AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಬಂಧಿತ ಸಂಸದೆ ನವನೀತ್​ ರಾಣಾ ಆರೋಪಕ್ಕೆ ವಿಡಿಯೋ ಮೂಲಕ ತಿರುಗೇಟು ಕೊಟ್ಟ ಮುಂಬೈ ಪೊಲೀಸ್​ ಆಯುಕ್ತ ಸಂಜಯ್ ಪಾಂಡೆ

ಮಹಾರಾಷ್ಟ್ರದ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಸುದ್ದಿಗೋಷ್ಠಿ ನಡೆಸಿ, ಹನುಮಾನ್ ಚಾಲೀಸಾ ಪಠಿಸುವುದು ಅಷ್ಟು ದೊಡ್ಡ ಅಪರಾಧವಾಗಿದ್ದರೆ, ದೇಶದ್ರೋಹವಾಗಿದ್ದರೆ, ನಮ್ಮೆಲ್ಲರನ್ನೂ ಬಂಧಿಸಲಿ ಎಂದು ಹೇಳಿದ್ದರು.

Video: ಬಂಧಿತ ಸಂಸದೆ ನವನೀತ್​ ರಾಣಾ ಆರೋಪಕ್ಕೆ ವಿಡಿಯೋ ಮೂಲಕ ತಿರುಗೇಟು ಕೊಟ್ಟ ಮುಂಬೈ ಪೊಲೀಸ್​ ಆಯುಕ್ತ ಸಂಜಯ್ ಪಾಂಡೆ
ಪೊಲೀಸ್ ಮುಖ್ಯಸ್ಥ ಬಿಡುಗಡೆ ಮಾಡಿದ ವಿಡಿಯೋದಲ್ಲಿರುವ ದೃಶ್ಯ
TV9 Web
| Edited By: |

Updated on:Apr 26, 2022 | 4:31 PM

Share

ಮಹಾರಾಷ್ಟ್ರ ಸ್ವತಂತ್ರ ಸಂಸದೆ ನವನೀತ್​ ರಾಣಾ ಮತ್ತು ಆಕೆಯ ಪತಿ ಶಾಸಕ ರವಿ ರಾಣಾ ಬಂಧನವಾಗಿದೆ. ಸದ್ಯ ಅವರು ಪ್ರತ್ಯೆಕ ಜೈಲಿನಲ್ಲಿ ಇದ್ದಾರೆ. ಇವರಿಬ್ಬರೂ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮನೆಯ ಹೊರಗೆ ಹನುಮಾನ್ ಚಾಲೀಸಾ ಪಠಿಸುವುದಾಗಿ ಹೇಳಿದ್ದ ಹಿನ್ನೆಲೆಯಲ್ಲಿ ಅರೆಸ್ಟ್ ಮಾಡಲಾಗಿದೆ. ಈ ದಂಪತಿ ವಿರುದ್ಧ ದೇಶದ್ರೋಹ ಕಾಯ್ದೆಯಡಿ ಕೇಸ್ ದಾಖಲಾಗಿದೆ. ಇದೆಲ್ಲದರ ಮಧ್ಯೆ ನವನೀತ್​ ರಾಣಾ ಪೊಲೀಸರ ವಿರುದ್ಧ ಆರೋಪ ಮಾಡಿದ್ದರು. ಪೊಲೀಸರು ತನ್ನನ್ನು ಬಂಧಿಸಿ ಕರೆದುಕೊಂಡು ಹೋದ ಬಳಿಕ ನನ್ನೊಂದು ಅಮಾನವೀಯವಾಗಿ ವರ್ತಿಸಿದ್ದಾರೆ. ಹೀಗಾಗಿ ಪೊಲೀಸ್ ಮುಖ್ಯಸ್ಥ ಸಂಜಯ್​ ಪಾಂಡೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದೂ ಹೇಳಿದ್ದರು. ನವನೀತ್​ ರಾಣಾ ಆರೋಪ ಮಾಡಿದ ಬೆನ್ನಲ್ಲೇ, ಈ ಬಗ್ಗೆ ವರದಿ ನೀಡುವಂತೆ ಮಹಾರಾಷ್ಟ್ರ ಪೊಲೀಸರಿಗೆ ಕೇಂದ್ರ ಗೃಹ ಸಚಿವಾಲಯ ಸೂಚಿಸಿದೆ.

ಆದರೆ ನವನೀತ್​ ರಾಣಾ ಆರೋಪವನ್ನು ಮುಂಬೈ ಪೊಲೀಸ್ ಮುಖ್ಯಸ್ಥ ಸಂಜಯ್ ಪಾಂಡೆ ಖಂಡಿಸಿದ್ದಾರೆ. ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿರುವ ಅವರು, ನಾನೇನೂ ಹೇಳುವುದಿಲ್ಲ. ಎಲ್ಲವನ್ನೂ ಈ ವಿಡಿಯೋವೇ ಹೇಳುತ್ತದೆ ಎಂದಿದ್ದಾರೆ. ಅದರಲ್ಲಿ ನವನೀತ್ ರಾಣಾ ಮತ್ತು ಆಕೆಯ ಪತಿ ಇಬ್ಬರೂ ಪೊಲೀಸ್​ ಸ್ಟೇಶನ್​​ನಲ್ಲಿ ಆರಾಮಾಗಿ ಕುಳಿತು, ಟೀ ಕುಡಿಯುತ್ತಿರುವ ದೃಶ್ಯವಿದೆ.

ಹಾಗೇ, ಹನುಮಾನ್​ ಚಾಲೀಸಾ ಪಠಿಸುತ್ತೇನೆ ಎಂದು ಹೇಳಿದ್ದಕ್ಕೆ ಈ ರಾಜಕಾರಣಿ ದಂಪತಿಯನ್ನು ಬಂಧಿಸಿದ್ದಕ್ಕೆ ಬಿಜೆಪಿ ಕೂಡ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.  ಮಹಾರಾಷ್ಟ್ರದ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಸುದ್ದಿಗೋಷ್ಠಿ ನಡೆಸಿ, ಹನುಮಾನ್ ಚಾಲೀಸಾ ಪಠಿಸುವುದು ಅಷ್ಟು ದೊಡ್ಡ ಅಪರಾಧವಾಗಿದ್ದರೆ, ದೇಶದ್ರೋಹವಾಗಿದ್ದರೆ, ನಮ್ಮೆಲ್ಲರನ್ನೂ ಬಂಧಿಸಲಿ ಎಂದು ಹೇಳಿದ್ದರು. ಇನ್ನೊಂದೆಡೆ ಎನ್​ಸಿಪಿ ನಾಯಕಿ ಫಹ್ಮಿದಾ ಹಸನ್ ಖಾನ್ ಪ್ರಧಾನಿ ಅಮಿತ್ ಶಾ ಅವರಿಗೆ ಪತ್ರ ಬರೆದು, ತಾನು ಪ್ರಧಾನಿ ನಿವಾಸದ ಎದುರು ನಮಾಜ್ ಮಾಡಲು, ಹನುಮಾನ್ ಚಾಲೀಸಾ ಪಠಿಸಲು ಬಯಸುತ್ತೇನೆ ಅನುಮತಿ ಕೊಡಿ ಎಂದು ಕೇಳಿದ್ದಾರೆ.

ಇದನ್ನೂ ಓದಿ:  Heatwave: ಭಾರತದಲ್ಲಿ ತೀವ್ರಗೊಳ್ಳುತ್ತಿದೆ ಉಷ್ಣ ಅಲೆ; ತಾಪಮಾನ ಏರಿಕೆಯಿಂದ ಅಪಾಯ ಕಟ್ಟಿಟ್ಟ ಬುತ್ತಿ

Published On - 4:27 pm, Tue, 26 April 22

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್