AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂದು ಖಡಕ್​ ಅಧಿಕಾರಿ.. ಇಂದು C/O ಫುಟ್​ಪಾತ್​ -ಇದು ಮನಮುಟ್ಟುವಂಥ ‘ಪೊಲೀಸ್’ ಸ್ಟೋರಿ

ಭೋಪಾಲ್: ಒಂದು ಕಾಲದಲ್ಲಿ ನಿಷ್ಠಾವಂತ ಪೊಲೀಸ್ ಅಧಿಕಾರಿಯಾಗಿದ್ದ ವ್ಯಕ್ತಿ ಹಲವು ವರ್ಷಗಳ ನಂತರ ಭಿಕ್ಷುಕನಂತೆ ತಮ್ಮ ಸಹೋದ್ಯೋಗಿಗಳಿಗೆ ಆಕಸ್ಮಿಕವಾಗಿ ರಸ್ತೆಯಲ್ಲಿ ಸಿಕ್ಕಿರುವ ಸ್ವಾರಸ್ಯಕರ ಪ್ರಸಂಗ ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿ ಬೆಳಕಿಗೆ ಬಂದಿದೆ. ಅಂದ ಹಾಗೆ, ಫೋಟೋದಲ್ಲಿ ಕೊಳಕಾದ ಮೈ, ಉದ್ದ ಗಡ್ಡ-ಮೀಸೆಯಲ್ಲಿ ರಸ್ತೆ ಬದಿ ಭಿಕ್ಷುಕನಂತೆ ಕಾಣಸಿಗುವ ಈ ವ್ಯಕ್ತಿ ಅಸಲಿಗೆ ಮಾಜಿ ಪೊಲೀಸ್ ಅಧಿಕಾರಿ ಮನೀಶ್ ಮಿಶ್ರಾ. ಯಾರು ಊಹಿಸಲಾಗದಂತಹ ಸ್ಥಿತಿಗೆ ಇವರು ಇಂದು ತಲುಪಿದ್ದಾರೆ. ಭಿಕ್ಷುಕನಂತೆ ಕಂಡ ಸಹೋದ್ಯೋಗಿ ನೋಡಿ ಅಧಿಕಾರಿಗಳಿಗೆ ಶಾಕ್​! ಉಪ ಪೊಲೀಸ್ […]

ಅಂದು ಖಡಕ್​ ಅಧಿಕಾರಿ.. ಇಂದು C/O ಫುಟ್​ಪಾತ್​ -ಇದು ಮನಮುಟ್ಟುವಂಥ ‘ಪೊಲೀಸ್’ ಸ್ಟೋರಿ
KUSHAL V
|

Updated on: Nov 15, 2020 | 8:49 PM

Share

ಭೋಪಾಲ್: ಒಂದು ಕಾಲದಲ್ಲಿ ನಿಷ್ಠಾವಂತ ಪೊಲೀಸ್ ಅಧಿಕಾರಿಯಾಗಿದ್ದ ವ್ಯಕ್ತಿ ಹಲವು ವರ್ಷಗಳ ನಂತರ ಭಿಕ್ಷುಕನಂತೆ ತಮ್ಮ ಸಹೋದ್ಯೋಗಿಗಳಿಗೆ ಆಕಸ್ಮಿಕವಾಗಿ ರಸ್ತೆಯಲ್ಲಿ ಸಿಕ್ಕಿರುವ ಸ್ವಾರಸ್ಯಕರ ಪ್ರಸಂಗ ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿ ಬೆಳಕಿಗೆ ಬಂದಿದೆ.

ಅಂದ ಹಾಗೆ, ಫೋಟೋದಲ್ಲಿ ಕೊಳಕಾದ ಮೈ, ಉದ್ದ ಗಡ್ಡ-ಮೀಸೆಯಲ್ಲಿ ರಸ್ತೆ ಬದಿ ಭಿಕ್ಷುಕನಂತೆ ಕಾಣಸಿಗುವ ಈ ವ್ಯಕ್ತಿ ಅಸಲಿಗೆ ಮಾಜಿ ಪೊಲೀಸ್ ಅಧಿಕಾರಿ ಮನೀಶ್ ಮಿಶ್ರಾ. ಯಾರು ಊಹಿಸಲಾಗದಂತಹ ಸ್ಥಿತಿಗೆ ಇವರು ಇಂದು ತಲುಪಿದ್ದಾರೆ.

ಭಿಕ್ಷುಕನಂತೆ ಕಂಡ ಸಹೋದ್ಯೋಗಿ ನೋಡಿ ಅಧಿಕಾರಿಗಳಿಗೆ ಶಾಕ್​! ಉಪ ಪೊಲೀಸ್ ವರಿಷ್ಠಾಧಿಕಾರಿಗಳಾದ ರತ್ನೇಶ್ ಸಿಂಗ್ ತೋಮರ್ ಮತ್ತು ವಿಜಯ್ ಸಿಂಗ್ ಬಹದ್ದೂರ್ ಕಳೆದ ಮಂಗಳವಾರ ರಾತ್ರಿ ನಗರದ ಕಲ್ಯಾಣ ಮಂಟಪದ ಬಳಿ ಹೋಗುತ್ತಿದ್ದಾಗ ಭಿಕ್ಷುಕನಂತೆ ಕಂಡ ವ್ಯಕ್ತಿಯೊಬ್ಬ ಚಳಿಯಿಂದ ನಡುಗುತ್ತಿದ್ದದ್ದು ಕಂಡುಬಂತು. ಇದನ್ನು ಕಂಡ ಅಧಿಕಾರಿಗಳು ಗಾಡಿಯಿಂದ ಇಳಿದು ಆತನಿಗೆ ಜಾಕೇಟ್ ನೀಡಲು ಮುಂದಾದರು. ಆಗ ಆ ವ್ಯಕ್ತಿ ತಮ್ಮ ಮೊದಲ ಹೆಸರಿನಿಂದ ಇವರನ್ನು ಕರೆದಾಗ ಇಬ್ಬರು ಅಧಿಕಾರಿಗಳಿಗೆ ಫುಲ್​ ಶಾಕ್​!. ಕೂಡಲೇ ಅವರಿಗೆ ಅರೇ, ಇದು ಬೇರೆ ಯಾರೂ ಅಲ್ಲ ಮನೀಶ್​ ಎಂದು ಗೊತ್ತಾಗಿದೆ.

ಮನೀಶ್​ ಮಿಶ್ರಾ ದುಃಸ್ಥಿತಿಗೆ ಕಾರಣವೇನು? ಒಂದು ಕಾಲದಲ್ಲಿ ಮಿಶ್ರಾ ಉತ್ತಮ ಕ್ರೀಡಾಪಟು ಮತ್ತು ಶಾರ್ಪಶೂಟರ್ ಆಗಿದ್ದರು. 1999ರಲ್ಲಿ ಪೊಲೀಸ್ ಪಡೆಗೆ ಸೇರಿದ್ದ ಮನೀಶ್​ ಅಸಲಿಗೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. 2005ರಲ್ಲಿ ಡಾಟಿಯಾದಲ್ಲಿ ಇನ್​ಸ್ಪೆಕ್ಟ​ರ್​ ಆಗಿ ನೇಮಕಗೊಂಡಾದ ಬಳಿಕ ನಾಪತ್ತೆಯಾಗಿದ್ದರು. ಇಷ್ಟು ವರ್ಷಗಳ ಕಾಲ ಅವರು ಎಲ್ಲಿದ್ದರೂ ಎಂಬ ಸುಳಿವು ಸಹ ಯಾರಿಗೂ ಸಿಕ್ಕಿರಲಿಲ್ಲ. ಸದ್ಯ, ಅವರ ಸ್ನೇಹಿತರು ಮಿಶ್ರಾಗೆ ಉತ್ತಮ ಚಿಕಿತ್ಸೆ ಕೊಡಿಸಿದ್ದು, ಮನೀಶ್​ ಆದಷ್ಟು ಬೇಗ ಮೊದಲಿನಂತೆ ಆಗುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ