AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರಿಕಿರಿ ಆಗುತ್ತಿದೆ ಎಂದು ಮೋಹಿನಿಯಾಟ್ಟಂ ನೃತ್ಯ ಅರ್ಧಕ್ಕೆ ನಿಲ್ಲಿಸಿದ ನ್ಯಾಯಾಧೀಶ ಕಲಂ ಪಾಷಾ; ಅವಮಾನದಿಂದ ಕಣ್ಣೀರು ಹಾಕಿದ ಕಲಾವಿದೆ

ಕೇರಳದ ವಿವಿಧ ಭಾಗಗಳಲ್ಲಿ ವಾಸಿಸುವ ಕಲಾವಿದರನ್ನು ಒಳಗೊಂಡ ತಂಡ ನಮ್ಮದು. ನಾವೆಲ್ಲರೂ ಈ ಕಾರ್ಯಕ್ರಮಕ್ಕಾಗಿ ತುಂಬ ರಿಹರ್ಸಲ್​ ಮಾಡಿ, ಉತ್ಸಾಹದಿಂದ ತಯಾರಾಗಿದ್ದೆವು. ಆದರೆ ಅಂದು ನ್ಯಾಯಾಧೀಶರಾದ ಕಲಾಂ ಪಾಷಾರಿಗೆ ಕಿರಿಕಿರಿಯಾದ ಕಾರಣಕ್ಕೆ ನಮ್ಮನ್ನು ತಡೆಯಲಾಯಿತು ಎಂದು ನೀನಾ ಪ್ರಸಾದ್​ ಹೇಳಿದ್ದಾರೆ.

ಕಿರಿಕಿರಿ ಆಗುತ್ತಿದೆ ಎಂದು ಮೋಹಿನಿಯಾಟ್ಟಂ ನೃತ್ಯ ಅರ್ಧಕ್ಕೆ ನಿಲ್ಲಿಸಿದ ನ್ಯಾಯಾಧೀಶ ಕಲಂ ಪಾಷಾ; ಅವಮಾನದಿಂದ ಕಣ್ಣೀರು ಹಾಕಿದ ಕಲಾವಿದೆ
ಡಾ. ನೀನಾ ಪ್ರಸಾದ್​
TV9 Web
| Updated By: Lakshmi Hegde|

Updated on:Mar 24, 2022 | 3:54 PM

Share

‘ನನಗೆ ತುಂಬ ನೋವಾಗಿದೆ. ಹೃದಯವೇ ಕಿತ್ತು ಬಾಯಿಗೆ ಬರುವಷ್ಟು ಸಂಕಟವಾಗಿದೆ..ನೃತ್ಯವನ್ನು ನಿಲ್ಲಿಸುವಂತೆ ಹೇಳಿದ್ದು ಕೇವಲ ನನಗೆ ಮಾಡಿದ ಅವಮಾನವಲ್ಲ, ಕಲೆಗೆ-ಇಡೀ ಕೇರಳದ ಸಂಸ್ಕೃತಿಗೆ ಮಾಡಿದ ಅವಮಾನ’-ಇದು ಖ್ಯಾತ ಮೋಹಿನಿಯಾಟ್ಟಂ ನೃತ್ಯ ಕಲಾವಿದೆ ಡಾ. ನೀನಾ ಪ್ರಸಾದ್​ ನೋವಿನ ನುಡಿಗಳು. ಮಾರ್ಚ್​ 19ರಂದು ನಡೆದ ಕಹಿ ಘಟನೆಯನ್ನು ಜೀವನದಲ್ಲಿ ನೆನಪಿಸಿಕೊಳ್ಳಲೂ ಇಷ್ಟವಿಲ್ಲ ಎಂದೂ ಅವರು ಹೇಳಿದ್ದಾಗಿ ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ. ಅಂದಿನ ಘಟನೆಗೆ ರಾಜಕಾರಣಿಗಳು, ಸಾಮಾನ್ಯ ಜನರು, ನೆಟ್ಟಿಗರು ಖಂಡನೆ ವ್ಯಕ್ತಪಡಿಸುತ್ತಿದ್ದಾರೆ. 

ನೀನಾ ಪ್ರಸಾದ್​ ಮೋಹಿನಿಯಾಟ್ಟಂ ಕಲಾವಿದೆ. ಮಾರ್ಚ್​ 19ರಂದು ಸಂಜೆ ಪಾಲಕ್ಕಾಡ್​ ಜಿಲ್ಲೆಯ, ಸರ್ಕಾರಿ ಮೋಯನ್​ ಕಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಇವರ ನೃತ್ಯಪ್ರದರ್ಶನ ಸಮಾರಂಭ ನಡೆಯುತ್ತಿತ್ತು. ಸಹಕಲಾವಿದರೊಟ್ಟಿಗೆ ಮನಮೋಹಕವಾಗಿ ಇವರು ನೃತ್ಯ ಮಾಡುತ್ತಿದ್ದರೆ, ಪ್ರೇಕ್ಷಕರೂ ತಲ್ಲೀನರಾಗಿ ನೋಡುತ್ತಿದ್ದರು. ಆದರೆ ಒಮ್ಮೆಲೇ ಬಂದ ಪೊಲೀಸರು ಕಾರ್ಯಕ್ರಮವನ್ನು ನಿಲ್ಲಿಸುವಂತೆ ಆದೇಶಿಸಿದ್ದರು. ಅದಕ್ಕೆ ಕಾರಣ ಕಾರ್ಯಕ್ರಮ ನಡೆಯುತ್ತಿರುವ ಶಾಲೆಯ ಸಮೀಪದಲ್ಲೇ ವಾಸವಾಗಿದ್ದ ಪಾಲಕ್ಕಾಡ್ ಜಿಲ್ಲಾ ನ್ಯಾಯಾಧೀಶ ಕಲಂ ಪಾಷಾ. ನೃತ್ಯ ಸಮಾರಂಭದಿಂದ ತೊಂದರೆಯಾಗುತ್ತಿದೆ, ಸ್ಪೀಕರ್​​ನಲ್ಲಿ ದೊಡ್ಡದಾಗಿ ಹಾಡು ಕೇಳುತ್ತಿದ್ದು ಇದರಿಂದ ಕಿರಿಕಿಯಾಗುತ್ತದೆ, ಹಾಗಾಗಿ ಕಾರ್ಯಕ್ರಮ ನಿಲ್ಲಿಸಿ ಎಂದು ಕಲಂ ಪಾಷಾ ಪೊಲೀಸರಿಗೆ ಆದೇಶ ನೀಡಿದ್ದರು. ಅವರ ಸೂಚನೆಯ ಹಿನ್ನೆಲೆಯಲ್ಲಿ ಪೊಲೀಸರು ಬಂದು ಕಾರ್ಯಕ್ರಮ ರದ್ದುಗೊಳಿಸಿದ್ದರು. ಆದರೆ ಅಂದು ನೀನಾ ಪ್ರಸಾದ್ ಮತ್ತು ಸಹಕಲಾವಿದರೆಲ್ಲರೂ ಕಣ್ಣಲ್ಲಿ ನೀರು ತುಂಬಿಕೊಂಡು ವೇದಿಕೆಯಿಂದ ಇಳಿದು ಹೋಗಿದ್ದಾರೆ. ಘಟನೆ ನಡೆದು ಐದು ದಿನಗಳಾಗಿದ್ದು, ಸೋಷಿಯಲ್ ಮೀಡಿಯಾದಂತೂ ವ್ಯಾಪಕ ಚರ್ಚೆಯಾಗುತ್ತಿದೆ. ರಾಜಕಾರಣಿಗಳೂ ಕೂಡ ಇದನ್ನು ಖಂಡಿಸುತ್ತಿದ್ದು, ಕೇರಳವೂ ತಾಲಿಬಾನ್​ ಆಡಳಿತಕ್ಕೊಳಪಟ್ಟ ಅಫ್ಘಾನಿಸ್ತಾನದಂತೆ ಆಗುತ್ತಿದೆ ಎಂದು ಆರೋಪಿಸಲಾಗುತ್ತಿದೆ.

ನೃತ್ಯವನ್ನು ಅರ್ಧಕ್ಕೆ ನಿಲ್ಲಿಸಿದ್ದರಿಂದ ಬೇಸರಗೊಂಡ ನೃತ್ಯ ಕಲಾವಿದೆ ನೀನಾ ಪ್ರಸಾದ್​ ತಮ್ಮ ಸಾಮಾಜಿಕ ಜಾಲತಾಣಗಳಲ್ಲೂ ಪೋಸ್ಟ್ ಹಾಕಿದ್ದರು. ಮಾ.19ರಂದು ರಾತ್ರಿ 8ಗಂಟೆಗೆ ಶುರವಾಗಬೇಕಿದ್ದ ನಮ್ಮ ಮೋಹಿನಿಯಾಟ್ಟಂ ನೃತ್ಯ ಸ್ವಲ್ಪ ತಡವಾಗಿಯೇ ಶುರುವಾಗಿತ್ತು. ಕೇರಳದ ವಿವಿಧ ಭಾಗಗಳಲ್ಲಿ ವಾಸಿಸುವ ಕಲಾವಿದರನ್ನು ಒಳಗೊಂಡ ತಂಡ ನಮ್ಮದು. ನಾವೆಲ್ಲರೂ ಈ ಕಾರ್ಯಕ್ರಮಕ್ಕಾಗಿ ತುಂಬ ರಿಹರ್ಸಲ್​ ಮಾಡಿ, ಉತ್ಸಾಹದಿಂದ ತಯಾರಾಗಿದ್ದೆವು. ಆದರೆ ಅಂದು ನ್ಯಾಯಾಧೀಶರಾದ ಕಲಾಂ ಪಾಷಾರಿಗೆ ಕಿರಿಕಿರಿಯಾದ ಕಾರಣಕ್ಕೆ ನಮ್ಮನ್ನು ತಡೆಯಲಾಯಿತು. ನಮ್ಮ ಸಂಗೀತ-ನೃತ್ಯದಿಂದ ತೊಂದರೆಯಾಗುತ್ತಿದೆ ಎಂದು ಪೊಲೀಸರು ಬಂದು ಹೇಳಿದರು. ಕಲಾವಿದನ ಜೀವನ, ಅವರ ಕಾರ್ಯಸ್ಥಾನಕ್ಕೆ ಅದರದ್ದೇ ಆದ ಘನತೆ ಇರುತ್ತದೆ. ಗೌರವದಿಂದ ಕಾಣಬೇಕು. ನಮ್ಮಂಥ ಕಲಾವಿದರಿಗೂ ಸ್ವಾಭಿಮಾನ ಇರುತ್ತದೆ ಎಂಬುದನ್ನು ನೆನಪಿಡಬೇಕು ಎಂದು ಹೇಳಿದ್ದರು.

ಬಿಜೆಪಿ ಕೇಂದ್ರ ಸಚಿವರ ಪ್ರತಿಕ್ರಿಯೆ

ಡಾ. ನೀನಾ ಪ್ರಸಾದ್ ಸೋಷಿಯಲ್ ಮೀಡಿಯಾ ಪೋಸ್ಟ್​ನ್ನು ಶೇರ್ ಮಾಡಿಕೊಂಡಿರುವ ಕೇಂದ್ರ ವಿದೇಶಾಂಗ ಇಲಾಖೆ ರಾಜ್ಯ ಸಚಿವ ವಿ.ಮುರಳೀಧರನ್​ ಅವರು, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆಡಳಿತದಡಿಯಲ್ಲಿ ಕೇರಳವನ್ನೂ ತಾಲಿಬಾನೀಕರಣ ಮಾಡಲಾಗುತ್ತಿದೆ ಎಂಬುದಕ್ಕೆ ಇದು ಮತ್ತೊಂದು ಉದಾಹರಣೆ. ಮೋಹಿಯಾಟ್ಟಂ ಕೇರಳದ ಸಂಸ್ಕೃತಿ ಬಿಂಬಿಸುವ ನೃತ್ಯ. ಆ ನೃತ್ಯ ಪ್ರದರ್ಶನ ಮಾಡುತ್ತಿದ್ದ ನೀನಾ ಪ್ರಸಾದ್​ರನ್ನು ಅರ್ಧಕ್ಕೆ ತಡೆದದ್ದು ಖಂಡನೀಯ. ಪಿಣರಾಯಿ ವಿಜಯನ್​  ಅವರ ಕಮ್ಯೂನಿಸ್ಟ್ ಆಡಳಿತದಲ್ಲಿ ಕಲಾವಿದರಿಗೆ ಸ್ವಾತಂತ್ರ್ಯವಿಲ್ಲ ಎಂದು ಹೇಳಿದ್ದಾರೆ.

ನೃತ್ಯವನ್ನು ಅರ್ಧಕ್ಕೆ ನಿಲ್ಲಿಸಿದ್ದಕ್ಕೆ ನೋವಿನಲ್ಲಿರುವ ಕಲಾವಿದೆ ನೀನಾ ಪ್ರಸಾದ್​ ಅವರಿಗೆ ಹಲವು ಕಲಾವಿದರು ಸಮಾಧಾನ ಮಾಡಿದ್ದಾರೆ. ಹಾಗೇ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಸಾಂತ್ವನದ ಮಾತುಗಳನ್ನಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಪುರೋಗಮನ ಕಲಾಸಾಹಿತ್ಯ ಸಂಗಮದ ಅಧ್ಯಕ್ಷ ಶಾಜಿ ಎನ್​.ಕರುಣ್​ ಮತ್ತು ಪ್ರಧಾನ ಕಾರ್ಯದರ್ಶಿ ಅಶೋಕನ್ ಚರುವಿಲ್​ ಅವರು, ಕಲಾವಿದರ ಮತ್ತು ಅವರ ಸ್ವಾತಂತ್ರ್ಯದ ಮೇಲಿನ ಬೆದರಿಕೆಗಳಿಗೆ ಸಾರ್ವಜನಿಕರೇ ತಕ್ಕ ಉತ್ತರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಪೊಲೀಸ್ ವೈಫಲ್ಯಕ್ಕೆ ಯಾರು ಹೊಣೆ: ವಿಧಾನಸಭೆಯಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ

Published On - 3:53 pm, Thu, 24 March 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್