AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​ ಸಿಎಂ ಭಗವಂತ್ ಮಾನ್ ವಿರುದ್ಧ ಮದ್ಯ ಸೇವಿಸಿ ಗುರುದ್ವಾರ ಪ್ರವೇಶಿಸಿದ ಆರೋಪ; ಪೊಲೀಸರಿಗೆ ದೂರು ಕೊಟ್ಟ ಬಿಜೆಪಿ ನಾಯಕ

ಏಪ್ರಿಲ್​ 14ರಂದು ದೇಶಾದ್ಯಂತ ಬೈಸಾಖಿ (ವೈಶಾಖಿ) ಆಚರಿಸಲಾಗಿದೆ. ಈ ವೇಳೆ ಭಗವಂತ್ ಮಾನ್​ ತಕ್ತ್​ ದಮದಮಾ ಸಾಹೀಬ್​ ಗುರುದ್ವಾರಕ್ಕೆ ಭೇಟಿಕೊಟ್ಟಿದ್ದರು.

ಪಂಜಾಬ್​ ಸಿಎಂ ಭಗವಂತ್ ಮಾನ್ ವಿರುದ್ಧ ಮದ್ಯ ಸೇವಿಸಿ ಗುರುದ್ವಾರ ಪ್ರವೇಶಿಸಿದ ಆರೋಪ; ಪೊಲೀಸರಿಗೆ ದೂರು ಕೊಟ್ಟ ಬಿಜೆಪಿ ನಾಯಕ
ಭಗವಂತ್ ಮಾನ್​
TV9 Web
| Edited By: |

Updated on:Apr 16, 2022 | 8:08 PM

Share

ಹಿಂದೊಮ್ಮೆ ಸಂಸತ್​ ಕಲಾಪಕ್ಕೆ ಮದ್ಯ ಪಾನ ಮಾಡಿಕೊಂಡು ಹೋಗಿ ವಿವಾದ ಸೃಷ್ಟಿಸಿದ್ದ ಭಗವಂತ್ ಮಾನ್​ ಇದೀಗ ಮತ್ತೊಮ್ಮೆ ಅದೇ ವಿಚಾರಕ್ಕೆ ಸುದ್ದಿಯಾಗಿದ್ದಾರೆ. ಏಪ್ರಿಲ್​ 14ರಂದು ಭಗವಂತ್​ ಮಾನ್​ ಮದ್ಯಪಾನ ಮಾಡಿ, ಗುರುದ್ವಾರ ಪ್ರವೇಶ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.  ಬಿಜೆಪಿ ನಾಯಕ ತಜೀಂದರ್ ಪಾಲ್ ಸಿಂಗ್​ ಬಗ್ಗಾ ಅವರು ಸಿಎಂ ಭಗವಂತ್ ಮಾನ್ ವಿರುದ್ಧ ಪೊಲೀಸರಿಗೆ ದೂರನ್ನೂ ಕೊಟ್ಟಿದ್ದಾರೆ.  ಸಿಎಂ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಂಜಾಬ್​ ಡಿಜಿಪಿಗೆ ಮನವಿಯನ್ನೂ ಮಾಡಿದ್ದಾರೆ. ಈ ಬಗ್ಗೆ ಟ್ವಿಟರ್​ನಲ್ಲಿ ಮಾಹಿತಿ ಶೇರ್ ಮಾಡಿಕೊಂಡಿರುವ ಬಿಜೆಪಿ ನಾಯಕ, ತಾವು ನೀಡಿದ ದೂರಿನ ಪ್ರತಿಯನ್ನು ಪೋಸ್ಟ್ ಮಾಡಿದ್ದಾರೆ. ಭಗವಂತ್ ಮಾನ್​ ಅವರು ಮದ್ಯಪಾನ ಮಾಡಿ ಗುರುದ್ವಾರ ದಮದಮಾ ಸಾಹೀಬ್​ನ್ನು ಪ್ರವೇಶ ಮಾಡಿದ್ದಾರೆ. ಈ ಮೂಲಕ ಗುರುದ್ವಾರವನ್ನು ಅಪವಿತ್ರಗೊಳಿಸಿದ್ದಾರೆ. ಹೀಗಾಗಿ ಪೊಲೀಸರಿಗೆ ದೂರು ನೀಡಿದ್ದೇನೆ ಎಂದು ಹೇಳಿದ್ದಾರೆ.

ಏಪ್ರಿಲ್​ 14ರಂದು ದೇಶಾದ್ಯಂತ ಬೈಸಾಖಿ (ವೈಶಾಖಿ) ಆಚರಿಸಲಾಗಿದೆ. ಈ ವೇಳೆ ಭಗವಂತ್ ಮಾನ್​ ತಕ್ತ್​ ದಮದಮಾ ಸಾಹೀಬ್​ ಗುರುದ್ವಾರಕ್ಕೆ ಭೇಟಿಕೊಟ್ಟಿದ್ದರು. ಆದರೆ ಆಗ ಅವರು ಸಹಜವಾಗಿ ಇರಲಿಲ್ಲ. ಮದ್ಯಪಾನ ಮಾಡಿದ ಸ್ಥಿತಿಯಲ್ಲಿದ್ದರು ಎಂದು ಶಿರೋಮಣಿ ಗುರುದ್ವಾರ ಪರ್ಬಂಧಕ್​ ಸಮಿತಿ  (SGPC) ಆರೋಪಿಸಿತ್ತು.  ಅಷ್ಟೇ ಅಲ್ಲ, ಮಾನ್​ ಕೂಡಲೇ ಕ್ಷಮೆ ಕೇಳಬೇಕು ಎಂದೂ ಆಗ್ರಹಿಸಿದೆ. ಕಾಂಗ್ರೆಸ್​ ಮತ್ತು ಬಿಜೆಪಿ ಎರಡೂ ಪಕ್ಷಗಳೂ ಭಗವಂತ್ ಮಾನ್​ ವಿರುದ್ಧ ಕಿಡಿ ಕಾರುತ್ತಿವೆ. ಆದರೆ ಆಮ್​ ಆದ್ಮಿ ಪಕ್ಷ ಈ ಆರೋಪವನ್ನು ನಿರಾಕರಿಸುತ್ತಿದೆ. ಭಗವಂತ್ ಮಾನ್​ ಪ್ರತಿಷ್ಠೆಯನ್ನು ಹಾಳು ಮಾಡಲು ಕಾಂಗ್ರೆಸ್-ಬಿಜೆಪಿಗಳು ಪ್ರಯತ್ನಿಸುತ್ತಿವೆ ಎಂದು ಹೇಳಿದೆ.

ಏಪ್ರಿಲ್​ 3ರಂದು ಆಮ್​ ಆದ್ಮಿ ಪಕ್ಷದ ನಾಯಕ ಸನ್ನಿ ಅಹ್ಲುವಾಲಿಯಾ ಇದೇ ಬಿಜೆಪಿ ನಾಯಕ ಬಗ್ಗಾ ವಿರುದ್ಧ  ಪೊಲೀಸರಿಗೆ ದೂರು ನೀಡಿದ್ದರು. ಬಗ್ಗೆ ಪ್ರಚೋದನಕಾರಿ ಮಾತುಗಳನ್ನು ಆಡುವ ಮೂಲಕ ಧಾರ್ಮಿಕ ಭಾವನೆಗಳನ್ನು ಕೆರಳಿಸುತ್ತಿದ್ದಾರೆ. ದ್ವೇಷವನ್ನು ಹುಟ್ಟುಹಾಕುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದರು.  ಅದಾದ ಬಳಿಕ ಅವರ ವಿರುದ್ಧ ಕೇಸ್​ ದಾಖಲಾಗಿತ್ತು. ಇದೀಗ ತಜೀಂದರ್ ಪಾಲ್ ಸಿಂಗ್​ ಬಗ್ಗಾ ಮುಖ್ಯಮಂತ್ರಿ ವಿರುದ್ಧ ದೂರು ನೀಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​ ನಾಯಕರೊಂದಿಗೆ 4 ತಾಸು ಸಭೆ ನಡೆಸಿದ ಪ್ರಶಾಂತ್ ಕಿಶೋರ್​; 2024 ಲೋಕಸಭಾ ಚುನಾವಣೆ ಬಗ್ಗೆ ಸುದೀರ್ಘ ವಿಷಯ ಮಂಡನೆ

Published On - 8:06 pm, Sat, 16 April 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್