AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UP Assembly Election 2022: ಉತ್ತರ ಪ್ರದೇಶದಲ್ಲಿ ಮೊದಲ ಹಂತದ ಮತದಾನ ಪ್ರಾರಂಭ; ಮುಂಜಾನೆಯಿಂದಲೇ ಮತಗಟ್ಟೆಗೆ ಜನರ ಆಗಮನ

ಉತ್ತರ ಪ್ರದೇಶದಲ್ಲಿ ಮತದಾನ ಶುರುವಾಗುವುದಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ ಹಿಂದಿಯಲ್ಲಿ ಟ್ವೀಟ್ ಮಾಡಿ, ಮತದಾರರನ್ನು ಹುರಿದುಂಬಿಸಿದ್ದಾರೆ. ಮೊದಲು ಮತದಾನ ಮಾಡಿ, ನಂತರ ಉಪಾಹಾರ ಮಾಡಿ ಎಂದು ಹೇಳಿರುವ ಅವರು, ಕೊವಿಡ್​ 19 ನಿಯಮ ಪಾಲನೆಗೆ ಕರೆಕೊಟ್ಟಿದ್ದಾರೆ.

UP Assembly Election 2022: ಉತ್ತರ ಪ್ರದೇಶದಲ್ಲಿ ಮೊದಲ ಹಂತದ ಮತದಾನ ಪ್ರಾರಂಭ; ಮುಂಜಾನೆಯಿಂದಲೇ ಮತಗಟ್ಟೆಗೆ ಜನರ ಆಗಮನ
ಉತ್ತರ ಪ್ರದೇಶದ ಕೈರಾನಾದಲ್ಲಿ ಮತದಾನ
TV9 Web
| Edited By: |

Updated on:Feb 10, 2022 | 8:03 AM

Share

ಉತ್ತರಪ್ರದೇಶದಲ್ಲಿ ಮೊದಲ ಹಂತದ ಮತದಾನ (Voting Begins In Uttar Pradesh) ಈಗಾಗಲೇ ಪ್ರಾರಂಭವಾಗಿದೆ. ಬೆಳಗ್ಗೆ 6.30ರಿಂದಲೇ ಮತಗಟ್ಟೆಗಳಿಗೆ ಜನರು ಬರಲು ಪ್ರಾರಂಭಿಸಿದ್ದಾರೆ. ಇಂದು 11 ಜಿಲ್ಲೆಗಳ 58 ವಿಧಾನಸಭೆ ಕ್ಷೇತ್ರಗಳಲ್ಲಿ (Assembly Constituencies) ಮತದಾನ ನಡೆಯಲಿದ್ದು, ಒಟ್ಟು 623 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಈ ಹಂತದಲ್ಲಿ ಸುಮಾರು 2.27 ಕೋಟಿ ಅರ್ಹ ಮತದಾರರು ಮತದಾನ ಮಾಡಲಿದ್ದಾರೆ. ಇಂದು ರಾಜ್ಯದ ಪಶ್ಚಿಮ ಜಿಲ್ಲೆಗಳ ವಿಧಾನಸಭೆ ಕ್ಷೇತ್ರದಲ್ಲಿ ಮತದಾನ ನಡೆಯುತ್ತಿದೆ. ಈ ಭಾಗದ ಹಲವು ಕ್ಷೇತ್ರಗಳು ಜಾಟ್​ ಸಮುದಾಯದ ಪ್ರಾಬಲ್ಯ ಇರುವ ಸ್ಥಳಗಳು.  ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಮೂರು ಕೃಷಿ ಕಾಯ್ದೆಗಳನ್ನು ತೀವ್ರವಾಗಿ ಖಂಡಿಸಿ, ಹೋರಾಟದ ಮಾಡಿದವರೇ ಈ ಭಾಗದಲ್ಲಿ ಹೆಚ್ಚಿನ ಜನರು ಇದ್ದಾರೆ.  ಈ ಹಂತದಲ್ಲಿ ಸದ್ಯ ಬಿಜೆಪಿ ಸರ್ಕಾರದಲ್ಲಿರುವ 9 ಸಚಿವರು ಚುನಾವಣೆ ಎದುರಿಸುತ್ತಿದ್ದಾರೆ. ಒಟ್ಟಾರೆ 403 ಕ್ಷೇತ್ರಗಳಿಗೆ ಏಳು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್​ 10ರಂದು ಮತ ಎಣಿಕೆ ನಡೆಯಲಿದೆ. 

ಪ್ರಧಾನಿ ಮೋದಿ ಟ್ವೀಟ್​: ಉತ್ತರ ಪ್ರದೇಶದಲ್ಲಿ ಮತದಾನ ಶುರುವಾಗುವುದಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ ಹಿಂದಿಯಲ್ಲಿ ಟ್ವೀಟ್ ಮಾಡಿ, ಮತದಾರರನ್ನು ಹುರಿದುಂಬಿಸಿದ್ದಾರೆ. ಇಂದು ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದ. ಎಲ್ಲರೂ ಕೊವಿಡ್​ 19 ನಿಯಮಗಳನ್ನು ಪಾಲಿಸಬೇಕು. ಪ್ರಜಾಪ್ರಭುತ್ವದ ಪವಿತ್ರ ಹಬ್ಬದಲ್ಲಿ ಉತ್ಸಾಹದಿಂದ ಭಾಗವಹಿಸಬೇಕು. ಮೊದಲು ಮತದಾನ ಮಾಡಿ, ನಂತರ ಉಪಾಹಾರ ಮಾಡಿ ಎಂದು ಹೇಳಿದ್ದಾರೆ.

ಇನ್ನು ಉತ್ತರ ಪ್ರದೇಶದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿರುವ ಎಲ್ಲ ವಿಧಾನಸಭೆ ಕ್ಷೇತ್ರಗಳಲ್ಲೂ ಪೊಲೀಸ್ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಆಗ್ರಾ ಎಸ್​ಪಿ ವಿಕಾಸ್​ ಕುಮಾರ್​, ಮುಂಜಾನೆಯಿಂದಲೂ ಪೊಲೀಸರು ಮತ್ತು ಸ್ಥಳೀಯ ಆಡಳಿತ ಅಧಿಕಾರಿಗಳು ಸಕ್ರಿಯರಾಗಿ ಕೆಲಸ ಮಾಡುತ್ತಿದ್ದಾರೆ. ಮತದಾನ ನಡೆಯುತ್ತಿರುವ ಎಲ್ಲ ಕ್ಷೇತ್ರಗಳನ್ನೂ ಪರಿಶೀಲಿಸಲಾಗಿದ್ದು, ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕೇಂದ್ರ ಸಶಸ್ತ್ರ ಪಡೆಯ 129 ಕಂಪನಿಗಳನ್ನು ನಿಯೋಜಿಸಲಾಗಿದ್ದು, ಸಿವಿಲ್​ ಪೊಲೀಸ್​, ಹೋಂ ಗಾರ್ಡ್​ಗಳನ್ನೂ ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

ಹಾಪುರ್​, ಕೈರಾನಾ ಸೇರಿ ಹಲವು ಕ್ಷೇತ್ರಗಳಲ್ಲಿ ಬೆಳಗ್ಗೆಯಿಂದಲೇ ಜನರು ಕ್ಯೂ ನಿಂತಿದ್ದಾರೆ. ಉತ್ತರ ಪ್ರದೇಶ ಸಚಿವ ಅತುಲ್ ಗಾರ್ಗ್, ಗಾಜಿಯಾಬಾದ್‌ನ ಕವಿ ನಗರದ ಮತಗಟ್ಟೆಯಲ್ಲಿ ಮತ ಚಲಾಯಿಸಿದ್ದಾರೆ. ಹಾಗೇ ಮತಗಟ್ಟೆ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಆಗ್ರಾ ಗ್ರಾಮಾಂತರ ವಿಭಾಗದ ಬಿಜೆಪಿ ಅಭ್ಯರ್ಥಿ ಬೇಬಿ ರಾಣಿ ಮೌರ್ಯಾ, ಈ ಬಾರಿಯೂ ಉತ್ತರಪ್ರದೇಶದಲ್ಲಿ ಜನರು ಬಿಜೆಪಿ ಪರ ಮತ ಚಲಾಯಿಸುತ್ತಾರೆಂಬ ನಂಬಿಕೆಯಿದೆ ಎಂದಿದ್ದಾರೆ.

ಇದನ್ನೂ ಓದಿ: Skin Care: ತ್ವಚೆಯ ಟ್ಯಾನ್ ಸಮಸ್ಯೆಯಿಂದ ಪರಿಹಾರ ಬೇಕೇ? ಇಲ್ಲಿದೆ ಸರಳ ಮಾರ್ಗ ಪರಿಶೀಲಿಸಿ

Published On - 7:45 am, Thu, 10 February 22

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ