ಆರ್​ಜೆಡಿ ಕಾಂಗ್ರೆಸ್ ತಲೆಗೆ ಬಂದೂಕಿಟ್ಟು, ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದೆ: ನರೇಂದ್ರ ಮೋದಿ

ಆರ್​ಜೆಡಿಯು ಕಾಂಗ್ರೆಸ್(Congress) ತಲೆಗೆ ಬಂದೂಕಿಟ್ಟು ಮುಖ್ಯಮಂತ್ರಿ ಅಭ್ಯರ್ಥಿ ಹೆಸರನ್ನು ಘೋಷಿಸುವಂತೆ ಮಾಡಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ವಾಗ್ದಾಳಿ ನಡೆಸಿದರು. ಆರಾದಲ್ಲಿ ಇಂದು ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ್ದಾರೆ. ಬಿಹಾರದ ಮಹಾಘಟಬಂಧನದೊಳಗೆ ಭಾರಿ ಒಳಜಗಳ ನಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ಆರ್​ಜೆಡಿ ಕಾಂಗ್ರೆಸ್ ತಲೆಗೆ ಬಂದೂಕಿಟ್ಟು, ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದೆ: ನರೇಂದ್ರ ಮೋದಿ
ನರೇಂದ್ರ ಮೋದಿ

Updated on: Nov 02, 2025 | 3:08 PM

ಆರಾ, ನವೆಂಬರ್ 02: ಆರ್ಜೆಡಿಯು ಕಾಂಗ್ರೆಸ್(Congress) ತಲೆಗೆ ಬಂದೂಕಿಟ್ಟು ಮುಖ್ಯಮಂತ್ರಿ ಅಭ್ಯರ್ಥಿ ಹೆಸರನ್ನು ಘೋಷಿಸುವಂತೆ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ವಾಗ್ದಾಳಿ ನಡೆಸಿದರು. ಆರಾದಲ್ಲಿ ಇಂದು ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ್ದಾರೆ. ಬಿಹಾರದ ಮಹಾಘಟಬಂಧನದೊಳಗೆ ಭಾರಿ ಒಳಜಗಳ ನಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ಮಹಾಘಟಬಂಧನ್ ವಿರುದ್ಧ ತಮ್ಮ ದಾಳಿಯನ್ನು ಮುಂದುವರೆಸಿದ ಪ್ರಧಾನಿ, ಕಾಂಗ್ರೆಸ್ ಮತ್ತು ಆರ್‌ಜೆಡಿ ಬಿಹಾರದ ಗುರುತನ್ನು ನಾಶಮಾಡುವ ಕೆಲಸ ಮಾಡುತ್ತಿವೆ ಎಂದು ಹೇಳಿದರು. ಮತದಾರರು ಜಾಗರೂಕರಾಗಿರಬೇಕು ಮತ್ತು ಈ ಎರಡೂ ಪಕ್ಷಗಳ ಉದ್ದೇಶಗಳ ಬಗ್ಗೆ ತಿಳಿದಿರಬೇಕು ಎಂದು ಒತ್ತಾಯಿಸಿದರು.

ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗೆ ಮಹಾಘಟಬಂಧನದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರನ್ನು ಘೋಷಿಸಲಾಗಿದೆ.

ಮತ್ತಷ್ಟು ಓದಿ:  Bihar Elections: ಬಿಹಾರ ವಿಧಾನಸಭಾ ಚುನಾವಣೆ; ಬಿಜೆಪಿಯ 71 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಚುನಾವಣೆಗೆ ಮೊದಲೇ ಮಹಾಘಟಬಂಧನ್ ಪಾಲುದಾರರ ನಡುವೆ ತೀವ್ರ ದ್ವೇಷವಿದ್ದು, ಚುನಾವಣೆಯ ನಂತರ ಅವರು ಪರಸ್ಪರ ವಿರುದ್ಧವಾಗಿ ತಿರುಗಿಬೀಳುವ ಸಾಧ್ಯತೆಯಿದೆ ಎಂದು ಅವರು ಹೇಳಿದರು. ಆರ್‌ಜೆಡಿ ಮತ್ತು ಕಾಂಗ್ರೆಸ್ ನಡುವೆ ದೊಡ್ಡ ಸಂಘರ್ಷವಿದೆ. ಪ್ರಣಾಳಿಕೆಯಲ್ಲಿ ಕಾಂಗ್ರೆಸ್‌ನ ಬೇಡಿಕೆಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿಲ್ಲ. ಚುನಾವಣೆಗೆ ಮೊದಲು ಅವರ ನಡುವೆ ತುಂಬಾ ದ್ವೇಷವಿದೆ, ಮತ್ತು ಚುನಾವಣೆಯ ನಂತರ ಅವರು ಪರಸ್ಪರ ತಿರುಗಿ ಬೀಳುವ ಎಲ್ಲಾ ಸಾಧ್ಯತೆಗಳಿವೆ.

ಪ್ರಧಾನಿ ಮೋದಿ ಭಾಷಣ

ಕಾಂಗ್ರೆಸ್ ಎಂದಿಗೂ ಆರ್‌ಜೆಡಿ ಅಭ್ಯರ್ಥಿಯನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಬೇಕೆಂದು ಬಯಸಿರಲಿಲ್ಲ, ಆದರೆ ಆರ್‌ಜೆಡಿ ಕಾಂಗ್ರೆಸ್‌ನತ್ತ ಬಂದೂಕು ತೋರಿಸುವ ಮೂಲಕ ಮುಖ್ಯಮಂತ್ರಿ ಹುದ್ದೆಯನ್ನು ಕಸಿದುಕೊಂಡಿತು ಮತ್ತು ತನ್ನ ಅಭ್ಯರ್ಥಿಯೇ ಮುಖ್ಯಮಂತ್ರಿ ಅಭ್ಯರ್ಥಿಯಾಗುವುದನ್ನು ಖಚಿತಪಡಿಸಿಕೊಂಡಿತು ಎಂದು ಅವರು ಹೇಳಿದರು.

ಬಿಹಾರದಲ್ಲಿ ಯುವಕರಿಗೆ ಕೆಲಸ ಸಿಗುತ್ತೆ

ಬಿಹಾರದ ಯುವಕರು ಬಿಹಾರದಲ್ಲಿಯೇ ಇರುತ್ತಾರೆ, ಬಿಹಾರಕ್ಕೆ ಕೀರ್ತಿ ತರುವ ಕೆಲಸ ಮಾಡುತ್ತಾರೆ. ಮುಂಬರುವ ದಿನಗಳಲ್ಲಿ 1 ಕೋಟಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದಾಗಿ ನಾವು ಭರವಸೆ ನೀಡಿದ್ದೇವೆ. ಇದು ಕೇವಲ ಘೋಷಣೆಯಲ್ಲ ಎಂದರು.ಅಭಿವೃದ್ಧಿ ಹೊಂದಿದ ಬಿಹಾರಕ್ಕಾಗಿ ಎನ್‌ಡಿಎ ಪ್ರಾಮಾಣಿಕ ಮತ್ತು ದೂರದೃಷ್ಟಿಯ ಪ್ರಣಾಳಿಕೆಯನ್ನು ಮಂಡಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us