UP Assembly Election 2022: ಉತ್ತರ ಪ್ರದೇಶದಲ್ಲಿ ಮೊದಲ ಹಂತದ ಮತದಾನ ಪ್ರಾರಂಭ; ಮುಂಜಾನೆಯಿಂದಲೇ ಮತಗಟ್ಟೆಗೆ ಜನರ ಆಗಮನ

ಉತ್ತರ ಪ್ರದೇಶದಲ್ಲಿ ಮತದಾನ ಶುರುವಾಗುವುದಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ ಹಿಂದಿಯಲ್ಲಿ ಟ್ವೀಟ್ ಮಾಡಿ, ಮತದಾರರನ್ನು ಹುರಿದುಂಬಿಸಿದ್ದಾರೆ. ಮೊದಲು ಮತದಾನ ಮಾಡಿ, ನಂತರ ಉಪಾಹಾರ ಮಾಡಿ ಎಂದು ಹೇಳಿರುವ ಅವರು, ಕೊವಿಡ್​ 19 ನಿಯಮ ಪಾಲನೆಗೆ ಕರೆಕೊಟ್ಟಿದ್ದಾರೆ.

UP Assembly Election 2022: ಉತ್ತರ ಪ್ರದೇಶದಲ್ಲಿ ಮೊದಲ ಹಂತದ ಮತದಾನ ಪ್ರಾರಂಭ; ಮುಂಜಾನೆಯಿಂದಲೇ ಮತಗಟ್ಟೆಗೆ ಜನರ ಆಗಮನ
ಉತ್ತರ ಪ್ರದೇಶದ ಕೈರಾನಾದಲ್ಲಿ ಮತದಾನ
Follow us
| Updated By: Lakshmi Hegde

Updated on:Feb 10, 2022 | 8:03 AM

ಉತ್ತರಪ್ರದೇಶದಲ್ಲಿ ಮೊದಲ ಹಂತದ ಮತದಾನ (Voting Begins In Uttar Pradesh) ಈಗಾಗಲೇ ಪ್ರಾರಂಭವಾಗಿದೆ. ಬೆಳಗ್ಗೆ 6.30ರಿಂದಲೇ ಮತಗಟ್ಟೆಗಳಿಗೆ ಜನರು ಬರಲು ಪ್ರಾರಂಭಿಸಿದ್ದಾರೆ. ಇಂದು 11 ಜಿಲ್ಲೆಗಳ 58 ವಿಧಾನಸಭೆ ಕ್ಷೇತ್ರಗಳಲ್ಲಿ (Assembly Constituencies) ಮತದಾನ ನಡೆಯಲಿದ್ದು, ಒಟ್ಟು 623 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಈ ಹಂತದಲ್ಲಿ ಸುಮಾರು 2.27 ಕೋಟಿ ಅರ್ಹ ಮತದಾರರು ಮತದಾನ ಮಾಡಲಿದ್ದಾರೆ. ಇಂದು ರಾಜ್ಯದ ಪಶ್ಚಿಮ ಜಿಲ್ಲೆಗಳ ವಿಧಾನಸಭೆ ಕ್ಷೇತ್ರದಲ್ಲಿ ಮತದಾನ ನಡೆಯುತ್ತಿದೆ. ಈ ಭಾಗದ ಹಲವು ಕ್ಷೇತ್ರಗಳು ಜಾಟ್​ ಸಮುದಾಯದ ಪ್ರಾಬಲ್ಯ ಇರುವ ಸ್ಥಳಗಳು.  ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಮೂರು ಕೃಷಿ ಕಾಯ್ದೆಗಳನ್ನು ತೀವ್ರವಾಗಿ ಖಂಡಿಸಿ, ಹೋರಾಟದ ಮಾಡಿದವರೇ ಈ ಭಾಗದಲ್ಲಿ ಹೆಚ್ಚಿನ ಜನರು ಇದ್ದಾರೆ.  ಈ ಹಂತದಲ್ಲಿ ಸದ್ಯ ಬಿಜೆಪಿ ಸರ್ಕಾರದಲ್ಲಿರುವ 9 ಸಚಿವರು ಚುನಾವಣೆ ಎದುರಿಸುತ್ತಿದ್ದಾರೆ. ಒಟ್ಟಾರೆ 403 ಕ್ಷೇತ್ರಗಳಿಗೆ ಏಳು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್​ 10ರಂದು ಮತ ಎಣಿಕೆ ನಡೆಯಲಿದೆ. 

ಪ್ರಧಾನಿ ಮೋದಿ ಟ್ವೀಟ್​: ಉತ್ತರ ಪ್ರದೇಶದಲ್ಲಿ ಮತದಾನ ಶುರುವಾಗುವುದಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ ಹಿಂದಿಯಲ್ಲಿ ಟ್ವೀಟ್ ಮಾಡಿ, ಮತದಾರರನ್ನು ಹುರಿದುಂಬಿಸಿದ್ದಾರೆ. ಇಂದು ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದ. ಎಲ್ಲರೂ ಕೊವಿಡ್​ 19 ನಿಯಮಗಳನ್ನು ಪಾಲಿಸಬೇಕು. ಪ್ರಜಾಪ್ರಭುತ್ವದ ಪವಿತ್ರ ಹಬ್ಬದಲ್ಲಿ ಉತ್ಸಾಹದಿಂದ ಭಾಗವಹಿಸಬೇಕು. ಮೊದಲು ಮತದಾನ ಮಾಡಿ, ನಂತರ ಉಪಾಹಾರ ಮಾಡಿ ಎಂದು ಹೇಳಿದ್ದಾರೆ.

ಇನ್ನು ಉತ್ತರ ಪ್ರದೇಶದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿರುವ ಎಲ್ಲ ವಿಧಾನಸಭೆ ಕ್ಷೇತ್ರಗಳಲ್ಲೂ ಪೊಲೀಸ್ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಆಗ್ರಾ ಎಸ್​ಪಿ ವಿಕಾಸ್​ ಕುಮಾರ್​, ಮುಂಜಾನೆಯಿಂದಲೂ ಪೊಲೀಸರು ಮತ್ತು ಸ್ಥಳೀಯ ಆಡಳಿತ ಅಧಿಕಾರಿಗಳು ಸಕ್ರಿಯರಾಗಿ ಕೆಲಸ ಮಾಡುತ್ತಿದ್ದಾರೆ. ಮತದಾನ ನಡೆಯುತ್ತಿರುವ ಎಲ್ಲ ಕ್ಷೇತ್ರಗಳನ್ನೂ ಪರಿಶೀಲಿಸಲಾಗಿದ್ದು, ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕೇಂದ್ರ ಸಶಸ್ತ್ರ ಪಡೆಯ 129 ಕಂಪನಿಗಳನ್ನು ನಿಯೋಜಿಸಲಾಗಿದ್ದು, ಸಿವಿಲ್​ ಪೊಲೀಸ್​, ಹೋಂ ಗಾರ್ಡ್​ಗಳನ್ನೂ ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

ಹಾಪುರ್​, ಕೈರಾನಾ ಸೇರಿ ಹಲವು ಕ್ಷೇತ್ರಗಳಲ್ಲಿ ಬೆಳಗ್ಗೆಯಿಂದಲೇ ಜನರು ಕ್ಯೂ ನಿಂತಿದ್ದಾರೆ. ಉತ್ತರ ಪ್ರದೇಶ ಸಚಿವ ಅತುಲ್ ಗಾರ್ಗ್, ಗಾಜಿಯಾಬಾದ್‌ನ ಕವಿ ನಗರದ ಮತಗಟ್ಟೆಯಲ್ಲಿ ಮತ ಚಲಾಯಿಸಿದ್ದಾರೆ. ಹಾಗೇ ಮತಗಟ್ಟೆ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಆಗ್ರಾ ಗ್ರಾಮಾಂತರ ವಿಭಾಗದ ಬಿಜೆಪಿ ಅಭ್ಯರ್ಥಿ ಬೇಬಿ ರಾಣಿ ಮೌರ್ಯಾ, ಈ ಬಾರಿಯೂ ಉತ್ತರಪ್ರದೇಶದಲ್ಲಿ ಜನರು ಬಿಜೆಪಿ ಪರ ಮತ ಚಲಾಯಿಸುತ್ತಾರೆಂಬ ನಂಬಿಕೆಯಿದೆ ಎಂದಿದ್ದಾರೆ.

ಇದನ್ನೂ ಓದಿ: Skin Care: ತ್ವಚೆಯ ಟ್ಯಾನ್ ಸಮಸ್ಯೆಯಿಂದ ಪರಿಹಾರ ಬೇಕೇ? ಇಲ್ಲಿದೆ ಸರಳ ಮಾರ್ಗ ಪರಿಶೀಲಿಸಿ

Published On - 7:45 am, Thu, 10 February 22

ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ