AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಹಿರಿಯ ನಾಯಕ ಪವನ್ ಖೇರಾರನ್ನು ಇಂಡಿಗೊ ವಿಮಾನದಿಂದ ಇಳಿಸಿದ ಪೊಲೀಸ್

Pawan Khera ಎಲ್ಲರೂ ವಿಮಾನದಲ್ಲಿ ಕುಳಿತಿದ್ದರು, ಅದೇ ಸಮಯದಲ್ಲಿ ನಮ್ಮ ಪವನ್ ಖೇರಾ ಅವರಲ್ಲಿ ವಿಮಾನದಿಂದ ಇಳಿಯಲು ಕೇಳಲಾಯಿತು.ಇದು ಸರ್ವಾಧಿಕಾರಿ ವರ್ತನೆ. ಸರ್ವಾಧಿಕಾರಿಯು ಅಧಿವೇಶನಕ್ಕೆ ಮುಂಚಿತವಾಗಿ ಇಡಿ ದಾಳಿಗಳನ್ನು ಮಾಡಿದ್ದಾರೆ

ರಶ್ಮಿ ಕಲ್ಲಕಟ್ಟ
|

Updated on:Feb 23, 2023 | 2:30 PM

Share

ಕಾಂಗ್ರೆಸ್(Congress) ಹಿರಿಯ ನಾಯಕ ಪವನ್ ಖೇರಾ (Pawan Khera) ಅವರನ್ನು ಇಂಡಿಗೊ(Indigo) ವಿಮಾನದಿಂದ ಇಳಿಸಿದ ಘಟನೆ ಇಂದು (ಗುರುವಾರ) ನಡೆದಿದೆ  ದೆಹಲಿಯಿಂದ ಇಂಡಿಗೊ ಫ್ಲೈಟ್ 6 ಇ -204 ರಿಂದ ರಾಯಪುರಕ್ಕೆ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಎಲ್ಲರೂ ವಿಮಾನದಲ್ಲಿ ಕುಳಿತಿದ್ದರು, ಅದೇ ಸಮಯದಲ್ಲಿ ನಮ್ಮ ಪವನ್ ಖೇರಾ ಅವರಲ್ಲಿ ವಿಮಾನದಿಂದ ಇಳಿಯಲು ಕೇಳಲಾಯಿತು.ಇದು ಸರ್ವಾಧಿಕಾರಿ ವರ್ತನೆ. ಸರ್ವಾಧಿಕಾರಿಯು ಅಧಿವೇಶನಕ್ಕೆ ಮುಂಚಿತವಾಗಿ ಇಡಿ ದಾಳಿಗಳನ್ನು ಮಾಡಿದ್ದಾರೆ ಈಗ ಅಂತಹ ಕಾರ್ಯಕ್ಕೆ ಇಳಿದಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.

ದೆಹಲಿ ವಿಮಾನ ನಿಲ್ದಾಣದಲ್ಲಿ ಪವನ್ ಖೇರಾರನ್ನು ಬಂಧಿಸುವ ಪ್ರಯತ್ನ ನಡೆದಿದೆ ಎಂದು ಕಾಂಗ್ರೆಸ್ ಆರೋಪಿಸಿ ಪ್ರತಿಭಟನೆ ನಡೆಸಿದೆ. ಪವನ್ ಖೇರಾ ಅವರನ್ನು ರಾಯಪುರಕ್ಕೆ ವಿಮಾನದಲ್ಲಿ ಕರೆದೊಯ್ಯುವಂತಿಲ್ಲ ಎಂಬ ಸೂಚನೆಗಳಿವೆ ಎಂದು ಇಂಡಿಗೊ ವಿಮಾನಯಾನ ಸಂಸ್ಥೆಗಳು ತಿಳಿಸಿವೆ.

ದೆಹಲಿ  ವಿಮಾನ ನಿಲ್ದಾಣದಲ್ಲಿ  ವಿಮಾನದಿಂದ ಇಳಿಸಿದ ಕೂಡಲೇ ಅಸ್ಸಾಂ ಪೊಲೀಸರು ಖೇರಾ ಅವರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ:ಮುಂದಿನ ವಾರ ಭಾರತಕ್ಕೆ ಬಿಲ್ ಗೇಟ್ಸ್; ಭಾರತವನ್ನು ಹಾಡಿ ಹೊಗಳಿದ ಮೈಕ್ರೋಸಾಫ್ಟ್ ಸಹಸ್ಥಾಪಕ

ಪ್ರಧಾನಿ ನರೇಂದ್ರ ಮೋದಿಯವರನ್ನು ಅವಮಾನಿಸಿದ ಆರೋಪದ ಮೇಲೆ ಬಿಜೆಪಿ ಖೇರಾ ಬಂಧನಕ್ಕೆ ಒತ್ತಾಯಿಸಿದೆ. ಇತ್ತೀಚಿನ ಪತ್ರಿಕಾಗೋಷ್ಠಿಯಲ್ಲಿ ಖೇರಾ ಅವರು ಪ್ರಧಾನಿ ಮೋದಿ ಹೆಸರನ್ನು ಲೇವಡಿ ಮಾಡಿದ್ದಾರೆ. ನರಸಿಂಹ ರಾವ್ ಜೆಪಿಸಿ (ಜಂಟಿ ಸಂಸದೀಯ ಸಮಿತಿ) ರಚಿಸಬಹುದಾದರೆ, ಅಟಲ್ ಬಿಹಾರಿ ವಾಜಪೇಯಿ ಜೆಪಿಸಿ ರಚಿಸಬಹುದಾದರೆ, ನರೇಂದ್ರ ಗೌತಮ್ ದಾಸ್ – ಕ್ಷಮಿಸಿ, ದಾಮೋದರ್ ದಾಸ್ ಮೋದಿಗೆ ಏನು ಸಮಸ್ಯೆ ಎಂದಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:26 pm, Thu, 23 February 23

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್