AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್ಸಿಗಾಗಿ ಕಾಯುತ್ತಿದ್ದ ಬಾಲಕಿ, ಯಮನಂತೆ ಬಂದ ಬೈಕ್​ ಸವಾರ, ಕಣ್ಣು ಮುಚ್ಚಿ ಬಿಡುವಷ್ಟರಲ್ಲಿ ಉಸಿರು ಚೆಲ್ಲಿದ ಬಾಲೆ

ಬಸ್ಸಿಗಾಗಿ ಕಾಯುತ್ತಿದ್ದ ಬಾಲಕಿಗೆ ರಭಸವಾಗಿ ಬಂದ ಬೈಕ್​ ಗುದ್ದಿ 70 ಮೀಟರ್​ಗಳಷ್ಟು ದೂರ ಎಳೆದೊಯ್ದ ಪರಿಣಾಮ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಾರಾಣಸಿಯಲ್ಲಿ ನಡೆದಿದೆ.

ಬಸ್ಸಿಗಾಗಿ ಕಾಯುತ್ತಿದ್ದ ಬಾಲಕಿ, ಯಮನಂತೆ ಬಂದ ಬೈಕ್​ ಸವಾರ, ಕಣ್ಣು ಮುಚ್ಚಿ ಬಿಡುವಷ್ಟರಲ್ಲಿ ಉಸಿರು ಚೆಲ್ಲಿದ ಬಾಲೆ
ನಯನಾ ರಾಜೀವ್
|

Updated on: May 24, 2024 | 10:58 AM

Share

ತಂದೆಯ ಕೈಹಿಡಿದು ಬಸ್ಸಿಗಾಗಿ ಕಾಯುತ್ತಿದ್ದ ಬಾಲಕಿಗೆ ಬೈಕ್​ ಡಿಕ್ಕಿ ಹೊಡೆದು 70 ಮೀಟರ್​ ಎಳೆದೊಯ್ದ ಘಟನೆ ವಾರಾಣಸಿಯಲ್ಲಿ ನಡೆದಿದೆ. ಇದೀಗ ಅಪಘಾತದ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ತಂದೆ ಪೊಲೀಸ್​ ಕಾನ್​ಸ್ಟೆಬಲ್​ ಆಗಿದ್ದು, ಮಗಳನ್ನು ಬಸ್ಸು ಹತ್ತಿಸಲು ಬಂದಿದ್ದರು, ತಂದೆಯ ಜತೆಗೆ ರಸ್ತೆ ಬದಿಗೆ ನಿಂತಿದ್ದ ಬಾಲಕಿಗೆ ಬೈಕ್​ ಡಿಕ್ಕಿ ಹೊಡೆದಿದೆ. ಸಿಸಿಟಿವಿ ಕ್ಯಾಮರಾದಲ್ಲಿ ಘಟನೆ ಸೆರೆಯಾಗಿದೆ.

ನಿನ್ನೆ ಸಂಜೆ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ಕರಣ್ ಗುಪ್ತಾ ಚೌಬೆಪುರದ ಅತ್ಯಂತ ಜನನಿಬಿಡ ರಸ್ತೆಯಲ್ಲಿ ಮಗಳು ಕಾವ್ಯಾ ಅವರೊಂದಿಗೆ ಪಾಂಡೆಪುರಕ್ಕೆ ಹೋಗಲು ಬಸ್‌ಗಾಗಿ ಕಾಯುತ್ತಿದ್ದರು.

ಅಷ್ಟರಲ್ಲಿ ಮಗಳು ಕಾವ್ಯಾ ರಸ್ತೆ ಬದಿಯಿಂದ ಸ್ವಲ್ಪ ದೂರ ಮುಂದೆ ಸಾಗಿದಾಗ ಎದುರಿನಿಂದ ಅತೀ ವೇಗದಲ್ಲಿ ಬಂದ ಬೈಕ್ ಸವಾರನೊಬ್ಬ ಮುಂದೆ ಸಾಗಿ ಕಾವ್ಯಾಗೆ ಡಿಕ್ಕಿ ಹೊಡೆದು ಎಳೆದೊಯ್ದಿದ್ದಾನೆ.

ಬೈಕ್ ಬಲವಾಗಿ ಡಿಕ್ಕಿ ಹೊಡೆದ ರಭಸಕ್ಕೆ ಕ್ಷಣಾರ್ಧದಲ್ಲಿ ಕಾವ್ಯ ಕೆಳಗೆ ಬಿದ್ದಿದ್ದಾಳೆ. ಬಳಿಕ ಅಜಾಗರೂಕತೆಯಿಂದ ಬೈಕ್ ಚಲಾಯಿಸುತ್ತಿದ್ದ ಬೈಕ್ ಸವಾರ ಸ್ಥಳದಿಂದ ಪರಾರಿಯಾಗಿದ್ದಾನೆ.

ಮತ್ತಷ್ಟು ಓದಿ: ಹರ್ಯಾಣ: ಮಿನಿ ಬಸ್​ಗೆ ಲಾರಿ ಡಿಕ್ಕಿ, 7 ಮಂದಿ ಸಾವು, 25 ಜನರಿಗೆ ಗಂಭೀರ ಗಾಯ

ಈ ಘಟನೆಯ ನಂತರ ಪ್ರಸ್ತುತ ಸ್ಥಳದಲ್ಲಿ ಗೊಂದಲದ ವಾತಾವರಣ ಉಂಟಾಯಿತು. ತಂದೆ ಕರಣ್ ತಕ್ಷಣ ಮಗಳೊಂದಿಗೆ ಆಸ್ಪತ್ರೆಗೆ ತಲುಪಿದರು, ಅಲ್ಲಿ ವೈದ್ಯರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು.

ವಿಡಿಯೋ:

ಪೊಲೀಸರು ಬೈಕ್ ಚಾಲಕನಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಮತ್ತು ಇತರ ತನಿಖಾ ಅಂಶಗಳ ಆಧಾರದ ಮೇಲೆ ಬೈಕ್ ಚಾಲಕನನ್ನು ಹುಡುಕಲಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ