AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂದು ಖಡಕ್​ ಅಧಿಕಾರಿ.. ಇಂದು C/O ಫುಟ್​ಪಾತ್​ -ಇದು ಮನಮುಟ್ಟುವಂಥ ‘ಪೊಲೀಸ್’ ಸ್ಟೋರಿ

ಭೋಪಾಲ್: ಒಂದು ಕಾಲದಲ್ಲಿ ನಿಷ್ಠಾವಂತ ಪೊಲೀಸ್ ಅಧಿಕಾರಿಯಾಗಿದ್ದ ವ್ಯಕ್ತಿ ಹಲವು ವರ್ಷಗಳ ನಂತರ ಭಿಕ್ಷುಕನಂತೆ ತಮ್ಮ ಸಹೋದ್ಯೋಗಿಗಳಿಗೆ ಆಕಸ್ಮಿಕವಾಗಿ ರಸ್ತೆಯಲ್ಲಿ ಸಿಕ್ಕಿರುವ ಸ್ವಾರಸ್ಯಕರ ಪ್ರಸಂಗ ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿ ಬೆಳಕಿಗೆ ಬಂದಿದೆ. ಅಂದ ಹಾಗೆ, ಫೋಟೋದಲ್ಲಿ ಕೊಳಕಾದ ಮೈ, ಉದ್ದ ಗಡ್ಡ-ಮೀಸೆಯಲ್ಲಿ ರಸ್ತೆ ಬದಿ ಭಿಕ್ಷುಕನಂತೆ ಕಾಣಸಿಗುವ ಈ ವ್ಯಕ್ತಿ ಅಸಲಿಗೆ ಮಾಜಿ ಪೊಲೀಸ್ ಅಧಿಕಾರಿ ಮನೀಶ್ ಮಿಶ್ರಾ. ಯಾರು ಊಹಿಸಲಾಗದಂತಹ ಸ್ಥಿತಿಗೆ ಇವರು ಇಂದು ತಲುಪಿದ್ದಾರೆ. ಭಿಕ್ಷುಕನಂತೆ ಕಂಡ ಸಹೋದ್ಯೋಗಿ ನೋಡಿ ಅಧಿಕಾರಿಗಳಿಗೆ ಶಾಕ್​! ಉಪ ಪೊಲೀಸ್ […]

ಅಂದು ಖಡಕ್​ ಅಧಿಕಾರಿ.. ಇಂದು C/O ಫುಟ್​ಪಾತ್​ -ಇದು ಮನಮುಟ್ಟುವಂಥ ‘ಪೊಲೀಸ್’ ಸ್ಟೋರಿ
KUSHAL V
|

Updated on: Nov 15, 2020 | 8:49 PM

Share

ಭೋಪಾಲ್: ಒಂದು ಕಾಲದಲ್ಲಿ ನಿಷ್ಠಾವಂತ ಪೊಲೀಸ್ ಅಧಿಕಾರಿಯಾಗಿದ್ದ ವ್ಯಕ್ತಿ ಹಲವು ವರ್ಷಗಳ ನಂತರ ಭಿಕ್ಷುಕನಂತೆ ತಮ್ಮ ಸಹೋದ್ಯೋಗಿಗಳಿಗೆ ಆಕಸ್ಮಿಕವಾಗಿ ರಸ್ತೆಯಲ್ಲಿ ಸಿಕ್ಕಿರುವ ಸ್ವಾರಸ್ಯಕರ ಪ್ರಸಂಗ ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿ ಬೆಳಕಿಗೆ ಬಂದಿದೆ.

ಅಂದ ಹಾಗೆ, ಫೋಟೋದಲ್ಲಿ ಕೊಳಕಾದ ಮೈ, ಉದ್ದ ಗಡ್ಡ-ಮೀಸೆಯಲ್ಲಿ ರಸ್ತೆ ಬದಿ ಭಿಕ್ಷುಕನಂತೆ ಕಾಣಸಿಗುವ ಈ ವ್ಯಕ್ತಿ ಅಸಲಿಗೆ ಮಾಜಿ ಪೊಲೀಸ್ ಅಧಿಕಾರಿ ಮನೀಶ್ ಮಿಶ್ರಾ. ಯಾರು ಊಹಿಸಲಾಗದಂತಹ ಸ್ಥಿತಿಗೆ ಇವರು ಇಂದು ತಲುಪಿದ್ದಾರೆ.

ಭಿಕ್ಷುಕನಂತೆ ಕಂಡ ಸಹೋದ್ಯೋಗಿ ನೋಡಿ ಅಧಿಕಾರಿಗಳಿಗೆ ಶಾಕ್​! ಉಪ ಪೊಲೀಸ್ ವರಿಷ್ಠಾಧಿಕಾರಿಗಳಾದ ರತ್ನೇಶ್ ಸಿಂಗ್ ತೋಮರ್ ಮತ್ತು ವಿಜಯ್ ಸಿಂಗ್ ಬಹದ್ದೂರ್ ಕಳೆದ ಮಂಗಳವಾರ ರಾತ್ರಿ ನಗರದ ಕಲ್ಯಾಣ ಮಂಟಪದ ಬಳಿ ಹೋಗುತ್ತಿದ್ದಾಗ ಭಿಕ್ಷುಕನಂತೆ ಕಂಡ ವ್ಯಕ್ತಿಯೊಬ್ಬ ಚಳಿಯಿಂದ ನಡುಗುತ್ತಿದ್ದದ್ದು ಕಂಡುಬಂತು. ಇದನ್ನು ಕಂಡ ಅಧಿಕಾರಿಗಳು ಗಾಡಿಯಿಂದ ಇಳಿದು ಆತನಿಗೆ ಜಾಕೇಟ್ ನೀಡಲು ಮುಂದಾದರು. ಆಗ ಆ ವ್ಯಕ್ತಿ ತಮ್ಮ ಮೊದಲ ಹೆಸರಿನಿಂದ ಇವರನ್ನು ಕರೆದಾಗ ಇಬ್ಬರು ಅಧಿಕಾರಿಗಳಿಗೆ ಫುಲ್​ ಶಾಕ್​!. ಕೂಡಲೇ ಅವರಿಗೆ ಅರೇ, ಇದು ಬೇರೆ ಯಾರೂ ಅಲ್ಲ ಮನೀಶ್​ ಎಂದು ಗೊತ್ತಾಗಿದೆ.

ಮನೀಶ್​ ಮಿಶ್ರಾ ದುಃಸ್ಥಿತಿಗೆ ಕಾರಣವೇನು? ಒಂದು ಕಾಲದಲ್ಲಿ ಮಿಶ್ರಾ ಉತ್ತಮ ಕ್ರೀಡಾಪಟು ಮತ್ತು ಶಾರ್ಪಶೂಟರ್ ಆಗಿದ್ದರು. 1999ರಲ್ಲಿ ಪೊಲೀಸ್ ಪಡೆಗೆ ಸೇರಿದ್ದ ಮನೀಶ್​ ಅಸಲಿಗೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. 2005ರಲ್ಲಿ ಡಾಟಿಯಾದಲ್ಲಿ ಇನ್​ಸ್ಪೆಕ್ಟ​ರ್​ ಆಗಿ ನೇಮಕಗೊಂಡಾದ ಬಳಿಕ ನಾಪತ್ತೆಯಾಗಿದ್ದರು. ಇಷ್ಟು ವರ್ಷಗಳ ಕಾಲ ಅವರು ಎಲ್ಲಿದ್ದರೂ ಎಂಬ ಸುಳಿವು ಸಹ ಯಾರಿಗೂ ಸಿಕ್ಕಿರಲಿಲ್ಲ. ಸದ್ಯ, ಅವರ ಸ್ನೇಹಿತರು ಮಿಶ್ರಾಗೆ ಉತ್ತಮ ಚಿಕಿತ್ಸೆ ಕೊಡಿಸಿದ್ದು, ಮನೀಶ್​ ಆದಷ್ಟು ಬೇಗ ಮೊದಲಿನಂತೆ ಆಗುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ