AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ: ಅಂದು ಐಸ್​ಕ್ರೀಂನಲ್ಲಿ ಸಿಕ್ಕ ಬೆರಳು ಯಾರದ್ದು, ಪೊಲೀಸರು ಹೇಳಿದ್ದೇನು?

ಮುಂಬೈನಲ್ಲಿ ವೈದ್ಯರೊಬ್ಬರು ಆನ್​ಲೈನ್​ ಮೂಲಕ ಬುಕ್​ ಮಾಡಿದ್ದ ಐಸ್​ಕ್ರೀಂನಲ್ಲಿ ಬೆರಳು ಪತ್ತೆಯಾದ ಪ್ರಕರಣಕ್ಕೆ ಹೊಸ ಆಯಾಮ ಸಿಕ್ಕಿದೆ, ಆ ಬೆರಳು ಯಾರದ್ದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ವೈದ್ಯರೊಬ್ಬರು ಆನ್​ಲೈನ್ ಮೂಲಕ ಮೂರು ಕೋನ್ ಐಸ್​ಕ್ರೀಂ ಆರ್ಡರ್ ಮಾಡಿದ್ದರು, ಅದರಲ್ಲಿ ಮಾನವನ ಬೆರಳು ಪತ್ತೆಯಾಗಿತ್ತು.

ಮುಂಬೈ: ಅಂದು ಐಸ್​ಕ್ರೀಂನಲ್ಲಿ ಸಿಕ್ಕ ಬೆರಳು ಯಾರದ್ದು, ಪೊಲೀಸರು ಹೇಳಿದ್ದೇನು?
ಐಸ್​ಕ್ರೀಂ
ನಯನಾ ರಾಜೀವ್
|

Updated on: Jun 19, 2024 | 2:17 PM

Share

ಆನ್​ಲೈನ್​ ಮೂಲಕ ತರಿಸಿದ್ದ ಐಸ್​ಕ್ರೀಂ(Ice-Cream)ನಲ್ಲಿ ಪತ್ತೆಯಾಗಿದ್ದ ಬೆರಳು ಯಾರದ್ದು ಎಂಬುದರ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಕೆಲವು ದಿನಗಳ ಹಿಂದೆ ಮುಂಬೈನ ವೈದ್ಯರೊಬ್ಬರು ಆನ್​ಲೈನ್​ ಮೂಲಕ ತರಿಸಿದ್ದ ಕೋನ್​ ಐಸ್​ಕ್ರೀಂನಲ್ಲಿ ಮಾನವನ ಬೆರಳು ಪತ್ತೆಯಾಗಿತ್ತು. ಬಳಿಕ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಇದೀಗ ಆ ಬೆರಳು ಐಸ್​ಕ್ರೀಂ ತಯಾರಿಕಾ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯದ್ದು ಎನ್ನಲಾಗುತ್ತಿದೆ. ಈ ಐಸ್​ಕ್ರೀಂ ಫ್ಯಾಕ್ಟರಿ ಪುಣೆಯಲ್ಲಿದೆ, ಪೊಲೀಸರು ಅಲ್ಲಿಗೆ ತೆರಳಿ ವಿಚಾರಣೆ ನಡೆಸಿದಾಗ ಕೆಲ ದಿನಗಳ ಹಿಂದೆ ಇಲ್ಲಿ ಕೆಲಸ ಮಾಡುವವರ ಕೈಬೆರಳು ಕತ್ತರಿಸಿದ್ದ ವಿಚಾರ ಬೆಳಕಿಗೆ ಬಂದಿದೆ.

ಈಗ ಅದು ನಿಜವೋ ಸುಳ್ಳೋ ಗೊತ್ತಿಲ್ಲ, ಕತ್ತರಿಸಿದ ಬೆರಳು ಆ ನೌಕರನದ್ದೇ ಇರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ. ಕ್ತಿಯ ಡಿಎನ್‌ಎ ಮಾದರಿಗಳನ್ನು ಪರೀಕ್ಷೆಗಾಗಿ ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದೆ, ಶೀಘ್ರದಲ್ಲೇ ವರದಿ ಹೊರಬೀಳಲಿದೆ.

ಮತ್ತಷ್ಟು ಓದಿ: ಆನ್​ಲೈನ್​ ಮೂಲಕ ಆರ್ಡರ್​ ಮಾಡಿದ್ದ ಐಸ್​ಕ್ರೀಂನಲ್ಲಿ ಮನುಷ್ಯನ ಬೆರಳು ಪತ್ತೆ

Yummo ಐಸ್ ಕ್ರೀಮ್ ಒಂದು ಹೆಸರಾಂತ ಬ್ರ್ಯಾಂಡ್ ಎಂದು ಹೇಳಲಾಗುತ್ತಿದೆ. ಈಗ ಪೊಲೀಸರು ಮುಂದಿನ ಕ್ರಮ ಏನು ಎಂಬುದು ವರದಿ ಬಂದ ನಂತರವೇ ತಿಳಿದುಬರಲಿದೆ.

ಅಮೆಜಾನ್ ಕವರ್​ನಲ್ಲಿ ಹಾವು ಪತ್ತೆ ಬೆಂಗಳೂರಿನಲ್ಲಿ ಡೆಲಿವರಿಯಾದ ಅಮೆಜಾನ್​ ಪ್ಯಾಕೆಟ್​ನಲ್ಲಿ ಹಾವು ಪತ್ತೆಯಾಗಿತ್ತು, ಆದರೆ ಇದು ರಿಮೋಟ್​ ಕಂಟ್ರೋಲ್ಡ್​ ಹಾವಲ್ಲ, ಬದಲಾಗಿ ನಿಜವಾದ ಹಾವು ಪ್ಯಾಕೆಟ್​ನಲ್ಲಿತ್ತು. ಇನ್ನೊಂದು ಕಡೆ ಜೆಪ್ಟೋದಿಂದ ಚಾಕೊಲೇಟ್​ ಸಿರಪ್​ ಆರ್ಡರ್​ ಮಾಡಿದ್ದರೆ ಅದರಲ್ಲಿ ಸತ್ತ ಇಲಿ ಪತ್ತೆಯಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ