AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಬಾ ಸಿದ್ದಿಕಿ ಹಂತಕರಿಗೆ ಶಸ್ತ್ರಾಸ್ತ್ರ ಒದಗಿಸಿದ್ದು ಲಾರೆನ್ಸ್​ ಬಿಷ್ಣೋಯ್​ ಗ್ಯಾಂಗ್​

ಮಹಾರಾಷ್ಟ್ರ ಮಾಜಿ ಸಚಿವ ಬಾಬಾ ಸಿದ್ದಿಕಿ ಹಂತಕರಿಗೆ ಲಾರೆನ್ಸ್​ ಬಿಷ್ಣೋಯ್​ ಗ್ಯಾಂಗ್​ ಶಸ್ತ್ರಾಸ್ತ್ರ ಪೂರೈಸಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಾಬಾ ಸಿದ್ದಿಕಿ ಹತ್ಯೆಯ ಹೊಣೆಯನ್ನು ಶುಭಂ ಲೋಂಕರ್ ಹೊತ್ತುಕೊಂಡಿದ್ದಾರೆ, ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಶುಭಂ ಪೋಷ್ಟ್​ ಮಾಡಿದ್ದಾರೆ. ಲಾರೆನ್ಸ್​ ಬಿಷ್ಣೋಯ್ ಪರವಾಗಿ ಶುಭಂ ಕೊಲೆ ಹೊಣೆ ಹೊತ್ತುಕೊಂಡಿದ್ದಾರೆ.

ಬಾಬಾ ಸಿದ್ದಿಕಿ ಹಂತಕರಿಗೆ ಶಸ್ತ್ರಾಸ್ತ್ರ ಒದಗಿಸಿದ್ದು ಲಾರೆನ್ಸ್​ ಬಿಷ್ಣೋಯ್​ ಗ್ಯಾಂಗ್​
ಬಾಬಾ ಸಿದ್ದಿಕಿImage Credit source: The Hindu
ನಯನಾ ರಾಜೀವ್
|

Updated on: Oct 15, 2024 | 12:18 PM

Share

ಮಹಾರಾಷ್ಟ್ರ ಮಾಜಿ ಸಚಿವ ಬಾಬಾ ಸಿದ್ದಿಕಿ(Baba Siddique) ಹಂತಕರಿಗೆ ಲಾರೆನ್ಸ್​ ಬಿಷ್ಣೋಯ್​ ಗ್ಯಾಂಗ್​ ಶಸ್ತ್ರಾಸ್ತ್ರ ಪೂರೈಸಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಾಬಾ ಸಿದ್ದಿಕಿ ಹತ್ಯೆಯ ಹೊಣೆಯನ್ನು ಶುಭಂ ಲೋಂಕರ್ ಹೊತ್ತುಕೊಂಡಿದ್ದಾರೆ, ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಶುಭಂ ಪೋಷ್ಟ್​ ಮಾಡಿದ್ದಾರೆ. ಲಾರೆನ್ಸ್​ ಬಿಷ್ಣೋಯ್ ಪರವಾಗಿ ಶುಭಂ ಕೊಲೆ ಹೊಣೆ ಹೊತ್ತುಕೊಂಡಿದ್ದಾರೆ.

ಶುಭಂ ಅವರ ಸಹೋದರ ಪ್ರವೀಣ್ ಲೋಂಕರ್ ಅವರು ಶೂಟರ್‌ಗಳಿಗೆ ಆರ್ಥಿಕ ಮತ್ತು ಲಾಜಿಸ್ಟಿಕಲ್ ಬೆಂಬಲವನ್ನು ನೀಡಿದ್ದಾರೆ. ಇಬ್ಬರು ಸಹೋದರರು, ಹಲವಾರು ಸಹಚರರೊಂದಿಗೆ, ಕೊಲೆ ಕುರಿತು ಸಂಚು ರೂಪಿಸಲು ಹಲವು ಸಭೆಗಳನ್ನು ನಡೆಸಿದ್ದರು.

ಶನಿವಾರ ರಾತ್ರಿ ಬಾಬಾ ಸಿದ್ದಿಕಿ ಬಾಂದ್ರಾ ವೆಸ್ಟ್​ನಲ್ಲಿರುವ ತಮ್ಮ ನಿವಾಸಕ್ಕೆ ಕಚೇರಿಯಿಂದ ಹೊರಟ ಸಂದರ್ಭದಲ್ಲಿ ಅವರ ಮೇಲೆ ಗುಂಡಿನ ದಾಳಿ ನಡೆದಿತ್ತು. ಒಟ್ಟು ಆರು ಸುತ್ತು ಗುಂಡು ಹಾರಿಸಲಾಗಿತ್ತು, ಮೂರು ಗುಂಡುಗಳು ಸಿದ್ದಿಕಿ ದೇಹವನ್ನು ಹೊಕ್ಕಿದ್ದವು. ಆಸ್ಪತ್ರೆಗೆ ಕರೆದೊಯ್ದ ಬಳಿಕ ಅವರು ಮೃತಪಟ್ಟಿರುವುದಾಗಿ ಘೋಷಿಸಿದರು.

ಶೂಟರ್ಸ್​ ಬಂದಿದ್ದು ಸೆಪ್ಟೆಂಬರ್​ನಲ್ಲಿ

ಶೂಟರ್​ಗಳು ಸೆಪ್ಟೆಂಬರ್​ನಲ್ಲಿ ಮುಂಬೈಗೆ ಬಂದಿದ್ದರು, ಧರ್ಮರಾಜ್ ಮತ್ತು ಶಿವಕುಮಾರ್ ಮೊದಲು ಬಂದರು ಮತ್ತು ನಂತರ ಹರಿಯಾಣದಿಂದ ಗುರ್ಮೈಲ್ ಸಿಂಗ್ ಅವರೊಂದಿಗೆ ಸೇರಿಕೊಂಡಿದ್ದರು. ಆರರಿಂದ ಏಳು ಮೀಟರ್ ದೂರದಿಂದ ಗುಂಡು ಹಾರಿಸಲಾಗಿತ್ತು.

ಮತ್ತಷ್ಟು ಓದಿ: ಬಾಬಾ ಸಿದ್ದಿಕ್ ಹತ್ಯೆ ಪ್ರಕರಣ: ಹಂತಕರ ಪತ್ತೆಗೆ ದೇಶದಾದ್ಯಂತ ಬಲೆ ಬೀಸಿದ ಪೊಲೀಸ್

ಸಿದ್ದಿಕಿಗೆ ಗುಂಡು ಹಾರಿಸಿದ ಬಳಿಕ ಪೆಪ್ಪರ್ ಸ್ಪ್ರೇ ಬಳಸಿ ಸ್ಥಳದಿಂದ ಪರಾರಿಯಾಗಲು ಯತ್ನಿಸಿದರು ಆರಂಭದಲ್ಲಿ ಯಶಸ್ವಯಾದರೂ ಕೂಡ ಬಳಿಕ ಪೊಲೀಸರು ಸೆರೆಹಿಡಿದಿದ್ದಾರೆ. ಇನ್ನೂ ತಲೆಮರೆಸಿಕೊಂಡಿರುವ ಮತ್ತೊಬ್ಬ ಶಂಕಿತ ಶಿವ ಮತ್ತು ಆಪಾದಿತ ಮಾಸ್ಟರ್‌ಮೈಂಡ್ ಮೊಹಮ್ಮದ್ ಜೀಶನ್ ಅಖ್ತರ್‌ಗಾಗಿ ಅಧಿಕಾರಿಗಳು ಶೋಧ ನಡೆಸಲಾಗುತ್ತಿದೆ.

ಹಿಟ್​ ಲಿಸ್ಟ್​ನಲ್ಲಿ ಜೀಶನ್ ಸಿದ್ದಿಕಿ ಮಾಜಿ ಸಚಿವ ಮತ್ತು ಅಜಿತ್ ಪವಾರ್ ಬಣದ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ವಿಚಾರಣೆಯಲ್ಲಿ ಮಹತ್ವದ ಅಂಶಗಳು ಬಹಿರಂಗವಾಗಿವೆ. ಹತ್ಯೆ ಆರೋಪ ಹೊತ್ತಿರುವ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಹಿಟ್ ಲಿಸ್ಟ್‌ನಲ್ಲಿ ಬಾಬಾ ಸಿದ್ದಿಕಿ ಅವರ ಮಗ ಮತ್ತು ಕಾಂಗ್ರೆಸ್ ಶಾಸಕ ಜೀಶನ್ ಸಿದ್ದಿಕಿ ಕೂಡ ಇದ್ದ ಎಂಬುದು ಗೊತ್ತಾಗಿದೆ.

ಬಿಷ್ಣೋಯ್ ಗ್ಯಾಂಗ್ ಬಾಬಾ ಸಿದ್ದಿಕಿ ಜೊತೆಗೆ ಜೀಶನ್ ಸಿದ್ದಿಕಿಯನ್ನು ಕೊಲ್ಲಲು ನಿರ್ಧರಿಸಿತ್ತು. ಸಿದ್ಧಿಕಿ ಹತ್ಯೆ ದಿನದಂದು ಇಬ್ಬರನ್ನು ಅಥವಾ ಯಾರು ಸಿಗುತ್ತಾರೋ ಅವರನ್ನು ಕೊಲ್ಲುವಂತೆ ಆರೋಪಿಗಳಿಗೆ ಗ್ಯಾಂಗ್ ಸೂಚಿಸಿತ್ತು ಎಂದು ತಿಳಿದು ಬಂದಿದೆ.

ಆರೋಪಿ ಶಿವಕುಮಾರ್ ಶಾಸಕನ ಮೇಲೆ ಐದಾರು ಸುತ್ತು ಗುಂಡು ಹಾರಿಸಿ ಜನರಲ್ಲಿ ನುಸುಳಿ ಪರಾರಿಯಾಗಿದ್ದಾನೆ. ಸಿಂಗ್ ಮತ್ತು ಧರ್ಮರಾಜ್ ಕಶ್ಯಪ್ ಮಾತ್ರ ಸಿಕ್ಕಿಬಿದ್ದಿದ್ದಾರೆ. ಆರೋಪಿಗಳು ಓಡುತ್ತಿರುವುದು ಕಂಡ ಫೋನ್ ಕಳ್ಳರು ಎಂದು ಜನರು ಭಾವಿಸಿದ್ದರು. ಶಾಸಕನ ಕೊಲೆಗೆ ಮೊದಲೇ ಪೂರ್ವನಿಯೋಜಿತ ಸಂಚು ರೂಪಿಸಲಾಗಿತ್ತು. 25 ಲಕ್ಷ ಸುಪಾರಿಯಲ್ಲಿ ಮೂವರು ಆರೋಪಿಗಳಿಗೆ 50 ಸಾವಿರ ರೂಪಾಯಿ ಮುಂಗಡ ನೀಡಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ