಪಶ್ಚಿಮ ಬಂಗಾಳ ಪ್ರತಿಪಕ್ಷ ನಾಯಕರಾಗಿದ್ದಾರೆ.

ಇದನ್ನೂ ಓದಿ: Karnataka SSLC 2nd PUC Exam 2021: ಎಸ್ಎಸ್ಎಲ್ಸಿ, ಪಿಯುಸಿ ರಿಪೀಟರ್ಸ್ಗೆ ಟೆನ್ಷನ್ ಶುರು, ಶಿಕ್ಷಣ ಇಲಾಖೆಯಿಂದ ಮತ್ತೊಂದು ನಿರ್ಧಾರ

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ