AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alappuzha Murder: ಕೇರಳದಲ್ಲಿ 12 ಗಂಟೆಯಲ್ಲಿ ಇಬ್ಬರು ರಾಜಕೀಯ ನಾಯಕರ ಹತ್ಯೆ; ಅಲಪ್ಪುಳದಲ್ಲಿ ನಿಷೇಧಾಜ್ಞೆ ಜಾರಿ

ಬಿಜೆಪಿ ನಾಯಕನ ಹತ್ಯೆಯ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ವಿ. ಮುರಳೀಧರನ್, ಇದು ಇಸ್ಲಾಮಿಕ್ ಭಯೋತ್ಪಾದಕ ಗುಂಪಿನ ಕೈವಾಡವಾಗಿದೆ ಎಂದು ಹೇಳಿದ್ದಾರೆ. ಅಪರಾಧಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Alappuzha Murder: ಕೇರಳದಲ್ಲಿ 12 ಗಂಟೆಯಲ್ಲಿ ಇಬ್ಬರು ರಾಜಕೀಯ ನಾಯಕರ ಹತ್ಯೆ; ಅಲಪ್ಪುಳದಲ್ಲಿ ನಿಷೇಧಾಜ್ಞೆ ಜಾರಿ
ಬಿಜೆಪಿ ನಾಯಕ ರಂಜಿತ್ ಶ್ರೀನಿವಾಸ್​ - SDPI ನಾಯಕ ಕೆಎಸ್​ ಶಾನ್
TV9 Web
| Edited By: |

Updated on: Dec 19, 2021 | 2:32 PM

Share

ಅಲಪ್ಪುಳ: ಕೇರಳದ ಕರಾವಳಿ ಭಾಗದ ಅಲಪ್ಪುಳ ಜಿಲ್ಲೆಯಲ್ಲಿ ಕೇವಲ 12 ಗಂಟೆಯ ಅವಧಿಯಲ್ಲಿ ನಡೆದ ಎರಡು ಪಕ್ಷಗಳ ಇಬ್ಬರು ನಾಯಕರ ಹತ್ಯೆ ಇಡೀ ಕೇರಳವನ್ನೇ ಬೆಚ್ಚಿಬೀಳಿಸಿದೆ. ಶನಿವಾರ ಸಂಜೆ SDPI ನಾಯಕ ಕೆಎಸ್​ ಶಾನ್​ ಮನೆಗೆ ಹೋಗುವಾಗ ಅವರ ಬೈಕ್​ಗೆ ಡಿಕ್ಕಿ ಹೊಡೆಸಿ ಹಲ್ಲೆ ಮಾಡಲಾಗಿತ್ತು. ನಿನ್ನೆ ರಾತ್ರಿ ಅವರು ಸಾವನ್ನಪ್ಪಿದ್ದರು. ಅದಾದ ಕೆಲವೇ ಗಂಟೆಗಳ ಅಂತರದಲ್ಲಿ ಇಂದು ಮುಂಜಾನೆ ಬಿಜೆಪಿ ನಾಯಕ ರಂಜಿತ್ ಶ್ರೀನಿವಾಸ್​ ಅವರ ಮನೆಗೆ ನುಗ್ಗಿ ಅಪರಿಚಿತರು ಕೊಲೆ ಮಾಡಿದ್ದಾರೆ. ಇದರಿಂದ ಕೇರಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸೆಕ್ಷನ್ 144 (ನಿಷೇಧಾಜ್ಞೆ) ಜಾರಿಗೊಳಿಸಲಾಗಿದೆ.

ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಶಾನ್ ಹತ್ಯೆಯ ನಂತರ 12 ಗಂಟೆಗಳಲ್ಲೇ ಬಿಜೆಪಿ ಮುಖಂಡನ ಕುತ್ತಿಗೆ ಕೊಯ್ದು ಹತ್ಯೆ ಮಾಡಲಾಗಿದೆ. ಹೀಗಾಗಿ, ಇಂದು ಇಡೀ ಆಲಪ್ಪುಳ ಜಿಲ್ಲೆಯಲ್ಲಿ ಸಿಆರ್‌ಪಿಸಿ ಸೆಕ್ಷನ್ 144ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಮುಂಜಾನೆ ಕೇರಳದ ಅಲಪ್ಪುಳದಲ್ಲಿ ಬಿಜೆಪಿ ಮುಖಂಡರೊಬ್ಬರ ಮನೆಗೆ ನುಗ್ಗಿದ ಅಪರಿಚಿತ ದುಷ್ಕರ್ಮಿಗಳು ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಬಿಜೆಪಿಯ ಒಬಿಸಿ ಮೋರ್ಚಾ ಕೇರಳ ರಾಜ್ಯ ಕಾರ್ಯದರ್ಶಿ ರಂಜಿತ್ ಶ್ರೀನಿವಾಸನ್ ಎಂಬ 40 ವರ್ಷದ ವ್ಯಕ್ತಿ ತಮ್ಮ ಮನೆಯಲ್ಲೇ ಅಪರಿಚಿತರಿಂದ ಕೊಲೆಗೀಡಾಗಿದ್ದಾರೆ.

ಅಲಪ್ಪುಳ ಜಿಲ್ಲೆಯಲ್ಲಿ ಸೆಕ್ಷನ್ 144 ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎ ಅಲೆಕ್ಸಾಂಡರ್ ತಿಳಿಸಿದ್ದಾರೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಅಲಪ್ಪುಳದಲ್ಲಿ ನಡೆದ ಎರಡು ಕೊಲೆಗಳನ್ನು ಖಂಡಿಸಿದ್ದಾರೆ ಎಂದು ಸಿಎಂಒ ಹೇಳಿಕೆಯಲ್ಲಿ ತಿಳಿಸಿದೆ.

40 ವರ್ಷದ ಬಿಜೆಪಿ ಮುಖಂಡ ರಂಜಿತ್ ಶ್ರೀನಿವಾಸ್ ಅವರನ್ನು ಅಪರಿಚಿತ ದಾಳಿಕೋರರು ಅವರ ಮನೆಯೊಳಗೆ ಕೊಂದಿದ್ದಾರೆ. ಅವರು ಒಬಿಸಿ ಮೋರ್ಚಾ ಕೇರಳ ರಾಜ್ಯ ಕಾರ್ಯದರ್ಶಿ ಮತ್ತು ಬಿಜೆಪಿ ರಾಜ್ಯ ಸಮಿತಿಯ ಸದಸ್ಯರಾಗಿದ್ದರು. ದಾಳಿಕೋರರು ಬಿಜೆಪಿ ಮುಖಂಡನ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ. 2016ರ ವಿಧಾನಸಭಾ ಚುನಾವಣೆಯಲ್ಲಿ ಆಲಪ್ಪುಳ ಕ್ಷೇತ್ರದಲ್ಲಿ ರಂಜೀತ್ ಬಿಜೆಪಿ ಅಭ್ಯರ್ಥಿಯಾಗಿದ್ದರು. ಅವರು ವೃತ್ತಿಯಲ್ಲಿ ವಕೀಲರಾಗಿದ್ದರು.

ಬಿಜೆಪಿ ನಾಯಕನ ಹತ್ಯೆಯ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ವಿ. ಮುರಳೀಧರನ್, ಇದು ಇಸ್ಲಾಮಿಕ್ ಭಯೋತ್ಪಾದಕ ಗುಂಪಿನ ಕೈವಾಡವಾಗಿದೆ ಎಂದು ಹೇಳಿದ್ದಾರೆ. ಅಪರಾಧಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿಯನ್ನು ಇಂದು ಬೆಳಿಗ್ಗೆ ಇರಿದು ಕೊಂದಿದ್ದಾರೆ. ಇದು ಇಸ್ಲಾಮಿಕ್ ಭಯೋತ್ಪಾದಕ ಗುಂಪಿನ ಕೈವಾಡದ ಕೆಲಸ ಎಂದು ನನಗೆ ಮಾಹಿತಿ ಸಿಕ್ಕಿದೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನಾನು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಮುರಳೀಧರನ್ ಹೇಳಿದ್ದಾರೆ.

ಇಂದು ಬೆಳಗ್ಗೆ ರಂಜಿತ್ ಅವರ ಮನೆಗೆ ನುಗ್ಗಿದ ಗುಂಪೊಂದು ಬಾಗಿಲು ಬೆಲ್ ಮಾಡಿದೆ. ಮನೆಯ ಬಾಗಿಲು ತೆಗೆದ ಕೂಡಲೇ ಒಳಗೆ ನುಗ್ಗಿದ ದುಷ್ಕರ್ಮಿಗಳು ರಂಜಿತ್ ಶ್ರೀನಿವಾಸ್ ಅವರ ಕುತ್ತಿಗೆ ಕೊಯ್ದು ಕೊಲೆ ಮಾಡಿದ್ದಾರೆ.

ಕೇರಳದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಕಾರ್ಯದರ್ಶಿ ಕೆಎಸ್ ಶಾನ್ ಅವರ ಮೇಲೆ ಕೇರಳದ ಕೊಚ್ಚಿಯಲ್ಲಿ ಅಪರಿಚಿತ ಗ್ಯಾಂಗ್ ದಾಳಿ ಮಾಡಿದ ಬೆನ್ನಲ್ಲೇ ಬಿಜೆಪಿ ನಾಯಕ ರಂಜಿತ್ ಶ್ರೀನಿವಾಸ್ ಅವರ ಕೊಲೆ ಸಂಭವಿಸಿದೆ. ಶನಿವಾರ ಕೆ.ಎಸ್. ಶಾನ್ ತಮ್ಮ ಮನೆಗೆ ತೆರಳುತ್ತಿದ್ದ ವೇಳೆ ಅವರ ಬೈಕ್‌ಗೆ ಕಾರು ಡಿಕ್ಕಿ ಹೊಡೆದಿತ್ತು. ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ಮಧ್ಯರಾತ್ರಿ 12.45ಕ್ಕೆ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದರು.

ಇದನ್ನೂ ಓದಿ: ಎಸ್​ಡಿಪಿಐ ನಾಯಕನ ಕೊಲೆ ಬೆನ್ನಲ್ಲೇ ಕೇರಳದ ಬಿಜೆಪಿ ನಾಯಕನ ಕತ್ತು ಕೊಯ್ದು ಬರ್ಬರ ಹತ್ಯೆ

ಮಹಿಳೆಯರ ವಿವಾಹ ವಯೋಮಿತಿ ಹೆಚ್ಚಿಸುವ ಕೇಂದ್ರದ ಕ್ರಮಕ್ಕೆ ಕೇರಳ ಮುಸ್ಲಿಂ ಸಂಘಟನೆಗಳ ವಿರೋಧ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ