Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ: ಅಂದು ಐಸ್​ಕ್ರೀಂನಲ್ಲಿ ಸಿಕ್ಕ ಬೆರಳು ಯಾರದ್ದು, ಪೊಲೀಸರು ಹೇಳಿದ್ದೇನು?

ಮುಂಬೈನಲ್ಲಿ ವೈದ್ಯರೊಬ್ಬರು ಆನ್​ಲೈನ್​ ಮೂಲಕ ಬುಕ್​ ಮಾಡಿದ್ದ ಐಸ್​ಕ್ರೀಂನಲ್ಲಿ ಬೆರಳು ಪತ್ತೆಯಾದ ಪ್ರಕರಣಕ್ಕೆ ಹೊಸ ಆಯಾಮ ಸಿಕ್ಕಿದೆ, ಆ ಬೆರಳು ಯಾರದ್ದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ವೈದ್ಯರೊಬ್ಬರು ಆನ್​ಲೈನ್ ಮೂಲಕ ಮೂರು ಕೋನ್ ಐಸ್​ಕ್ರೀಂ ಆರ್ಡರ್ ಮಾಡಿದ್ದರು, ಅದರಲ್ಲಿ ಮಾನವನ ಬೆರಳು ಪತ್ತೆಯಾಗಿತ್ತು.

ಮುಂಬೈ: ಅಂದು ಐಸ್​ಕ್ರೀಂನಲ್ಲಿ ಸಿಕ್ಕ ಬೆರಳು ಯಾರದ್ದು, ಪೊಲೀಸರು ಹೇಳಿದ್ದೇನು?
ಐಸ್​ಕ್ರೀಂ
Follow us
ನಯನಾ ರಾಜೀವ್
|

Updated on: Jun 19, 2024 | 2:17 PM

ಆನ್​ಲೈನ್​ ಮೂಲಕ ತರಿಸಿದ್ದ ಐಸ್​ಕ್ರೀಂ(Ice-Cream)ನಲ್ಲಿ ಪತ್ತೆಯಾಗಿದ್ದ ಬೆರಳು ಯಾರದ್ದು ಎಂಬುದರ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಕೆಲವು ದಿನಗಳ ಹಿಂದೆ ಮುಂಬೈನ ವೈದ್ಯರೊಬ್ಬರು ಆನ್​ಲೈನ್​ ಮೂಲಕ ತರಿಸಿದ್ದ ಕೋನ್​ ಐಸ್​ಕ್ರೀಂನಲ್ಲಿ ಮಾನವನ ಬೆರಳು ಪತ್ತೆಯಾಗಿತ್ತು. ಬಳಿಕ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಇದೀಗ ಆ ಬೆರಳು ಐಸ್​ಕ್ರೀಂ ತಯಾರಿಕಾ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯದ್ದು ಎನ್ನಲಾಗುತ್ತಿದೆ. ಈ ಐಸ್​ಕ್ರೀಂ ಫ್ಯಾಕ್ಟರಿ ಪುಣೆಯಲ್ಲಿದೆ, ಪೊಲೀಸರು ಅಲ್ಲಿಗೆ ತೆರಳಿ ವಿಚಾರಣೆ ನಡೆಸಿದಾಗ ಕೆಲ ದಿನಗಳ ಹಿಂದೆ ಇಲ್ಲಿ ಕೆಲಸ ಮಾಡುವವರ ಕೈಬೆರಳು ಕತ್ತರಿಸಿದ್ದ ವಿಚಾರ ಬೆಳಕಿಗೆ ಬಂದಿದೆ.

ಈಗ ಅದು ನಿಜವೋ ಸುಳ್ಳೋ ಗೊತ್ತಿಲ್ಲ, ಕತ್ತರಿಸಿದ ಬೆರಳು ಆ ನೌಕರನದ್ದೇ ಇರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ. ಕ್ತಿಯ ಡಿಎನ್‌ಎ ಮಾದರಿಗಳನ್ನು ಪರೀಕ್ಷೆಗಾಗಿ ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದೆ, ಶೀಘ್ರದಲ್ಲೇ ವರದಿ ಹೊರಬೀಳಲಿದೆ.

ಮತ್ತಷ್ಟು ಓದಿ: ಆನ್​ಲೈನ್​ ಮೂಲಕ ಆರ್ಡರ್​ ಮಾಡಿದ್ದ ಐಸ್​ಕ್ರೀಂನಲ್ಲಿ ಮನುಷ್ಯನ ಬೆರಳು ಪತ್ತೆ

Yummo ಐಸ್ ಕ್ರೀಮ್ ಒಂದು ಹೆಸರಾಂತ ಬ್ರ್ಯಾಂಡ್ ಎಂದು ಹೇಳಲಾಗುತ್ತಿದೆ. ಈಗ ಪೊಲೀಸರು ಮುಂದಿನ ಕ್ರಮ ಏನು ಎಂಬುದು ವರದಿ ಬಂದ ನಂತರವೇ ತಿಳಿದುಬರಲಿದೆ.

ಅಮೆಜಾನ್ ಕವರ್​ನಲ್ಲಿ ಹಾವು ಪತ್ತೆ ಬೆಂಗಳೂರಿನಲ್ಲಿ ಡೆಲಿವರಿಯಾದ ಅಮೆಜಾನ್​ ಪ್ಯಾಕೆಟ್​ನಲ್ಲಿ ಹಾವು ಪತ್ತೆಯಾಗಿತ್ತು, ಆದರೆ ಇದು ರಿಮೋಟ್​ ಕಂಟ್ರೋಲ್ಡ್​ ಹಾವಲ್ಲ, ಬದಲಾಗಿ ನಿಜವಾದ ಹಾವು ಪ್ಯಾಕೆಟ್​ನಲ್ಲಿತ್ತು. ಇನ್ನೊಂದು ಕಡೆ ಜೆಪ್ಟೋದಿಂದ ಚಾಕೊಲೇಟ್​ ಸಿರಪ್​ ಆರ್ಡರ್​ ಮಾಡಿದ್ದರೆ ಅದರಲ್ಲಿ ಸತ್ತ ಇಲಿ ಪತ್ತೆಯಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ