AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಾಂಕಾ ಗಾಂಧಿ ವಾದ್ರಾರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಮಹಿಳಾ ಪೊಲೀಸ್​​; ತನಿಖೆಗೆ ಆದೇಶಿಸಿದ ಆಯುಕ್ತರು

ತಮ್ಮೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಪೊಲೀಸ್​ ಮಹಿಳಾ ಸಿಬ್ಬಂದಿ ಬಗ್ಗೆ ಉತ್ತರಪ್ರದೇಶ ಸಿಎಂ ಅಸಮಾಧಾನಗೊಂಡಿದ್ದಾರೆ, ಪೊಲೀಸ್ ಹಿರಿಯ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ ಎಂದು ತಿಳಿಯುತ್ತಿದ್ದಂತೆ ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ.

ಪ್ರಿಯಾಂಕಾ ಗಾಂಧಿ ವಾದ್ರಾರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಮಹಿಳಾ ಪೊಲೀಸ್​​; ತನಿಖೆಗೆ ಆದೇಶಿಸಿದ ಆಯುಕ್ತರು
ಪ್ರಿಯಾಂಕಾ ಗಾಂಧಿ ವಾದ್ರಾರೊಂದಿಗೆ ಸೆಲ್ಫಿ ತೆಗೆದುಕೊಂಡ ಪೊಲೀಸ್​ ಸಿಬ್ಬಂದಿ
TV9 Web
| Updated By: Lakshmi Hegde|

Updated on: Oct 21, 2021 | 11:29 AM

Share

ಆಗ್ರಾದಲ್ಲಿ ಪೊಲೀಸ್​ ಕಸ್ಟಡಿಯಲ್ಲಿ ಕಾರ್ಮಿಕನೊಬ್ಬ ಮೃತಪಟ್ಟ ಹಿನ್ನೆಲೆಯಲ್ಲಿ ನಿನ್ನೆ ಅವರ ಕುಟುಂಬದವರನ್ನು ಭೇಟಿಯಾಗಲು ಪ್ರಿಯಾಂಕಾ ಗಾಂಧಿ ವಾದ್ರಾ ಲಕ್ನೋದಿಂದ ಆಗ್ರಾಕ್ಕೆ ಹೊರಟಿದ್ದಾಗ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ಆದರೆ ನಂತರ ಅವರನ್ನು ಬಿಡಲಾಯಿತಾದರೂ, ಅದಕ್ಕೂ ಮೊದಲು ಕೆಲವು ಮಹಿಳಾ ಪೊಲೀಸರು ಪ್ರಿಯಾಂಕಾ ಗಾಂಧಿಯವರೊಟ್ಟಿಗೆ ಸೆಲ್ಫೀ ಕ್ಲಿಕ್ಕಿಸಿಕೊಂಡಿದ್ದು ಇದೀಗ ವಿವಾದಕ್ಕೆ ಕಾರಣವಾಗಿದೆ. ಪ್ರಿಯಾಂಕಾ ಗಾಂಧಿಯವರನ್ನು ವಶಕ್ಕೆ ಪಡೆದ ಮಹಿಳಾ ಪೊಲೀಸರು ಅವರೊಂದಿಗೆ ತೆಗೆದುಕೊಂಡ ಫೋಟೋ ವೈರಲ್​ ಆದ ಬೆನ್ನಲ್ಲೇ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಕೂಡ ಸಿಟ್ಟಾಗಿದ್ದಾರೆ ಎಂದು ಹೇಳಲಾಗಿದೆ.

ಹೀಗೆ ಪ್ರಿಯಾಂಕಾ ಗಾಂಧಿಯವರನ್ನು ವಶಕ್ಕೆ ಪಡೆದ ಸಂದರ್ಭದಲ್ಲಿ ಅವರೊಟ್ಟಿಗೆ ಸೆಲ್ಫೀ ಕ್ಲಿಕ್ಕಿಸಿಕೊಂಡ ಮಹಿಳಾ ಪೊಲೀಸ್​ ಸಿಬ್ಬಂದಿ ವಿರುದ್ಧ ಲಕ್ನೌ ಪೊಲೀಸ್​ ಆಯುಕ್ತ ಧ್ರುವ ಕಾಂತ್​​​ ಠಾಕೂರ್​​ ಪ್ರಾಥಮಿಕ ತನಿಖೆಗೆ ಕೂಡ ಆದೇಶಿಸಿದ್ದಾರೆ.  ಈ ಮಹಿಳಾ ಪೊಲೀಸ್​ ಸಿಬ್ಬಂದಿ ಹೀಗೆ ಸೆಲ್ಫಿ ತೆಗೆದುಕೊಂಡಿದ್ದು ಪೊಲೀಸ್​​ ಇಲಾಖೆ ನಿಯಮಗಳ ಉಲ್ಲಂಘನೆಯೇ? ಎಂಬುದನ್ನು ಪರಿಶೀಲಿಸಿ, ವರದಿ ಸಲ್ಲಿಸುವ ಹೊಣೆಯನ್ನು ಕೇಂದ್ರೀಯ ವಿಭಾಗದ ಡೆಪ್ಯೂಟಿ ಕಮಿಷನರ್​ ಆಫ್​ ಪೊಲೀಸ್​​ಗೆ ವಹಿಸಲಾಗಿದೆ.  ಇವರು ನೀಡುವ ವರದಿ ಆಧಾರದ ಮೇಲೆ ಠಾಕೂರ್​ ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ.

ನನ್ನನ್ನು ಶಿಕ್ಷಿಸಿ ಇನ್ನು ತಮ್ಮೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಪೊಲೀಸ್​ ಮಹಿಳಾ ಸಿಬ್ಬಂದಿ ಬಗ್ಗೆ ಉತ್ತರಪ್ರದೇಶ ಸಿಎಂ ಅಸಮಾಧಾನಗೊಂಡಿದ್ದಾರೆ, ಪೊಲೀಸ್ ಹಿರಿಯ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ ಎಂದು ತಿಳಿಯುತ್ತಿದ್ದಂತೆ ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ. ಮಹಿಳಾ ಪೊಲೀಸರು ನನ್ನೊಂದಿಗೆ ತೆಗೆಸಿಕೊಂಡ ಸೆಲ್ಫಿಯಿಂದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​​ರಿಗೆ ತುಂಬ ನೋವಾಗಿದೆ ಎಂದು ಗೊತ್ತಾಯಿತು. ನನ್ನೊಂದಿಗೆ ಫೋಟೋ ತೆಗೆದುಕೊಳ್ಳುವುದು ಅಪರಾಧವಾಗುತ್ತದೆ ಅಂತಾದ ಮೇಲೆ ಅಲ್ಲಿ ಕ್ರೈಂಗೆ ಕಾರಣ ನಾನಾಗುತ್ತೇನೆ. ಹಾಗಾಗಿ ನನಗೆ ಶಿಕ್ಷೆ ನೀಡಬೇಕು. ಈ ನಿಷ್ಠಾವಂತ, ಶ್ರಮಜೀವಿ ಪೊಲೀಸ್​ ಸಿಬ್ಬಂದಿಯ ವೃತ್ತಿ ಜೀವನವನ್ನು ಹಾಳುಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.

2 ಲಕ್ಷ ರೂ. ಹಣ ಕದ್ದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಆಗ್ರಾದ ಕಾರ್ಮಿಕನೊಬ್ಬ ಪೊಲೀಸ್ ವಶದಲ್ಲಿರುವಾಗಲೇ ಸಾವನ್ನಪ್ಪಿದ್ದ. ಮೃತ ಕಾರ್ಮಿಕನ ಕುಟುಂಬಕ್ಕೆ ಸಾಂತ್ವನ ಹೇಳಲು ಲಕ್ನೋದಿಂದ ಆಗ್ರಾಗೆ ಹೊರಟಿದ್ದ ಉತ್ತರ ಪ್ರದೇಶದ ಕಾಂಗ್ರೆಸ್ ಉಸ್ತುವಾರಿ ಪ್ರಿಯಾಂಕಾ ಗಾಂಧಿ (Priyanka Gandhi Vadra) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಆಗ್ರಾಕ್ಕೆ ಹೊರಟಿದ್ದ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಲಕ್ನೋ-ಆಗ್ರಾ ಎಕ್ಸ್​ಪ್ರೆಸ್​ ಹೈವೇ ಮಾರ್ಗದ ಟೋಲ್ ಬಳಿ ಪೊಲೀಸರು ತಡೆದಿದ್ದರು.  ನಂತರ ಬಿಡುಗಡೆ ಮಾಡಲಾಯಿತು.

ಇದನ್ನೂ ಓದಿ: ಹೋಟೆಲ್ ಬ್ಯುಸಿನೆಸ್ ಮಾಡ್ತಿದ್ದವರು ಕಳ್ಳತನ ಮಾಡಿ ಅರೆಸ್ಟ್, ಕಳ್ಳತನಕ್ಕೆ ಸಹಾಯ ಮಾಡ್ತು ಸೋಶಿಯಲ್ ಮೀಡಿಯಾ

India vs Australia: ಅತ್ತ ಪಂದ್ಯ ನಡೆಯುತ್ತಿದ್ದರೆ ಇತ್ತ ಧೋನಿಯಿಂದ ರಿಷಭ್ ಪಂತ್​ಗೆ ಭರ್ಜರಿ ಕ್ಲಾಸ್: ವಿಡಿಯೋ ವೈರಲ್

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!