ಬಿಹಾರ: ವಿಧಾನಸಭಾ ಚುನಾವಣೆ ಸನ್ನಿಹಿತವಿರುವಾಗ ಪಾಟ್ನಾದಲ್ಲಿ ಆರ್​​ಜೆಡಿ ನಾಯಕನ ಗುಂಡಿಕ್ಕಿ ಹತ್ಯೆ

ಪಾಟ್ನಾದಲ್ಲಿ ಬುಧವಾರ ರಾತ್ರಿ ಇಬ್ಬರು ಅಪರಿಚಿತರು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ರಾಜ್‌ಕುಮಾರ್ ರೈ ಅಲಿಯಾಸ್ ಅಲ್ಲಾ ರೈ ಅವರನ್ನು ಗುಂಡಿಕ್ಕಿ ಹತ್ಯೆ(Murder) ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಘಟನೆ ಚಿತ್ರಗುಪ್ತದ ಮುನ್ನಾಚಕ್ ಪ್ರದೇಶದಲ್ಲಿ ನಡೆದಿದ್ದು, ರಾಜ್ಯ ವಿಧಾನಸಭಾ ಚುನಾವಣೆಗೆ ತಿಂಗಳುಗಳ ಮೊದಲು ನಡೆದಿದ್ದು, ಆತಂಕ ಹೆಚ್ಚಿಸಿದೆ. ಮೂಲಗಳ ಪ್ರಕಾರ, ರೈ ರಾಘೋಪುರ್ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸುವ ನಿರೀಕ್ಷೆಯಿತ್ತು.

ಬಿಹಾರ: ವಿಧಾನಸಭಾ ಚುನಾವಣೆ ಸನ್ನಿಹಿತವಿರುವಾಗ ಪಾಟ್ನಾದಲ್ಲಿ ಆರ್​​ಜೆಡಿ ನಾಯಕನ ಗುಂಡಿಕ್ಕಿ ಹತ್ಯೆ
ರೈ

Updated on: Sep 11, 2025 | 10:01 AM

ಪಾಟ್ನಾ, ಸೆಪ್ಟೆಂಬರ್ 11:  ಬಿಹಾರ ವಿಧಾನಸಭಾ ಚುನಾವಣೆ ಸನ್ನಿಹಿತವಿರುವಾಗ ಪಾಟ್ನಾದಲ್ಲಿ ಆರ್​ಜೆಡಿ ನಾಯಕರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ.  ಬುಧವಾರ ರಾತ್ರಿ ಇಬ್ಬರು ಅಪರಿಚಿತರು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ರಾಜ್‌ಕುಮಾರ್ ರೈ ಅಲಿಯಾಸ್ ಅಲ್ಲಾ ರೈ ಅವರನ್ನು ಗುಂಡಿಕ್ಕಿ ಹತ್ಯೆ(Murder) ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಘಟನೆ ಚಿತ್ರಗುಪ್ತದ ಮುನ್ನಾಚಕ್ ಪ್ರದೇಶದಲ್ಲಿ ನಡೆದಿದ್ದು, ರಾಜ್ಯ ವಿಧಾನಸಭಾ ಚುನಾವಣೆಗೆ ತಿಂಗಳುಗಳ ಮೊದಲು ನಡೆದಿದ್ದು, ಆತಂಕ ಹೆಚ್ಚಿಸಿದೆ. ಮೂಲಗಳ ಪ್ರಕಾರ, ರೈ ರಾಘೋಪುರ್ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸುವ ನಿರೀಕ್ಷೆಯಿತ್ತು.

ವಿವರವಾದ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ, ಆದರೆ ಪ್ರಾಥಮಿಕವಾಗಿ, ಭೂ ವಿವಾದವೇ ದಾಳಿಯ ಹಿಂದಿನ ಕಾರಣ ಎಂದು ತೋರುತ್ತದೆ. ರೈ ಭೂ ಸಂಬಂಧಿತ ವ್ಯವಹಾರಗಳಲ್ಲಿ ತೊಡಗಿಸಿಕೊಂಡಿದ್ದರು. ಘಟನೆಯ ಬಗ್ಗೆ ತಿಳಿದ ಪೊಲೀಸ್ ತಂಡ ರೈ ಅವರನ್ನು ಆಸ್ಪತ್ರೆಗೆ ಸಾಗಿಸಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.

ಸ್ಥಳದಿಂದ ಆರು ಕ್ಯಾಟ್ರಿಡ್ಜ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರದೇಶದಿಂದ ಪಡೆದ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಆರೋಪಿಗಳು ಸ್ಥಳದಿಂದ ಪರಾರಿಯಾಗುವ ಮೊದಲು ಅಪರಾಧ ಎಸಗುತ್ತಿರುವುದು ಕಂಡುಬಂದಿದ್ದು, ಅವರನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಪಾಟ್ನಾ ಪೂರ್ವ ಪೊಲೀಸ್ ವರಿಷ್ಠಾಧಿಕಾರಿ ಪರಿಚಯ್ ಕುಮಾರ್ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ತಂಡ ಭೇಟಿ ನೀಡಿ ಸಾಕ್ಷ್ಯಗಳನ್ನು ಸಂಗ್ರಹಿಸಿತು.

ಮತ್ತಷ್ಟು ಓದಿ:  Video: ಅಮೆರಿಕದ ರೈಲಿನಲ್ಲಿ ಉಕ್ರೇನ್​ ಯುವತಿಯ ಬರ್ಬರ ಹತ್ಯೆ

ಪ್ರತ್ಯಕ್ಷದರ್ಶಿಗಳು ಹೇಳುವಂತೆ ಕೆಲವೇ ಕ್ಷಣದಲ್ಲಿ ಘಟನೆ ನಡೆದುಹೋಗಿದೆ, ನಾಯಕನನ್ನು ಹತ್ಯೆ ಮಾಡಿ ಕೂಡಲೇ ಸ್ಥಳದಿಂದ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ ನಾಯಕನನ್ನು ತಕ್ಷಣ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಚಿಕಿತ್ಸೆಯ ಸಮಯದಲ್ಲಿ ಅವರು ಸಾವನ್ನಪ್ಪಿದ್ದಾರೆ.

ಪ್ರತ್ಯಕ್ಷದರ್ಶಿಗಳ ಹೇಳಿಕೆಗಳನ್ನು ದಾಖಲಿಸಲಾಗುತ್ತಿದೆ ಮತ್ತು ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪಾಟ್ನಾ ಪೂರ್ವ ಎಸ್‌ಪಿ ಪರಿಚಯ್ ಕುಮಾರ್ ತಿಳಿಸಿದ್ದಾರೆ. ದಾಳಿಕೋರರಿಗೆ ರೈ ಚಟುವಟಿಕೆಗಳ ಬಗ್ಗೆ ಮೊದಲೇ ತಿಳಿದಿತ್ತು. ಹಾಗಾಗಿ ಕೊಲೆಗೆ ಪೂರ್ವ ಯೋಜನೆ ರೂಪಿಸಿದ್ದರು.ಕೊಲೆಗೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:00 am, Thu, 11 September 25

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us