AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಡರಾತ್ರಿ ಕಾಶ್ಮೀರದ ದೇವಸ್ಥಾನಕ್ಕೆ ಪ್ರವೇಶಿಸಿದ ಪೊಲೀಸ್​​ನ್ನು ಗುಂಡಿಕ್ಕಿ ಹತ್ಯೆಮಾಡಿದ ಭದ್ರತಾ ಸಿಬ್ಬಂದಿ

ನಿನ್ನೆ ತಡರಾತ್ರಿ ಕಾನ್‌ಸ್ಟೇಬಲ್‌ ಧರ್ ದೇವಸ್ಥಾನದ ಬಾಗಿಲನ್ನು ಬಡಿಯಲ ಆರಂಭಿಸಿದಾಗ ಭದ್ರತಾ ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎಂದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಡರಾತ್ರಿ ಕಾಶ್ಮೀರದ ದೇವಸ್ಥಾನಕ್ಕೆ ಪ್ರವೇಶಿಸಿದ ಪೊಲೀಸ್​​ನ್ನು ಗುಂಡಿಕ್ಕಿ ಹತ್ಯೆಮಾಡಿದ ಭದ್ರತಾ ಸಿಬ್ಬಂದಿ
ಪ್ರಾತಿನಿಧಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Sep 22, 2021 | 7:30 PM

Share

ಕಾಶ್ಮೀರ: ಕಾಶ್ಮೀರದಲ್ಲಿ ಓರ್ವ ಪೊಲೀಸ್​​ನ್ನು ಭದ್ರತಾ ಸಿಬ್ಬಂದಿಗಳು ಹತ್ಯೆ ಮಾಡಿದ್ದಾರೆ. ರಾತ್ರಿ ಹೊತ್ತು ಪೊಲೀಸ್ ದೇವಾಲಯಕ್ಕೆ ನುಗ್ಗಿದ್ದರಿಂದ ಸೆಕ್ಯುರಿಟಿ ಗಾರ್ಡ್​​ಗಳು ದೇವಾಲಯಕ್ಕೆ ದೇಶ ವಿರೋಧಿಗಳು ಯಾರೋ ನುಗ್ಗಿಬಿಟ್ಟಿದ್ದಾರೆ ಎಂದು ಹತ್ಯೆ ಮಾಡಿರುವುದಾಗಿ ಪೊಲೀಸರು ಹೇಳಿದ್ದಾರೆ. ಹತ್ಯೆಯಾದ ಕಾನ್‌ಸ್ಟೇಬಲ್‌ನ್ನು ಅಜಯ್ ಧರ್, ಲಂಗೇಟ್ ಹಂದ್ವಾರ ನಿವಾಸಿ ಎಂದು ಗುರುತಿಸಲಾಗಿದೆ. ಈ ಘಟನೆ ದುರದೃಷ್ಟಕರ ಎಂದು ಪೊಲೀಸರು ಹೇಳಿದ್ದಾರೆ. ನಿನ್ನೆ ತಡರಾತ್ರಿ ಕಾನ್‌ಸ್ಟೇಬಲ್‌ ಧರ್ ದೇವಸ್ಥಾನದ ಬಾಗಿಲನ್ನು ಬಡಿಯಲ ಆರಂಭಿಸಿದಾಗ ಭದ್ರತಾ ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎಂದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಗಾಳಿಯಲ್ಲಿ ಗುಂಡು ಹಾರಿಸಿದರೂ ಕಾನ್‌ಸ್ಟೇಬಲ್‌ ಧರ್ ತನ್ನ ಗುರುತನ್ನು ಬಹಿರಂಗಪಡಿಸದೆ ಬಾಗಿಲನ್ನು ಬಡಿಯುತ್ತಿದ್ದನು. ಇದು ತಪ್ಪಾದ ಗುರುತಿನ ಸ್ಪಷ್ಟ ಪ್ರಕರಣ. ಏಕೆಂದರೆ ಇದು ದಾಳಿ ಎಂದು ಸೆಂಟ್ರಿ ಊಹಿಸಿದ್ದಾನೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ವಿಜಯ್ ಕುಮಾರ್ ಹೇಳಿದರು.

ಕಾಶ್ಮೀರದ ಬಹುತೇಕ ದೇವಸ್ಥಾನಗಳಿಗೆ ಪೊಲೀಸ್ ಭದ್ರತೆ ನೀಡಲಾಗಿದೆ. ಈ ಘಟನೆಯು ಕಾಶ್ಮೀರದಲ್ಲಿನ ಭದ್ರತಾ ಅವ್ಯವಸ್ಥೆಗೆ ಮತ್ತೊಂದು ಉದಾಹರಣೆಯಾಗಿದೆ. ಹಿಂದೆ, “ತಪ್ಪಾದ” ಗುರುತಿನಿಂದಾಗಿ ರಾತ್ರಿ ಸಮಯದಲ್ಲಿ ನಾಗರಿಕರನ್ನು ಭದ್ರತಾ ಪಡೆಗಳು ಕೊಲ್ಲುವ ಘಟನೆಗಳು ನಡೆದಿವೆ.

ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಮೇಘಸ್ಫೋಟ; ಒಂದೇ ಕುಟುಂಬದ ನಾಲ್ವರು ಸಾವು, ಒಬ್ಬ ನಾಪತ್ತೆ

ಇದನ್ನೂ ಓದಿ:  Bhabanipur Bypoll ಮೋದಿ ಜೀ, ನಾವು ಭಾರತವನ್ನು ತಾಲಿಬಾನ್ ಮಾಡಲು ಬಿಡುವುದಿಲ್ಲ: ಮಮತಾ ಬ್ಯಾನರ್ಜಿ

(Police in Kashmir killed after security guards at a temple mistook him for anti-national element)

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ