AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂಂಚ್ ಭಯೋತ್ಪಾದನಾ ದಾಳಿ ಪ್ರಕರಣ: ವಿಚಾರಣೆಗೆ ಹೆದರಿ ವಿಷ ಸೇವಿಸಿ ವ್ಯಕ್ತಿ ಸಾವು

ಪೂಂಚ್ ಭಯೋತ್ಪಾದನಾ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಿಚಾರಣೆಗೆ ಎಂದು ಕರೆದ 35 ವರ್ಷದ ವ್ಯಕ್ತಿಯೊಬ್ಬರು ವಿಷ ಸೇವಿಸಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೂಂಚ್ ಭಯೋತ್ಪಾದನಾ ದಾಳಿ ಪ್ರಕರಣ: ವಿಚಾರಣೆಗೆ ಹೆದರಿ ವಿಷ ಸೇವಿಸಿ ವ್ಯಕ್ತಿ ಸಾವು
ಪೂಂಚ್ ಭಯೋತ್ಪಾದನಾ ದಾಳಿ
Follow us
ಅಕ್ಷಯ್​ ಪಲ್ಲಮಜಲು​​
|

Updated on: Apr 27, 2023 | 4:13 PM

ಪೂಂಚ್/ಜಮ್ಮು: ಪೂಂಚ್ ಭಯೋತ್ಪಾದನಾ ದಾಳಿ ಪ್ರಕರಣಕ್ಕೆ (Poonch terror attack case)  ಸಂಬಂಧಿಸಿದಂತೆ ಪೊಲೀಸರು ವಿಚಾರಣೆಗೆ ಎಂದು ಕರೆದ 35 ವರ್ಷದ ವ್ಯಕ್ತಿಯೊಬ್ಬರು ವಿಷ ಸೇವಿಸಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜಿಲ್ಲೆಯ ಮೆಂಧರ್ ತಹಸಿಲ್‌ನ ನಾರ್ ಗ್ರಾಮದ ನಿವಾಸಿ ಮುಖ್ತಾರ್ ಹುಸೇನ್ ಷಾ ಅವರು ಕೆಲವು ಕೌಟುಂಬಿಕ ಸಮಸ್ಯೆಗಳನ್ನು ಎದುರಿಸುತ್ತಿರುವುದರಿಂದ ಹಂತಕಗೊಂಡಿದ್ದಾರೆ. ಜತೆಗೆ ಅವರನ್ನು ಈ ಪ್ರಕರಣದಲ್ಲಿ ಶಂಕಿತ ಎಂದು ಕರೆದಿಲ್ಲ, ನಮಗೆ ಕೆಲವೊಂದು ಮಾಹಿತಿಗಳು ಬೇಕಿತ್ತು ಎಂದು ಹೇಳಿದ್ದಾರೆ. ಮುಖ್ತಾರ್ ಹುಸೇನ್ ಷಾ ಮಂಗಳವಾರ ಸಂಜೆ ಮನೆಯಲ್ಲಿ ವಿಷ ಸೇವಿಸಿದ್ದಾರೆ ಎನ್ನಲಾಗಿದೆ. ತಕ್ಷಣ ಅವರನ್ನು ಸ್ಥಳೀಯ ರಾಜೌರಿಯ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಯಿತು, ಆದರೆ ಚಿಕಿತ್ಸೆ ಫಲಿಸದೆ ಇಂದು (ಏ.27) ಬೆಳಿಗ್ಗೆ ನಿಧನರಾದರು ಎಂದು ಅಧಿಕಾರಿ ತಿಳಿಸಿದ್ದಾರೆ.

ಭಟ ಧುರಿಯನ್ ಅರಣ್ಯದಲ್ಲಿ ಭಯೋತ್ಪಾದಕರು ಏಪ್ರಿಲ್ 20 ರಂದು ಐವರು ಸೈನಿಕರನ್ನು ಹತ್ಯೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ವಿಚಾರಣೆಗೆ ಮಾಡುವಂತೆ ಕೇಳಿದ ಕೆಲವೇ ಗಂಟೆಗಳ ನಂತರ ಈ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. ಶಂಕಿತರು ನಡೆಸಿದ (ಭಯೋತ್ಪಾದನಾ ದಾಳಿ ಪ್ರಕರಣದಲ್ಲಿ) ದಾಳಿಯ ಬಗ್ಗೆ ಹೆಚ್ಚಿನ ವರದಿ ನೀಡಲು ಅಧಿಕಾರಿಗಳು ದಾಳಿ ನಡೆದ ಸ್ಥಳದಲ್ಲಿರುವ ಹಳ್ಳಿಯ ನಿವಾಸಿಗಳನ್ನು ವಿಚಾರಣೆಗೆ ಕರೆಯಲಾಗಿತ್ತು. ಅದರಲ್ಲಿ ಮುಖ್ತಾರ್ ಹುಸೇನ್ ಷಾ ಕೂಡ ಒಬ್ಬರು ಎಂದು ಹೇಳಲಾಗಿತ್ತು. ಮುಖ್ತಾರ್ ಹುಸೇನ್ ಷಾ ಅವರಿಗೆ ಕೌಟುಂಬಿಕ ಸಮಸ್ಯೆಗಳು ಇತ್ತು ಮತ್ತು ಈ ವಿಚಾರವಾಗಿ ಅವರು ತುಂಬಾ ಗೊಂದಲಕ್ಕೊಳಗಾಗಿದ್ದಾರೆ ಎಂದು ಅಧಿಕಾರಿ ಹೇಳಿದರು. ಎಂದರು.

ಇದನ್ನೂ ಓದಿ:ಪೂಂಚ್‌ನಲ್ಲಿ ಉಗ್ರರ ದಾಳಿಗೊಳಗಾದ ಸೇನಾ ಟ್ರಕ್ ಇಫ್ತಾರ್​​ಗಾಗಿ ಹಣ್ಣುಗಳನ್ನು ಸಾಗಿಸುತ್ತಿತ್ತು; ಈದ್ ಆಚರಿಸುವುದಿಲ್ಲ ಎಂದ ಗ್ರಾಮ

ಭಟಾ ಧುರಿಯನ್‌ನಲ್ಲಿ ನಡೆದ ದಾಳಿಯ ನಂತರ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು 60 ಕ್ಕೂ ಹೆಚ್ಚು ಜನರನ್ನು ಬಂಧಿಸಿವೆ, ಈ ಪ್ರದೇಶದಲ್ಲಿರುವ ದಟ್ಟವಾದ ಅರಣ್ಯ ಪ್ರದೇಶ ಮತ್ತು ನೈಸರ್ಗಿಕ ಗುಹೆಗಳಿಂದಾಗಿ ಗಡಿ ನಿಯಂತ್ರಣ ರೇಖೆಯನ್ನು ದಾಟಿ ಭಯೋತ್ಪಾದಕರ ಬಂದಿದ್ದಾರೆ ಎಂದು ಹೇಳಲಾಗಿದೆ. ಎರಡು ತಿಂಗಳಿನಿಂದ ಭಯೋತ್ಪಾದಕರಿಗೆ ಲಾಜಿಸ್ಟಿಕ್ ಬೆಂಬಲವನ್ನು ನೀಡಲಾಗುತ್ತಿತ್ತು ಎಂದು ಶಂಕಿತನೊಬ್ಬ ಹೇಳಿದ್ದಾನೆ. ಆತನನ್ನು ಹೆಚ್ಚಿನ ವಿಚಾರಣೆ ನಡೆಸಲಾಗುತ್ತದೆ ಎಂದು ಅಧಿಕಾರಿ ಹೇಳಿದರು. ಭದ್ರತಾ ಪಡೆಗಳ ಶೋಧ ಕಾರ್ಯಚರಣೆ ಎಂಟನೇ ದಿನ ಕಾಲಿಟ್ಟಿದೆ. ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಡ್ರೋನ್‌ಗಳು, ಸ್ನಿಫರ್ ಡಾಗ್‌ಗಳು ಮತ್ತು ಲೋಹ ಶೋಧಕಗಳನ್ನು ಬಳಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎರಡು ಗುಂಪುಗಳಲ್ಲಿ ಏಳರಿಂದ ಎಂಟು ಭಯೋತ್ಪಾದಕರು ದಾಳಿಯನ್ನು ನಡೆಸಿದ್ದಾರೆ ಎಂದು ಮೂಲಗಳು ಈ ಹಿಂದೆ ತಿಳಿಸಿದ್ದವು. ರಾಷ್ಟ್ರೀಯ ರೈಫಲ್ಸ್ ಆಯೋಜಿಸಲಿರುವ ಇಫ್ತಾರ್ ಕೂಟಕ್ಕೆ ಭಿಂಬರ್ ಗಲಿ ಶಿಬಿರದಿಂದ ಸಂಗಿಯೋಟೆ ಗ್ರಾಮಕ್ಕೆ ಹಣ್ಣು, ತರಕಾರಿ ಮತ್ತು ಇತರ ವಸ್ತುಗಳನ್ನು ಸಾಗಿಸುತ್ತಿದ್ದ ಟ್ರಕ್‌ನ ಮೇಲೆ ಉಗ್ರರು ದಾಳಿ ನಡೆಸಿ ಅಲ್ಲಿಂದ ರಸ್ತೆಯ ಮೋರಿಯ ಕೆಳಗೆ ಅಡಗಿಕೊಂಡಿದ್ದರು ಎಂದು ವರದಿಯಲ್ಲಿ ತಿಳಿಸಲಾಗಿತ್ತು. ಭಯೋತ್ಪಾದಕರ ದಾಳಿಯಲ್ಲಿ ಹುತಾತ್ಮರಾದ ಯೋಧರು ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗೆ ನಿಯೋಜಿಸಲಾದ ರಾಷ್ಟ್ರೀಯ ರೈಫಲ್ಸ್ ಘಟಕದವರು ಎಂದು ಹೇಳಲಾಗಿದೆ. ರಾಷ್ಟ್ರೀಯ ಭದ್ರತಾ ಪಡೆ (ಎನ್‌ಎಸ್‌ಜಿ) ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸೇರಿದಂತೆ ವಿವಿಧ ಏಜೆನ್ಸಿಗಳ ತಜ್ಞರು ದಾಳಿ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್