ಜೈಲಿನಿಂದ ಬಿಡುಗಡೆಯಾದ ಗ್ಯಾಂಗ್​​ಸ್ಟರ್​​ಗೆ ಸ್ವಾಗತಕೋರಿ ರ‍್ಯಾಲಿ ನಡೆಸಿದ ಬೆಂಬಲಿಗರು; ಮತ್ತೆ ಬಂಧನ

ವೈರಲ್ ವಿಡಿಯೊದಲ್ಲಿ, ಕಾರಿನ ಸನ್‌ರೂಫ್‌ನಿಂದ ಹೊರಬರುವಾಗ ಪಾಟಂಕರ್ ತನ್ನ ಬೆಂಬಲಿಗರತ್ತ ಕೈ ಬೀಸುತ್ತಿರುವುದನ್ನು ಕಾಣಬಹುದು. ಅವರ ಬೆಂಬಲಿಗರು ಈ ವಿಡಿಯೊಗಳಿಗೆ "ಕಮ್‌ಬ್ಯಾಕ್" ಎಂದು ಶೀರ್ಷಿಕೆ ನೀಡಿದ್ದಾರೆ. ನಾಸಿಕ್‌ನ ಗ್ಯಾಂಗ್​​ಸ್ಟರ್ ಹರ್ಷದ್ ಪಾಟಂಕರ್​​ನ್ನು ಮಹಾರಾಷ್ಟ್ರದ ಅಪಾಯಕಾರಿ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ (ಎಂಪಿಡಿಎ) ಅಡಿಯಲ್ಲಿ ಜೈಲಿಗೆ ಹಾಕಲಾಗಿತ್ತು.

ಜೈಲಿನಿಂದ ಬಿಡುಗಡೆಯಾದ ಗ್ಯಾಂಗ್​​ಸ್ಟರ್​​ಗೆ ಸ್ವಾಗತಕೋರಿ ರ‍್ಯಾಲಿ ನಡೆಸಿದ ಬೆಂಬಲಿಗರು; ಮತ್ತೆ ಬಂಧನ
ಹರ್ಷದ್ ಪಾಟಂಕರ್
Follow us
|

Updated on: Jul 27, 2024 | 12:42 PM

ಮುಂಬೈ ಜುಲೈ 27: ಮಹಾರಾಷ್ಟ್ರದ (Maharashtra) ಜೈಲಿನಿಂದ ಬಿಡುಗಡೆಯಾದ ನಂತರ, ಗ್ಯಾಂಗ್​​ಸ್ಟರ್ ಹರ್ಷದ್ ಪಾಟಂಕರ್​​ನ್ನು (Harshad Patankar) ಸ್ವಾಗತಿಸಿ ಅವರ ಬೆಂಬಲಿಗರು ಸಂಭ್ರಮಾಚರಣೆ ರ‍್ಯಾಲಿ ನಡೆಸಿದ್ದಾರೆ. ಇದರ ಬೆನ್ನಲ್ಲೇ ಪಾಟಂಕರ್​​ನ್ನು ಮತ್ತೆ ಬಂಧಿಸಲಾಗಿದೆ. ಎನ್​​​ಡಿಟಿವಿ ವರದಿಯ ಪ್ರಕಾರ, ಕಾರು ಮೆರವಣಿಗೆ ಮತ್ತು ಸುಮಾರು 15 ದ್ವಿಚಕ್ರ ವಾಹನಗಳನ್ನು ಒಳಗೊಂಡ ರ‍್ಯಾಲಿಯು ಮಹಾರಾಷ್ಟ್ರದ ನಾಸಿಕ್‌ನ ಬೆತೆಲ್ ನಗರದಿಂದ ಅಂಬೇಡ್ಕರ್ ಚೌಕ್‌ವರೆಗೆ ನಡೆಯಿತು. ರ‍್ಯಾಲಿಯ ನಂತರ, ಅವರ ಆಚರಣೆ, ಮೆರವಣಿಗೆಯ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು ಪೊಲೀಸರು ಕ್ರಮ ಕೈಗೊಂಡಿದ್ದಾರೆ

ವೈರಲ್ ವಿಡಿಯೊದಲ್ಲಿ, ಕಾರಿನ ಸನ್‌ರೂಫ್‌ನಿಂದ ಹೊರಬರುವಾಗ ಪಾಟಂಕರ್ ತನ್ನ ಬೆಂಬಲಿಗರತ್ತ ಕೈ ಬೀಸುತ್ತಿರುವುದನ್ನು ಕಾಣಬಹುದು. ಅವರ ಬೆಂಬಲಿಗರು ಈ ವಿಡಿಯೊಗಳಿಗೆ “ಕಮ್‌ಬ್ಯಾಕ್” ಎಂದು ಶೀರ್ಷಿಕೆ ನೀಡಿದ್ದಾರೆ.

ನಾಸಿಕ್‌ನ ಗ್ಯಾಂಗ್​​ಸ್ಟರ್ ಹರ್ಷದ್ ಪಾಟಂಕರ್​​ನ್ನು ಮಹಾರಾಷ್ಟ್ರದ ಅಪಾಯಕಾರಿ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ (ಎಂಪಿಡಿಎ) ಅಡಿಯಲ್ಲಿ ಜೈಲಿಗೆ ಹಾಕಲಾಗಿತ್ತು.

ಈತನನ್ನು ಜುಲೈ 23 ರಂದು ಬಿಡುಗಡೆ ಮಾಡಲಾಯಿತು. ಆದಾಗ್ಯೂ, ಈ ವಿಡಿಯೊಗಳು ಪೊಲೀಸ್ ಕ್ರಮವನ್ನು ಪ್ರೇರೇಪಿಸಿದ ನಂತರ ಅವರ ವಿರುದ್ಧ ಸರ್ಕಾರವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅನಧಿಕೃತ ರ‍್ಯಾಲಿ ನಡೆಸಿ ಗೊಂದಲ ಸೃಷ್ಟಿಸಿದ್ದಕ್ಕಾಗಿ ಪಾಟಂಕರ್ ಮತ್ತು ಆತನ ಆರು ಸಹಾಯಕರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಹರಿದ್ವಾರ: ಕನ್ವರ್ ಯಾತ್ರಾ ಮಾರ್ಗದಲ್ಲಿನ ಮಸೀದಿ, ಮಝಾರ್ ಕಾಣದಂತೆ ಪರದೆ; ಆಕ್ಷೇಪ ವ್ಯಕ್ತವಾದ ನಂತರ ತೆರವು

ಪಾಟಂಕರ್ ವಿರುದ್ಧ ಕೊಲೆ ಯತ್ನ, ಕಳ್ಳತನ, ಹಿಂಸಾಚಾರ ಸೇರಿದಂತೆ ಹಲವು ಪೊಲೀಸ್ ಪ್ರಕರಣಗಳು ದಾಖಲಾಗಿವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್