AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ: ಅಂದು ಐಸ್​ಕ್ರೀಂನಲ್ಲಿ ಸಿಕ್ಕ ಬೆರಳು ಯಾರದ್ದು, ಪೊಲೀಸರು ಹೇಳಿದ್ದೇನು?

ಮುಂಬೈನಲ್ಲಿ ವೈದ್ಯರೊಬ್ಬರು ಆನ್​ಲೈನ್​ ಮೂಲಕ ಬುಕ್​ ಮಾಡಿದ್ದ ಐಸ್​ಕ್ರೀಂನಲ್ಲಿ ಬೆರಳು ಪತ್ತೆಯಾದ ಪ್ರಕರಣಕ್ಕೆ ಹೊಸ ಆಯಾಮ ಸಿಕ್ಕಿದೆ, ಆ ಬೆರಳು ಯಾರದ್ದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ವೈದ್ಯರೊಬ್ಬರು ಆನ್​ಲೈನ್ ಮೂಲಕ ಮೂರು ಕೋನ್ ಐಸ್​ಕ್ರೀಂ ಆರ್ಡರ್ ಮಾಡಿದ್ದರು, ಅದರಲ್ಲಿ ಮಾನವನ ಬೆರಳು ಪತ್ತೆಯಾಗಿತ್ತು.

ಮುಂಬೈ: ಅಂದು ಐಸ್​ಕ್ರೀಂನಲ್ಲಿ ಸಿಕ್ಕ ಬೆರಳು ಯಾರದ್ದು, ಪೊಲೀಸರು ಹೇಳಿದ್ದೇನು?
ಐಸ್​ಕ್ರೀಂ
ನಯನಾ ರಾಜೀವ್
|

Updated on: Jun 19, 2024 | 2:17 PM

Share

ಆನ್​ಲೈನ್​ ಮೂಲಕ ತರಿಸಿದ್ದ ಐಸ್​ಕ್ರೀಂ(Ice-Cream)ನಲ್ಲಿ ಪತ್ತೆಯಾಗಿದ್ದ ಬೆರಳು ಯಾರದ್ದು ಎಂಬುದರ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಕೆಲವು ದಿನಗಳ ಹಿಂದೆ ಮುಂಬೈನ ವೈದ್ಯರೊಬ್ಬರು ಆನ್​ಲೈನ್​ ಮೂಲಕ ತರಿಸಿದ್ದ ಕೋನ್​ ಐಸ್​ಕ್ರೀಂನಲ್ಲಿ ಮಾನವನ ಬೆರಳು ಪತ್ತೆಯಾಗಿತ್ತು. ಬಳಿಕ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಇದೀಗ ಆ ಬೆರಳು ಐಸ್​ಕ್ರೀಂ ತಯಾರಿಕಾ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯದ್ದು ಎನ್ನಲಾಗುತ್ತಿದೆ. ಈ ಐಸ್​ಕ್ರೀಂ ಫ್ಯಾಕ್ಟರಿ ಪುಣೆಯಲ್ಲಿದೆ, ಪೊಲೀಸರು ಅಲ್ಲಿಗೆ ತೆರಳಿ ವಿಚಾರಣೆ ನಡೆಸಿದಾಗ ಕೆಲ ದಿನಗಳ ಹಿಂದೆ ಇಲ್ಲಿ ಕೆಲಸ ಮಾಡುವವರ ಕೈಬೆರಳು ಕತ್ತರಿಸಿದ್ದ ವಿಚಾರ ಬೆಳಕಿಗೆ ಬಂದಿದೆ.

ಈಗ ಅದು ನಿಜವೋ ಸುಳ್ಳೋ ಗೊತ್ತಿಲ್ಲ, ಕತ್ತರಿಸಿದ ಬೆರಳು ಆ ನೌಕರನದ್ದೇ ಇರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ. ಕ್ತಿಯ ಡಿಎನ್‌ಎ ಮಾದರಿಗಳನ್ನು ಪರೀಕ್ಷೆಗಾಗಿ ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದೆ, ಶೀಘ್ರದಲ್ಲೇ ವರದಿ ಹೊರಬೀಳಲಿದೆ.

ಮತ್ತಷ್ಟು ಓದಿ: ಆನ್​ಲೈನ್​ ಮೂಲಕ ಆರ್ಡರ್​ ಮಾಡಿದ್ದ ಐಸ್​ಕ್ರೀಂನಲ್ಲಿ ಮನುಷ್ಯನ ಬೆರಳು ಪತ್ತೆ

Yummo ಐಸ್ ಕ್ರೀಮ್ ಒಂದು ಹೆಸರಾಂತ ಬ್ರ್ಯಾಂಡ್ ಎಂದು ಹೇಳಲಾಗುತ್ತಿದೆ. ಈಗ ಪೊಲೀಸರು ಮುಂದಿನ ಕ್ರಮ ಏನು ಎಂಬುದು ವರದಿ ಬಂದ ನಂತರವೇ ತಿಳಿದುಬರಲಿದೆ.

ಅಮೆಜಾನ್ ಕವರ್​ನಲ್ಲಿ ಹಾವು ಪತ್ತೆ ಬೆಂಗಳೂರಿನಲ್ಲಿ ಡೆಲಿವರಿಯಾದ ಅಮೆಜಾನ್​ ಪ್ಯಾಕೆಟ್​ನಲ್ಲಿ ಹಾವು ಪತ್ತೆಯಾಗಿತ್ತು, ಆದರೆ ಇದು ರಿಮೋಟ್​ ಕಂಟ್ರೋಲ್ಡ್​ ಹಾವಲ್ಲ, ಬದಲಾಗಿ ನಿಜವಾದ ಹಾವು ಪ್ಯಾಕೆಟ್​ನಲ್ಲಿತ್ತು. ಇನ್ನೊಂದು ಕಡೆ ಜೆಪ್ಟೋದಿಂದ ಚಾಕೊಲೇಟ್​ ಸಿರಪ್​ ಆರ್ಡರ್​ ಮಾಡಿದ್ದರೆ ಅದರಲ್ಲಿ ಸತ್ತ ಇಲಿ ಪತ್ತೆಯಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ