AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬಿಣದ ಸೇತುವೆ ಕದ್ದಾಯ್ತು, ರೈಲ್ವೆ ಎಂಜಿನ್ ಮಾಯವಾಯ್ತು ಈಗ ರಾತ್ರೋ ರಾತ್ರಿ ಕೊಳ ಕೂಡ ನಾಪತ್ತೆ

ರಾತ್ರೋ ರಾತ್ರಿ ಕೊಳ(Pond)ವೊಂದು ನಾಪತ್ತೆಯಾಗಿರುವ ವಿಚಿತ್ರ ಘಟನೆ ಬಿಹಾರದ ದರ್ಬಂಗಾ ಜಿಲ್ಲೆಯಲ್ಲಿ ನಡೆದಿದೆ. ಜಲಮೂಲವಿದ್ದ ಜಾಗದಲ್ಲಿ ಏಕಾಏಕಿ ಗುಡಿಸಲು ನಿರ್ಮಿಸಲಾಗಿದೆ. ಈ ಕೊಳವನ್ನು ಭೂಮಾಫಿಯಾ ನುಂಗಿದೆ ಎಂದು ಆರೋಪಿಸಲಾಗಿದೆ. ಜಲಮೂಲಕ್ಕೆ ಮರಳನ್ನು ತುಂಬಿಸಿ ಅದರ ಮೇಲೆ ಗುಡಿಸಲು ನಿರ್ಮಿಸಿದ್ದಾರೆ ಎಂದು ವರದಿಯಾಗಿದೆ.

ಕಬ್ಬಿಣದ ಸೇತುವೆ ಕದ್ದಾಯ್ತು, ರೈಲ್ವೆ ಎಂಜಿನ್ ಮಾಯವಾಯ್ತು ಈಗ ರಾತ್ರೋ ರಾತ್ರಿ ಕೊಳ ಕೂಡ ನಾಪತ್ತೆ
ಗುಡಿಸಲು
ನಯನಾ ರಾಜೀವ್
|

Updated on: Jan 01, 2024 | 8:14 AM

Share

ರಾತ್ರೋ ರಾತ್ರಿ ಕೊಳ(Pond)ವೊಂದು ನಾಪತ್ತೆಯಾಗಿರುವ ವಿಚಿತ್ರ ಘಟನೆ ಬಿಹಾರದ ದರ್ಬಂಗಾ ಜಿಲ್ಲೆಯಲ್ಲಿ ನಡೆದಿದೆ. ಜಲಮೂಲವಿದ್ದ ಜಾಗದಲ್ಲಿ ಏಕಾಏಕಿ ಗುಡಿಸಲು ನಿರ್ಮಿಸಲಾಗಿದೆ. ಈ ಕೊಳವನ್ನು ಭೂಮಾಫಿಯಾ ನುಂಗಿದೆ ಎಂದು ಆರೋಪಿಸಲಾಗಿದೆ. ಜಲಮೂಲಕ್ಕೆ ಮರಳನ್ನು ತುಂಬಿಸಿ ಅದರ ಮೇಲೆ ಗುಡಿಸಲು ನಿರ್ಮಿಸಿದ್ದಾರೆ ಎಂದು ವರದಿಯಾಗಿದೆ.

ರಾತ್ರಿ ಇಡೀ ಆ ಪ್ರದೇಶದಲ್ಲಿ ಟ್ರಕ್​ಗಳು ಸೇರಿದಂತೆ ಹಲವು ವಾಹನಗಳ ಸಂಚಾರ ಇದ್ದ ಹಿನ್ನೆಲೆಯಲ್ಲಿ ಅನುಮಾನಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೊಳವನ್ನು ಮೀನು ಸಾಕಣೆ ಮತ್ತು ಸಸ್ಯಗಳಿಗೆ ನೀರುಣಿಸಲು ಬಳಸಲಾಗುತ್ತಿತ್ತು. ಈಗ ಕೊಳವು ಆ ಸ್ಥಳದಲ್ಲಿ ಅಸ್ತಿತ್ವದಲ್ಲಿದ್ದ ಯಾವುದೇ ಲಕ್ಷಣಗಳು ಇಲ್ಲವೇ ಇಲ್ಲ. ಕಳೆದ 10-15 ದಿನಗಳಲ್ಲಿ ನೀರು ಭರ್ತಿಯಾಗಿತ್ತು ಎಂದು ಜನರು ತಿಳಿಸಿದ್ದಾರೆ. ರಾತ್ರೋ ರಾತ್ರಿ ಈ ಘಟನೆ ನಡೆದಿದೆ, ಈ ಜಮೀನು ಯಾರದ್ದು ಎನ್ನುವ ಬಗ್ಗೆ ಯಾವುದೇ ಮಾಹಿತಿ ಇಲ್ಲ.

ಸ್ವಲ್ಪ ಸಮಯಗಳ ಹಿಂದೆ ಬಿಹಾರದ ರೋಹ್ತಾಸ್ ಜಿಲ್ಲೆಯಲ್ಲಿ ಇಂಥದ್ದೇ ಘಟನೆ ನಡೆದಿತ್ತು. ಹಗಲಿನಲ್ಲೇ 60 ಅಡಿ ಉದ್ದ 20 ಟನ್ ತೂಕದ ಕಬ್ಬಿಣದ ಸೇತುವೆಯನ್ನು ಯಾರೋ ಕಳ್ಳರು ಕದ್ದು ಪರಾರಿಯಾಗಿದ್ದರು.

ಮತ್ತಷ್ಟು ಓದಿ: ಚಿಕ್ಕಬಳ್ಳಾಪುರ: ಎಸ್​ಬಿಐ ಎಟಿಎಂಗೆ ಬೆಂಕಿ ಹಾಕಿ 20 ಲಕ್ಷ ರೂ. ಕಳ್ಳತನ; ಸ್ಥಳಕ್ಕೆ ಎಸ್ಪಿ ಭೇಟಿ

ಕೆಲವರು ನೀರಾವರಿ ಇಲಾಖೆಯ ಅಧಿಕಾರಿಗಳ ಸೋಗಿನಲ್ಲಿ ಬಂದು ಕಾಲುವೆಗೆ ನಿರ್ಮಿಸಿರುವ ಹಳೆ ಕಬ್ಬಿಣದ ಸೇತುವೆಯನ್ನು ಕಿತ್ತು ಹಾಕಲು ಮುಂದಾಗಿದ್ದರು.

ಗ್ಯಾಸ್​ ಕಟರ್​ನಿಂದ ಸೇತುವೆಯನ್ನು ಕತ್ತರಿಸಿದ್ದರು, ಬಳಿಕ ಪಿಕ್​ಅಪ್​ಗೆ ತುಂಬಿಸಿಕೊಂಡು ಹೋಗಿದ್ದಾರೆ, ಬಳಿಕ ಅವರು ನೀರಾವರಿ ಇಲಾಖೆ ಅಧಿಕಾರಿಗಳಲ್ಲ ಕಳ್ಳರು ಎಂಬುದು ತಿಳಿದುಬಂದಿದೆ.

ಸೇತುವೆ ಕಳ್ಳತನ ಸ್ಥಳೀಯ ಆಡಳಿತದಲ್ಲೂ ತಲ್ಲಣ ಮೂಡಿಸಿದೆ. ರೋಹ್ತಾಸ್ ಜಿಲ್ಲೆಯ ನಸ್ರಿಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಅಮಿಯಾವರ್ ಎಂಬಲ್ಲಿ ಸೇತುವೆ ಕಳ್ಳತನದ ಘಟನೆ ನಡೆದಿದೆ . ಇಲ್ಲಿನ ಆರಾ ಕಾಲುವೆಯಲ್ಲಿ 1972ರಲ್ಲಿ ಕಬ್ಬಿಣದ ಸೇತುವೆಯನ್ನು ನಿರ್ಮಿಸಲಾಗಿತ್ತು. 2022ರ ನವೆಂಬರ್​ ತಿಂಗಳಿನಲ್ಲಿ ರೈಲ್ವೆಯ ಡೀಸೆಲ್​ ಎಂಜಿನ್​ ಅನ್ನೇ ಕಳ್ಳತನ ಮಾಡಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?