AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Police Commemoration Day 2021 ಕರ್ತವ್ಯದಲ್ಲಿ ಮೃತಪಟ್ಟ ಪೊಲೀಸ್ ಸಿಬ್ಬಂದಿಗೆ ಗೌರವ ನಮನ ಸಲ್ಲಿಸಿದ ನರೇಂದ್ರ ಮೋದಿ

ಪೊಲೀಸ್ ಸ್ಮರಣಾರ್ಥ ದಿನ ಸಂದರ್ಭದಲ್ಲಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಮತ್ತು ಅಗತ್ಯ ಸಮಯದಲ್ಲಿ ಇತರರಿಗೆ ಸಹಾಯ ಮಾಡುವಲ್ಲಿ ನಮ್ಮ ಪೊಲೀಸ್ ಪಡೆಗಳ ಅತ್ಯುತ್ತಮ ಪ್ರಯತ್ನಗಳನ್ನು ನಾನು ಶ್ಲಾಘಿಸುತ್ತೇನೆ ಎಂದು ಮೋದಿ ಟ್ವೀಟ್.

Police Commemoration Day 2021 ಕರ್ತವ್ಯದಲ್ಲಿ ಮೃತಪಟ್ಟ ಪೊಲೀಸ್ ಸಿಬ್ಬಂದಿಗೆ ಗೌರವ ನಮನ ಸಲ್ಲಿಸಿದ ನರೇಂದ್ರ ಮೋದಿ
ನರೇಂದ್ರ ಮೋದಿ
TV9 Web
| Edited By: |

Updated on: Oct 21, 2021 | 11:12 AM

Share

ದೆಹಲಿ: ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಮತ್ತು ಅಗತ್ಯ ಸಮಯದಲ್ಲಿ ರಾಷ್ಟ್ರಕ್ಕೆ ನೆರವಾಗಲು ಪೊಲೀಸ್ ಪಡೆಗಳ ಅತ್ಯುತ್ತಮ ಪ್ರಯತ್ನಗಳಿಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಗುರುವಾರ ಪೊಲೀಸರನ್ನು ಶ್ಲಾಘಿಸಿದ್ದಾರೆ. ಪೊಲೀಸ್-ಸ್ಮರಣಾರ್ಥ ದಿನದ (Police Commemoration Day) ಸಂದರ್ಭದಲ್ಲಿ ಕರ್ತವ್ಯದಲ್ಲಿ ಪ್ರಾಣ ಕಳೆದುಕೊಂಡ ಎಲ್ಲ ಪೊಲೀಸ್ ಸಿಬ್ಬಂದಿಗೆ ಪ್ರಧಾನಿ ಮೋದಿ ಗೌರವ ನಮನ ಸಲ್ಲಿಸಿದರು.  ಪೊಲೀಸ್ ಸ್ಮರಣಾರ್ಥ ದಿನ ಸಂದರ್ಭದಲ್ಲಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಮತ್ತು ಅಗತ್ಯ ಸಮಯದಲ್ಲಿ ಇತರರಿಗೆ ಸಹಾಯ ಮಾಡುವಲ್ಲಿ ನಮ್ಮ ಪೊಲೀಸ್ ಪಡೆಗಳ ಅತ್ಯುತ್ತಮ ಪ್ರಯತ್ನಗಳನ್ನು ನಾನು ಶ್ಲಾಘಿಸುತ್ತೇನೆ. ಕರ್ತವ್ಯದಲ್ಲಿ ಪ್ರಾಣ ಕಳೆದುಕೊಂಡ ಎಲ್ಲ ಪೊಲೀಸ್ ಸಿಬ್ಬಂದಿಗೆ ನಾನು ಗೌರವ ಸಲ್ಲಿಸುತ್ತೇನೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

1959 ರಲ್ಲಿ ಚೀನಾ ಸೈನಿಕರೊಂದಿಗೆ ಹೋರಾಡುವಾಗ ಲಡಾಖ್‌ನ ಹಾಟ್ ಸ್ಪ್ರಿಂಗ್ಸ್‌ನಲ್ಲಿ ಕೊಲ್ಲಲ್ಪಟ್ಟ ಸಿಆರ್‌ಪಿಎಫ್ ಸಿಬ್ಬಂದಿಯ ನೆನಪಿಗಾಗಿ ಪ್ರತಿ ವರ್ಷ ಅಕ್ಟೋಬರ್ 21 ರಂದು ಪೊಲೀಸ್ ಸ್ಮರಣಾರ್ಥ ದಿನವನ್ನು ಆಚರಿಸಲಾಗುತ್ತದೆ.

ಪೊಲೀಸ್ ಸ್ಮರಣಾರ್ಥ ದಿನದಂದು, ಕರ್ತವ್ಯಕ್ಕಾಗಿ ದೇಶಕ್ಕಾಗಿ ಪ್ರಾಣ ಕಳೆದುಕೊಂಡ ಕೆಚ್ಚೆದೆಯ ಹೃದಯಗಳಿಗೆ ನಾವು ಗೌರವ ಸಲ್ಲಿಸುತ್ತೇವೆ. ಅವರ ತ್ಯಾಗವನ್ನು ರಾಷ್ಟ್ರ ಎಂದಿಗೂ ಮರೆಯುವುದಿಲ್ಲ, ”ಎಂದು ಭಾರತೀಯ ಪೊಲೀಸ್ ಸೇವೆ (ಕೇಂದ್ರ) ಅಸೋಸಿಯೇಷನ್ ಗುರುವಾರ ಟ್ವೀಟ್ ಮಾಡಿದೆ.

ಇತಿಹಾಸ ಅಕ್ಟೋಬರ್ 21, 1959 ರಂದು ಚೀನಾದ ಸೈನ್ಯದೊಂದಿಗೆ ಹೋರಾಡುತ್ತಿದ್ದಾಗ ಪ್ರಾಣ ಕಳೆದುಕೊಂಡ 10 ಪೊಲೀಸ್ ಸಿಬ್ಬಂದಿಯ ಅಂತಿಮ ತ್ಯಾಗವನ್ನು ಪೊಲೀಸ್ ಸ್ಮರಣಾರ್ಥ ದಿನವು ನೆನಪಿಸುತ್ತದೆ. ಚೀನಾದ ಸೇನೆಯು ಭಾರತೀಯ ಪೊಲೀಸ್ ಪಡೆ ಮೇಲೆ ಗುಂಡು ಹಾರಿಸಿತು ಮತ್ತು ಗ್ರೆನೇಡ್‌ಗಳನ್ನು ಎಸೆದಿದೆ, ಇದರಲ್ಲಿ 20 ಸಿಬ್ಬಂದಿ ಇದ್ದರು. ಹುತಾತ್ಮರಾದ 10 ಸಿಬ್ಬಂದಿಯನ್ನು ಹೊರತುಪಡಿಸಿ, ಏಳು ಜನರನ್ನು ಕೈದಿಗಳಾಗಿ ತೆಗೆದುಕೊಳ್ಳಲಾಯಿತು ಮತ್ತು ಉಳಿದ ಮೂವರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು.

ರಾಷ್ಟ್ರೀಯ ಪೊಲೀಸ್ ಸ್ಮಾರಕ 2018 ರಲ್ಲಿ ಅನಾವರಣಗೊಂಡಿತ್ತು. ಅಕ್ಟೋಬರ್ 2018 ರಲ್ಲಿ ನವದೆಹಲಿಯಲ್ಲಿ ರಾಷ್ಟ್ರೀಯ ಪೊಲೀಸ್ ಸ್ಮಾರಕ ಉದ್ಘಾಟನೆ ಈ ಸಂದರ್ಭದಲ್ಲಿ ಮಾತನಾಡಿದ ಮೋದಿ, ಮಾವೋವಾದಿ ಪೀಡಿತ ಪ್ರದೇಶಗಳಲ್ಲಿ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಸೇವೆ ಸಲ್ಲಿಸುತ್ತಿದ್ದ ಸಿಬ್ಬಂದಿಯನ್ನು ನೆನಪಿಸಿಕೊಂಡರು. 2002 ರಲ್ಲಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಸರ್ಕಾರವು ಭಾರತದಲ್ಲಿ ಪೊಲೀಸ್ ಸ್ಮಾರಕವನ್ನು ಹೊಂದುವ ಪ್ರಸ್ತಾಪವನ್ನು ಇರಿಸಿತ್ತು.

ಇದನ್ನೂ ಓದಿ: ಕ್ಯಾನ್ಸರ್​ ಇನ್​ಸ್ಟಿಟ್ಯೂಟ್​​ನಲ್ಲಿ ಇನ್ಫೋಸಿಸ್​​​ ಫೌಂಡೇಶನ್​​ ನಿರ್ಮಿಸಿರುವ 806 ಬೆಡ್​​ಗಳ ವಿಶ್ರಾಮ ಸದನವನ್ನು ಉದ್ಘಾಟಿಸಿದ ಪ್ರಧಾನಿ ಮೋದಿ

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ