Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆಗೆ 48 ಗಂಟೆ ಮೊದಲು ಅಭ್ಯರ್ಥಿಗಳ ಅಪರಾಧ ಮಾಹಿತಿ ಸಾರ್ವಜನಿಕಗೊಳಿಸಿ: ಸುಪ್ರೀಂ ಕೋರ್ಟ್

ಈ ಹಿಂದಿನ ತನ್ನ ಆದೇಶವನ್ನು ಮತ್ತಷ್ಟು ಸಬಲೀಕರಣಗೊಳಿಸಿ, ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಅಪರಾಧ ಜಾತಕವನ್ನು ಆಯಾ ರಾಜಕೀಯ ಪಕ್ಷಗಳು ಚುನಾವಣೆ ನಡೆಯುವುದಕ್ಕೆ 48 ಗಂಟೆಗೆ ಮುನ್ನ ಸಾರ್ವಜನಿಕಗೊಳಿಸುವುದು ಕಡ್ಡಾಯ ಎಂದು ಸುಪ್ರೀಂ ಕೋರ್ಟ್​ ತಿಳಿಸಿದೆ.

ಚುನಾವಣೆಗೆ 48 ಗಂಟೆ ಮೊದಲು ಅಭ್ಯರ್ಥಿಗಳ ಅಪರಾಧ ಮಾಹಿತಿ ಸಾರ್ವಜನಿಕಗೊಳಿಸಿ: ಸುಪ್ರೀಂ ಕೋರ್ಟ್
ಸುಪ್ರೀಂ​ ಕೋರ್ಟ್
Follow us
TV9 Web
| Updated By: ಸಾಧು ಶ್ರೀನಾಥ್​

Updated on:Aug 10, 2021 | 2:40 PM

ನವದೆಹಲಿ:  ಪ್ರಜಾಪ್ರಭುತ್ವಕ್ಕೆ ಆಧಾರವಾಗುವಂತಹದ, ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವಂತಹ ಆದೇಶವೊಂದನ್ನು ಸುಪ್ರೀಂ ಕೋರ್ಟ್ ಇದೀಗತಾನೆ ನೀಡಿದೆ. ಈ ಹಿಂದಿನ ತನ್ನ ಆದೇಶವನ್ನು ಮತ್ತಷ್ಟು ಸಬಲೀಕರಣಗೊಳಿಸಿ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಅಪರಾಧ ಜಾತಕವನ್ನು ರಾಜಕೀಯ ಪಕ್ಷಗಳು ಚುನಾವಣೆ ನಡೆಯುವುದಕ್ಕೆ 48 ಗಂಟೆಗೆ ಮುನ್ನವೇ ಸಾರ್ವಜನಿಕಗೊಳಿಸುವುದು ಕಡ್ಡಾಯ ಎಂದು ಸುಪ್ರೀಂ ಕೋರ್ಟ್​ ತಿಳಿಸಿದೆ.

ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಅಪರಾಧ ಜಾತಕ ಪ್ರಕಟ ಕಡ್ಡಾಯ: 2020 ಫೆಬ್ರವರಿಯಲ್ಲಿ ಇದೇ ಮಾದರಿಯ ನೀಡಿದ್ದ ಆದೇಶಕ್ಕೆ ಮಾರ್ಪಾಡು (ಆದೇಶದ ಪ್ಯಾರಾ 4.4 ) ತಂದು ಈ ಮಹತ್ವದ ಆದೇಶ ನೀಡಿದೆ. ಚುನಾವಣೆಗೂ ಮುನ್ನವೇ ಅಭ್ಯರ್ಥಿಗಳ ಅಪರಾಧ ಜಾತಕವನ್ನು 48 ಗಂಟೆಯೊಳಗೆ ಸಾರ್ವಜನಿಕಗೊಳಿಸುವುದು ಕಡ್ಡಾಯ ಎಂದು ಸುಪ್ರೀಂ ಕೋರ್ಟ್​ ತಿಳಿಸಿದೆ.

ಚುನಾವಣೆಗೆ ಸ್ಪರ್ಧಿಸಲು ಕ್ರಿಮಿನಲ್​ ಹಿನ್ನೆಲೆ ಘೋಷಣೆ ಕಡ್ಡಾಯ: 2020ರಲ್ಲಿ ಬಿಹಾರ ವಿಧಾನಸಭಾ ಚುನಾವಣೆ ಕಾಲದಲ್ಲಿ ಅನೇಕ ಅಭ್ಯರ್ಥಿಗಳು ಕಾನೂನು ಕುಣಿಕೆಯಿಂದ ತಪ್ಪಿಸಿಕೊಂಡು ತಮ್ಮ ಅಪರಾಧ ವೃತ್ತಾಂತವನ್ನು ಬಹಿರಂಗಗೊಳಿಸಿರಲಿಲ್ಲ. ತತ್ಸಂಬಂಧ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಇಂದು ಈ ಮಹತ್ವದ ಆದೇಶ ನೀಡಿದೆ. ಹಾಲಿ ಮತ್ತು ಮಾಜಿ ಸಂಶದರು ಮತ್ತು ಶಾಸಕರ ಮೇಲಿನ ಅಪರಾಧ ಪ್ರಕರಣಗಳ ಸಂಖ್ಯೆ ಕಳೆದ ಎರಡು ವರ್ಷಗಳಲ್ಲಿ ಶೇ. 17 ರಷ್ಟು ಹೆಚ್ಚಾಗಿದೆ.

ಅಭ್ಯರ್ಥಿಯ ಅಪರಾಧ ವೃತ್ತಾಂತಗಳನ್ನು ಪಕ್ಷಗಳ ವೆಬ್​ಸೈಟ್​​​ನಲ್ಲಿ ಸಮಗ್ರವಾಗಿ ಪ್ರಕಟಿಸಲೇಬೇಕು: ಎಲ್ಲಾ ರಾಜಕೀಯ ಪಕ್ಷಗಳೂ ತಾನು ಆಯ್ಕೆ ಮಾಡಿರುವ ಅಭ್ಯರ್ಥಿ ಅಪರಾಧ ಹಿನ್ನೆಲೆ ಹೊಂದಿದ್ದರೂ ಅವರನ್ನು ಏಕೆ ಚುನಾವಣೆ ಸ್ಪರ್ಧೆಗೆ ಏಕೆ ಆಯ್ಕೆ ಮಾಡಲಾಗಿದೆ? ಮತ್ತು ಆ ಅಪರಾಧ ವೃತ್ತಾಂತಗಳ ವಿವರವನ್ನು ಪಕ್ಷಗಳ ವೆಬ್​ಸೈಟ್​​​ನಲ್ಲಿ ಸಮಗ್ರವಾಗಿ ಪ್ರಕಟಿಸಲೇಬೇಕು ಎಂದು ಸುಪ್ರೀಂಕೋರ್ಟ್​ ಆದೇಶಿಸಿದೆ.

ಈ ಬಗ್ಗೆ ಸುಪ್ರೀಂ ಕೋರ್ಟ್​​ ಹಿಂದಿನ ಆದೇಶದ ಅನ್ವಯ ಚುನಾವಣಾ ಆಯೋಗ ಎಲ್ಲಾ ರಾಜಕೀಯ ಪಕ್ಷಗಳಿಗೂ ಸೂಚನೆ ನೀಡಿತ್ತು. ಆದಾಗ್ಯೂ ಬಹುತೇಕ ಅಭ್ಯರ್ಥಿಗಳ ಅಪರಾಧ ಜಾತಕವನ್ನು ರಾಜಕೀಯ ಪಕ್ಷಗಳು ಬಹುರಂಗಗೊಳಿಸಿರಲಿಲ್ಲ ಎಂಬುದು ಗಮನಾರ್ಹ.

(political Parties Must Publish Criminal Antecedents of Candidates Within 48 Hours of Selection orders Supreme Court)

Published On - 11:58 am, Tue, 10 August 21

ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ಹೋರಿ ಹಬ್ಬ ಅವಳಿಗೆ ಪಂಚಪ್ರಾಣ: ಕೊಲೆಯಾದ ಸ್ವಾತಿ ನೆನೆದು ಗೆಳತಿ ಕಣ್ಣೀರು
ಹೋರಿ ಹಬ್ಬ ಅವಳಿಗೆ ಪಂಚಪ್ರಾಣ: ಕೊಲೆಯಾದ ಸ್ವಾತಿ ನೆನೆದು ಗೆಳತಿ ಕಣ್ಣೀರು
ಚಕ್ರಗಳನ್ನು ಕದಿಯಲು ಕಳ್ಳರು ಬಂದಿದ್ದು ಇನ್ನೋವಾ ಕಾರಲ್ಲಂತೆ!
ಚಕ್ರಗಳನ್ನು ಕದಿಯಲು ಕಳ್ಳರು ಬಂದಿದ್ದು ಇನ್ನೋವಾ ಕಾರಲ್ಲಂತೆ!