AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು ಯಾಕೆ ಹೆಲ್ಮೆಟ್ ಹಾಕಿಲ್ಲ ಎಂದು ಪ್ರಶ್ನಿಸಿದ ಅಸ್ಸಾಂ ಪತ್ರಕರ್ತನ ಮೇಲೆ ಪೊಲೀಸರ ಹಲ್ಲೆ; ವಿಡಿಯೊ ವೈರಲ್

ಬೈಕ್‌ನಲ್ಲಿ ಇಬ್ಬರು ಪೊಲೀಸರು ಹೆಲ್ಮೆಟ್ ಧರಿಸಿರಲಿಲ್ಲ, ನನ್ನ ಒಂದೇ ಒಂದು ತಪ್ಪು ಎಂದರೆ  ನಾನು ಅವರನ್ನು ಪ್ರಶ್ನಿಸಿದ್ದು. ಅವರು ನನ್ನನ್ನು ನಿಂದಿಸಿದರು, ಹಲ್ಲೆ ನಡೆಸಿದರು...

ನೀವು ಯಾಕೆ ಹೆಲ್ಮೆಟ್ ಹಾಕಿಲ್ಲ ಎಂದು  ಪ್ರಶ್ನಿಸಿದ ಅಸ್ಸಾಂ ಪತ್ರಕರ್ತನ ಮೇಲೆ ಪೊಲೀಸರ ಹಲ್ಲೆ; ವಿಡಿಯೊ ವೈರಲ್
ಪತ್ರಕರ್ತ ಜಯಂತ್ ದೇಬನಾಥ್
TV9 Web
| Edited By: |

Updated on:Feb 08, 2022 | 11:43 AM

Share

ಗುವಾಹಟಿ: ಪೊಲೀಸರು ಹೆಲ್ಮೆಟ್ ಧರಿಸಿಲ್ಲ ಎಂದು ಪ್ರಶ್ನಿಸಿದ ಪತ್ರಕರ್ತರೊಬ್ಬರ ಮೇಲೆ ಇಬ್ಬರು ಪೊಲೀಸ್ ಕಾನ್‌ಸ್ಟೆಬಲ್‌ಗಳು ಅಸ್ಸಾಂನಲ್ಲಿ (Assam) ಹಲ್ಲೆ ನಡೆಸಿದ್ದಾರೆ. ನಿನ್ನೆ ಅಸ್ಸಾಂನ ಚಿರಾಂಗ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆಕ್ರೋಶಕ್ಕೆ ಕಾರಣವಾಗಿದೆ. ಪತ್ರಕರ್ತ ಜಯಂತ್ ದೇಬನಾಥ್ (Jayant Debnath) ಅವರನ್ನು ಇಬ್ಬರು ಪೊಲೀಸರು ಥಳಿಸುತ್ತಿರುವುದು ವಿಡಿಯೊದಲ್ಲಿದೆ. ನಂತರ ಅವರು  ದೇಬನಾಥ್ ಅವರನ್ನು ಪೊಲೀಸ್ ಜೀಪಿನಲ್ಲಿ ಬಲವಂತವಾಗಿ ಕೂರಿಸಲು ಹೆಚ್ಚಿನ ಪೊಲೀಸರನ್ನು ಕರೆಯುತ್ತಾರೆ. ಇಬ್ಬರು ಪೊಲೀಸರು ಹೆಲ್ಮೆಟ್ ಧರಿಸದೇ ಇರುವುದನ್ನು ನೋಡಿ ಸಾರ್ವಜನಿಕರಿಗೆ ಇದು ಯಾವ ಸಂದೇಶ ನೀಡುತ್ತದೆ ಎಂದು ನಾನು ಪ್ರಶ್ನಿಸಿದ್ದಾರೆ ಎಂದು ಪತ್ರಕರ್ತ ಆರೋಪಿಸಿದ್ದಾರೆ.  ಬೈಕ್‌ನಲ್ಲಿ ಇಬ್ಬರು ಪೊಲೀಸರು ಹೆಲ್ಮೆಟ್ ಧರಿಸಿರಲಿಲ್ಲ, ನನ್ನ ಒಂದೇ ಒಂದು ತಪ್ಪು ಎಂದರೆ  ನಾನು ಅವರನ್ನು ಪ್ರಶ್ನಿಸಿದ್ದು. ಅವರು ನನ್ನನ್ನು ನಿಂದಿಸಿದರು, ಹಲ್ಲೆ ನಡೆಸಿದರು ಎಂದು ದೇಬನಾಥ್ ಎಎನ್‌ಐಗೆ ತಿಳಿಸಿದರು.  ನಾನು ಪತ್ರಕರ್ತ ಎಂದು ಹೇಳಿದಾಗ ಪೊಲೀಸರು ಹೆಚ್ಚು ಕೋಪಗೊಂಡರು ಎಂದು ದೇಬನಾಥ್ ಹೇಳಿದ್ದಾರೆ.  ಅಸ್ಸಾಂ ಪೊಲೀಸರು ಜಯಂತ್ ದೇಬನಾಥ್ ದಾಖಲಿಸಿದ ಎಫ್‌ಐಆರ್ ಆಧರಿಸಿ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಇಬ್ಬರು ಕಾನ್‌ಸ್ಟೆಬಲ್‌ಗಳ ವಿರುದ್ಧದ ಎಫ್‌ಐಆರ್ ಆಧರಿಸಿ ನಾವು ಈ ವಿಷಯದಲ್ಲಿ ಅಗತ್ಯ ಕ್ರಮ ತೆಗೆದುಕೊಳ್ಳುತ್ತಿದ್ದೇವೆ ಎಂದು ಚಿರಾಂಗ್ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್‌ಪಿ) ಲಾಬಾ ಕ್ರ ದೇಕಾ ಹೇಳಿದ್ದಾರೆ.

ದೇಬನಾಥ್ ಅವರು ಅಸ್ಸಾಂ ಸರ್ಕಾರವು ಶೀಘ್ರ ಕ್ರಮ ಕೈಗೊಳ್ಳಬೇಕು ಮತ್ತು ಸರ್ಕಾರಿ ಸಿಬ್ಬಂದಿಗಳು ಕಾನೂನನ್ನು ಉಲ್ಲಂಘಿಸದಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

ನೀವು ಕಾನೂನುಗಳನ್ನು ರಚಿಸುತ್ತೀರಿ ಮತ್ತು ನಿಮ್ಮ ಸ್ವಂತ ಜನರು ಅವುಗಳನ್ನು ಮುರಿಯುತ್ತೀರಿ ಎಂದು ನಾನು ಅಸ್ಸಾಂ ಸರ್ಕಾರಕ್ಕೆ ಹೇಳಲು ಬಯಸುತ್ತೇನೆ. ತ್ವರಿತ ಕ್ರಮ ಕೈಗೊಳ್ಳುವಂತೆ ನಾನು ಸರ್ಕಾರವನ್ನು ಒತ್ತಾಯಿಸುತ್ತಿದ್ದೇನೆ ದೇಬನಾಥ್ ಹೇಳಿದರು.

“ಈ ಘಟನೆಯು ರಾತ್ರಿಯಲ್ಲಿ ಸಂಭವಿಸಿದ್ದರೆ, ಅವರು ಬಹುಶಃ ನನ್ನನ್ನು ಗುಂಡಿಕ್ಕಿ ಕೊಲ್ಲುತ್ತಿದ್ದರು. ಅವರ ನಡವಳಿಕೆಯಿಂದ ನಾನು ಆಘಾತಕ್ಕೊಳಗಾಗಿದ್ದೇನೆ” ಎಂದು ಅವರು ಹೇಳಿದರು.

ಇದನ್ನೂ ಓದಿ: Gold Smuggling Case ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಮತ್ತು ಇತರರಿಗೆ ಕೇರಳ ಹೈಕೋರ್ಟ್ ಜಾಮೀನು

Published On - 11:41 am, Tue, 8 February 22

Follow Us
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ರಾಯಚೂರಲ್ಲಿ ಪೊಲೀಸ್ ಶ್ವಾನಗಳಿಗೆ ಫ್ಯಾನ್, ಏರ್ ಕೂಲರ್​ ವ್ಯವಸ್ಥೆ
ರಾಯಚೂರಲ್ಲಿ ಪೊಲೀಸ್ ಶ್ವಾನಗಳಿಗೆ ಫ್ಯಾನ್, ಏರ್ ಕೂಲರ್​ ವ್ಯವಸ್ಥೆ
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು: ದಂಧೆಕೋರರಿಗೆ ಬಿಗ್​​ ಶಾಕ್​​
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು: ದಂಧೆಕೋರರಿಗೆ ಬಿಗ್​​ ಶಾಕ್​​
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?