AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಮು ಗಲಭೆ ಸೃಷ್ಟಿಸಲು ಹಿಂದೂ ಮಹಾ ಸಭಾದ ಕಾರ್ಯಕರ್ತರಿಂದ ಗೋಹತ್ಯೆ: ಯುಪಿ ಪೊಲೀಸ್

ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಆಗ್ರಾದಲ್ಲಿ ಕೋಮುಗಲಭೆಯನ್ನು ಪ್ರಚೋದಿಸಲು ಭಾರತ ಹಿಂದೂ ಮಹಾಸಭಾದ ಕೆಲವು ಸದಸ್ಯರು ಗೋಹತ್ಯೆ ಮಾಡಿದ್ದಾರೆ ಎಂಬುದನ್ನು ಉತ್ತರ ಪ್ರದೇಶ ಪೊಲೀಸರು ಬಹಿರಂಗಪಡಿಸಿದ್ದಾರೆ.

ಕೋಮು ಗಲಭೆ ಸೃಷ್ಟಿಸಲು ಹಿಂದೂ ಮಹಾ ಸಭಾದ ಕಾರ್ಯಕರ್ತರಿಂದ ಗೋಹತ್ಯೆ: ಯುಪಿ ಪೊಲೀಸ್
ಆರೋಪಿಗಳು
ನಯನಾ ರಾಜೀವ್
|

Updated on: Apr 09, 2023 | 8:40 AM

Share

ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಆಗ್ರಾದಲ್ಲಿ ಕೋಮುಗಲಭೆಯನ್ನು ಪ್ರಚೋದಿಸಲು ಭಾರತ ಹಿಂದೂ ಮಹಾಸಭಾದ ಕೆಲವು ಸದಸ್ಯರು ಗೋಹತ್ಯೆ ಮಾಡಿದ್ದಾರೆ ಎಂಬುದನ್ನು ಉತ್ತರ ಪ್ರದೇಶ ಪೊಲೀಸರು ಬಹಿರಂಗಪಡಿಸಿದ್ದಾರೆ. ರಾಮನವಮಿಯಂದು ಗೋಹತ್ಯೆ ಆರೋಪದ ಮೇಲೆ ನಾಲ್ವರು ಯುವಕರನ್ನು ಆಗ್ರಾ ಪೊಲೀಸರು ಬಂಧಿಸಿದ್ದರು. ಆಗ್ರಾದ ಎತ್ಮದುದ್ದೌಲಾ ಪ್ರದೇಶದ ಗೌತಮ್ ನಗರದಲ್ಲಿ ರಾಮನವಮಿ ಆಚರಣೆ ವೇಳೆ ದಾಳಿ ನಡೆಸಿ ಯುವಕರನ್ನು ಬಂಧಿಸಲಾಗಿದೆ. ಭಾರತ್ ಹಿಂದೂ ಮಹಾಸಭಾದ ಹಲವಾರು ಪದಾಧಿಕಾರಿಗಳ ಹೆಸರುಗಳು ಗೋಹತ್ಯೆ ಸಂಚಿನಲ್ಲಿ ಕಾಣಿಸಿಕೊಂಡಿವೆ ಎಂದು ಪ್ರಾದೇಶಿಕ ಪೊಲೀಸರು ಇಂಡಿಯಾ ಟುಡೇಗೆ ತಿಳಿಸಿದ್ದಾರೆ.

ರಾಮನವಮಿಯಂದು ತಾವೇ ಗೋ ಹತ್ಯೆ ಮಾಡಿ ಕೋಮು ಗಲಭೆ ಸೃಷ್ಟಿಸಲು ಹಿಂದೂ ಮಹಾಸಭಾದ ಕಾರ್ಯಕರ್ತರು ಪ್ರಯತ್ನಿಸಿದ್ದರು ಎನ್ನುವ ಸ್ಫೋಟಕ ಹೇಳಿಕೆಯನ್ನು ಉತ್ತರ ಪ್ರದೇಶ ಪೊಲೀಸರು ನೀಡಿದ್ದಾರೆ. ರಾಮನವಮಿಯಂದು ಆಗ್ರಾದ ವಾತಾವರಣವನ್ನು ಹಾಳು ಮಾಡಲು ಸಂಚು ರೂಪಿಸಲಾಗಿತ್ತು.

ಮತ್ತಷ್ಟು ಓದಿ: ರಾಮನವಮಿ ವೇಳೆ ಕೋಮು ಗಲಭೆ ಬಗ್ಗೆ ನ್ಯಾಯಾಂಗ ತನಿಖೆ ಕೋರಿ ಸಲ್ಲಿಸಿದ್ದ ಮನವಿ ವಜಾಗೊಳಿಸಿದ ಸುಪ್ರೀಂಕೋರ್ಟ್

ಗೌತಮ್ ನಗರದ ಬಳಿ ಮಾರ್ಚ್​ 30 ರಂದು ಗೋಹತ್ಯೆಗೆ ಸಂಚು ರೂಪಿಸಿದ್ದರು. ಇದೀಗ ಪೊಲೀಸರು ಈ ಘಟನೆಯನ್ನು ಬಹಿರಂಗಪಡಿಸಿದ್ದಾರೆ. ಇಬ್ಬರು ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಆರಕ್ಕೂ ಅಧಿಕ ಮಂದಿ ತಲೆ ಮರೆಸಿಕೊಂಡಿದ್ದು ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ಅಖಿಲ ಭಾರತ ಹಿಂದೂ ಮಹಾಸಭಾದ ಜಿತೇಂದ್ರ ಕುಶ್ವಾಹ ಅವರು ಗೋ ಹತ್ಯೆ ಪ್ರಕರಣವನ್ನು ದಾಖಲಿಸಿದ್ದರು. ಲೋಹಮಂಡಿ ನಿವಾಸಿಗಳಾದ ರಿಜ್ವಾನ್, ನಕೀಂ, ಬಿಜ್ಜು ಮೊದಲಾದವರ ಹೆಸರುಗಳನ್ನು ಹೇಳಲಾಗಿತ್ತು. ಈ ಕುರಿತು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ ಪೊಲೀಸರು ಇಲ್ಲಿ ಹೆಸರಿಸಲಾಗಿರುವ ಆರೋಪಿಗಳಿಗೂ ಹಾಗೂ ಗೋ ಹತ್ಯೆಗೂ ಯಾವುದೇ ಸಂಬಂಧವಿಲ್ಲ ಎಂಬುದು ತಿಳಿದುಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್