AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಯಕ ಕೆಕೆ ಕೊನೆಯ ಕಾರ್ಯಕ್ರಮದ ಫೇಸ್​ಬುಕ್​ ಲೈವ್​ನಲ್ಲಿ ಮಮತಾ ಬ್ಯಾನರ್ಜಿಯನ್ನು ನಿಂದಿಸಿದ್ದ ವಿಡಿಯೋ ಬ್ಲಾಗರ್​; ಪ್ರಕರಣ ದಾಖಲು

Singer KK Death | Mamata Banerjee: ಗಾಯಕ ಕೆಕೆ ಹಾಡಿದ ಕೊನೆಯ ಕಾರ್ಯಕ್ರಮದ ಲೈವ್​ನಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ನಿಂದಿಸಿದ ಆರೋಪದ ಮೇಲೆ ವಿಡಿಯೋ ಬ್ಲಾಗರ್​ ಓರ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.​

ಗಾಯಕ ಕೆಕೆ ಕೊನೆಯ ಕಾರ್ಯಕ್ರಮದ ಫೇಸ್​ಬುಕ್​ ಲೈವ್​ನಲ್ಲಿ ಮಮತಾ ಬ್ಯಾನರ್ಜಿಯನ್ನು ನಿಂದಿಸಿದ್ದ ವಿಡಿಯೋ ಬ್ಲಾಗರ್​; ಪ್ರಕರಣ ದಾಖಲು
ಮಮತಾ ಬ್ಯಾನರ್ಜಿ
TV9 Web
| Updated By: shivaprasad.hs|

Updated on:Jun 05, 2022 | 12:09 PM

Share

ಖ್ಯಾತ ಗಾಯಕ ಕೆಕೆ (Singer KK) ಎಂದೇ ಜನಪ್ರಿಯರಾಗಿದ್ದ ಕೃಷ್ಣಕುಮಾರ್ ಕುನ್ನತ್ ಇತ್ತೀಚೆಗೆ ಕೋಲ್ಕತ್ತಾದಲ್ಲಿ ನಡೆದ ಸಂಗೀತ ಕಾರ್ಯಕ್ರಮದ ನಂತರ ನಿಧನರಾಗಿದ್ದರು. ಆ ಕಾರ್ಯಕ್ರಮದ ಲೈವ್​ನಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅವರನ್ನು ನಿಂದಿಸಿದ ಆರೋಪದ ಮೇಲೆ ವಿಡಿಯೋ ಬ್ಲಾಗರ್​ ಓರ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.​ಮಮತಾ ಬ್ಯಾನರ್ಜಿ ಅವರನ್ನು ಫೇಸ್‌ಬುಕ್ ಲೈವ್‌ನಲ್ಲಿ ನಿಂದಿಸಿದ ಆರೋಪದ ಮೇಲೆ ರೊದ್ದೂರ್ ರಾಯ್ ವಿರುದ್ಧ ಶನಿವಾರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ತೃಣಮೂಲ ವಕ್ತಾರ ರಿಜು ದತ್ತಾ ಅವರು ಚಿತ್ಪುರ್ ಪೊಲೀಸ್ ಠಾಣೆಯಲ್ಲಿ ವಿಡಿಯೋ ಬ್ಲಾಗರ್​​ ಹಾಕಿದ್ದ ಕಾಮೆಂಟ್ ವಿರುದ್ಧ ದೂರು ದಾಖಲಿಸಿದ್ದರು. ನಂತರ ಐಪಿಸಿಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತನಿಖೆಯ ಭಾಗವಾಗಿ ರೊದ್ದೂರ್ ರಾಯ್​ಗೆ ಸಮನ್ಸ್​ ನೀಡಲಾಗಿದೆ.

ವಿಡಿಯೋ ಬ್ಲಾಗರ್ ಆಗಿರುವ ರೊದ್ದೂರ್ ರಾಯ್ ಈ ಹಿಂದೆಯೂ ತಮ್ಮ ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ಟಿಎಂಸಿ ನಾಯಕರ ವಿರುದ್ಧ ಸ್ಫೋಟಕ ಹೇಳಿಕೆಗಳನ್ನು ನೀಡಿ ವಿವಾದ ಸೃಷ್ಟಿಸುತ್ತಿದ್ದರು. ಕೆಕೆ ಅವರ ಕೊನೆಯ​​ ಕಾರ್ಯಕ್ರಮದ ಫೇಸ್​ಬುಕ್​ ಲೈವ್​ನಲ್ಲಿ ಅವರು ಆಕ್ಷೇಪಾರ್ಹ ಕಾಮೆಂಟ್​ಗಳನ್ನು ಮಾಡಿದ್ದರು ಎಂದು ಆರೋಪಿಸಲಾಗಿದೆ. ಕೆಕೆ ಅವರ ನಿಧನಕ್ಕೆ ಮಮತಾ ನೇತೃತ್ವದ ಸರ್ಕಾರವನ್ನು ದೂಷಿಸಿ ಅವರು ಕಾಮೆಂಟ್ ಹಾಕಿದ್ದರು. ಅಲ್ಲದೇ ಮಮತಾ ಬ್ಯಾನರ್ಜಿ ವಿರುದ್ಧವೂ ಆರೋಪಿಸಿದ್ದರು.

ಇದನ್ನೂ ಓದಿ: KK Death: ಸಾವಿಗಿಂತ ಕೆಲವೇ ನಿಮಿಷಗಳ ಮುನ್ನ ವೇದಿಕೆ ತೊರೆದಿದ್ದ ಗಾಯಕ ಕೆಕೆ; ಇಲ್ಲಿದೆ ವೈರಲ್​ ವಿಡಿಯೋ

ಇದನ್ನೂ ಓದಿ
Image
ಸಿದ್ದರಾಮಯ್ಯ ಆರ್​ಎಸ್​ಎಸ್​ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ: ಸಿಎಂ ಬಸವರಾಜ ಬೊಮ್ಮಾಯಿ
Image
Russia-Ukraine War: ಉಕ್ರೇನ್​ನ ರಾಜಧಾನಿ ಕೀವ್​ನ ಕೆಲವೆಡೆ ಮತ್ತೆ ಬಾಂಬ್ ಸ್ಫೋಟ
Image
ಅಮೇರಿಕಾದಲ್ಲಿ ಹೆಚ್ಚುತ್ತಿದೆ ಶೂಟೌಟ್ ಪ್ರಕರಣ; ಗ್ಯಾಸ್​​ ಸ್ಟೇಷನ್​ನಲ್ಲಿ ಗುಂಡು ಹಾರಿಸಿ ದರೋಡೆ ಮಾಡಿದ 12 ವರ್ಷದ ಬಾಲಕ
Image
Jersey Movie: ರಿಮೇಕ್​ ಮಾಡಿ ಕೈ ಸುಟ್ಟುಕೊಂಡ ಬಳಿಕ ಶಾಹಿದ್ ಕಪೂರ್​ಗೆ ಜ್ಞಾನೋದಯ; ಸ್ಟಾರ್ ನಟ ಈಗ ಹೇಳಿದ್ದೇನು?

ಕೆಕೆ ಅವರು ತಮ್ಮ ಕೊನೆಯ ಕಾರ್ಯಕ್ರಮದಲ್ಲಿ ಕಿಕ್ಕಿರಿದು ತುಂಬಿದ್ದ ಸಭೆಯಲ್ಲಿ ಕಾರ್ಯಕ್ರಮ ನೀಡಿದ್ದರು. ಅಲ್ಲಿ ಅವರು ಧಗೆಗೆ ತತ್ತರಿಸಿ ಈ ಬಗ್ಗೆ ಆಯೋಜಕರಲ್ಲಿ ದೂರಿದ್ದರು ಎಂದು ವರದಿಯಾಗಿತ್ತು. ಪೊಲೀಸರು ತಮ್ಮ ಹೇಳಿಕೆಯಲ್ಲಿ ಕಾರ್ಯಕ್ರಮದಲ್ಲಿ ಜನರಿಗೆ ಸ್ಥಳಾವಕಾಶದ ಕೊರತೆಯಿರಲಿಲ್ಲ. ಹಾಗೆಯೇ ಕೆಕೆ ಅವರನ್ನು ಜನರು ಮುತ್ತದಂತೆ ವ್ಯವಸ್ಥೆ ಮಾಡಲಾಗಿತ್ತು ಎಂದು ಸ್ಪಷ್ಟನೆ ನೀಡಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:01 pm, Sun, 5 June 22

ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಆರ್​ಟಿಒ ದಂಡ ವಿಧಿಸಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಟ್ರಕ್ ಚಾಲಕ
ಆರ್​ಟಿಒ ದಂಡ ವಿಧಿಸಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಟ್ರಕ್ ಚಾಲಕ