AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಮತ್ತಷ್ಟು ಹೆಚ್ಚಿದ ವಾಯುಮಾಲಿನ್ಯ: ಮತ್ತೆ GRAP III ಅಡಿಯಲ್ಲಿ ನಿರ್ಬಂಧ

ದೆಹಲಿಯಲ್ಲಿ ದಿನದಿಂದ ದಿನಕ್ಕೆ ವಾಯು ಗುಣಮಟ್ಟ ಕಳಪೆಯಾಗುತ್ತಿದೆ. ಕೆಲವು ದಿನಗಳಿಂದ ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಸೂಚ್ಯಂಕವು ಅತ್ಯಂತ ಕಳಪೆಯಾಗಿದ್ದು, ಇದೀಗ ದೇಹಲಿಯ ಸಚಿವರು ತುರ್ತು ಪತ್ರಿಕಾಗೋಷ್ಠಿ ನಡೆಸಿ ಮಹತ್ವ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.

ದೆಹಲಿಯಲ್ಲಿ ಮತ್ತಷ್ಟು ಹೆಚ್ಚಿದ ವಾಯುಮಾಲಿನ್ಯ: ಮತ್ತೆ GRAP III ಅಡಿಯಲ್ಲಿ ನಿರ್ಬಂಧ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on:Dec 23, 2023 | 1:22 PM

ದೆಹಲಿ, ಡಿ23: ದೆಹಲಿಯಲ್ಲಿ ದಿನದಿಂದ ದಿನಕ್ಕೆ ವಾಯುಮಾಲಿನ್ಯ ಹೆಚ್ಚುತ್ತಿದೆ. ಕೆಲವು ದಿನಗಳಿಂದ ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಸೂಚ್ಯಂಕವು ಅತ್ಯಂತ ಕಳಪೆಯಾಗಿದ್ದು, ಇದೀಗ ದೇಹಲಿಯ ಸಚಿವರು ತುರ್ತು ಪತ್ರಿಕಾಗೋಷ್ಠಿ ನಡೆಸಿ ಮಹತ್ವ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ದೆಹಲಿಯಲ್ಲಿನ ಗಾಳಿಯ ಗುಣಮಟ್ಟವು ತೀವ್ರವಾಗಿ ಹದಗೆಟ್ಟಿದೆ ಮತ್ತು AQI (ವಾಯು ಗುಣಮಟ್ಟ ಸೂಚ್ಯಂಕ) 400ಕ್ಕೆ ಕುಸಿದಿದ್ದು, ತಾಪಮಾನದಲ್ಲಿಯು ಏರಿಳಿತಗಳು ಕಂಡು ಬಂದಿದೆ. ಈ ಕಾರಣದಿಂದಾಗಿ, CAQM (ವಾಯು ಗುಣಮಟ್ಟ ನಿರ್ವಹಣೆಗಾಗಿ ಆಯೋಗ) ಮತ್ತೊಮ್ಮೆ GRAP III (ಶ್ರೇಣೀಕೃತ ಪ್ರತಿಕ್ರಿಯೆ ಕ್ರಿಯಾ ಯೋಜನೆ) ಅಡಿಯಲ್ಲಿ ನಿರ್ಬಂಧಗಳನ್ನು ಜಾರಿಗೆ ತಂದಿದೆ ಎಂದು ಸಚಿವ ಗೋಪಾಲ್ ರೈ ಹೇಳಿದ್ದಾರೆ.

ಶೂನ್ಯ ಮತ್ತು 50ರ ನಡುವಿನ ವಾಯು ಗುಣಮಟ್ಟ ಸೂಚ್ಯಂಕವನ್ನು (AQI) ‘ಉತ್ತಮ’, 51 ಮತ್ತು 100 ‘ತೃಪ್ತಿದಾಯಕ’, 101 ಮತ್ತು 200 ‘ಮಧ್ಯಮ’, 201 ಮತ್ತು 300 ‘ಕಳಪೆ’, 301 ಮತ್ತು 400 ‘ಅತ್ಯಂತ ಕಳಪೆ’, 401 ಮತ್ತು 450 ಎಂದು ಪರಿಗಣಿಸಲಾಗುತ್ತದೆ. ಇದೀಗ ತೀವ್ರ’ ಮತ್ತು 450 ಕ್ಕಿಂತ ಹೆಚ್ಚು ವಾಯುಮಾಲಿನ್ಯವನ್ನು ಹೊಂದಿದೆ. ಈ ಕಾರಣಕ್ಕೆ ವಾಯುಮಾಲಿನ್ಯ ಹೊಂದಿರುವ ಪ್ರದೇಶಗಳಲ್ಲಿ ನಿರ್ಮಾಣ ಕಾರ್ಯ ಮತ್ತು BS-III ಪೆಟ್ರೋಲ್ ಮತ್ತು BS-IV ಡೀಸೆಲ್ ನಾಲ್ಕು ಚಕ್ರಗಳ ವಾಹನಗಳ ಓಡಾಟವನ್ನು ನಿಷೇಧಿಸಲಾಗಿದೆ.

ದೆಹಲಿಯಲ್ಲಿ ಮಂಜು ಮತ್ತು ಗಾಳಿಯ ವೇಗ ಕಡಿಮೆಯಾಗಿರುವ ಕಾರಣ ವಾಯುಮಾಲಿನ್ಯ ಹಠಾತ್ ಏರಿಕೆಗೆ ಕಾರಣವಾಗಿದೆ. ವಾಯುಮಾಲಿನ್ಯ ಮತ್ತು ವಾಯು ಗುಣಮಟ್ಟ ಕಳಪೆ ಇರುವ ಪ್ರದೇಶದಲ್ಲಿ ಕಾನೂನುಬದ್ಧ ಕ್ರಮಗಳನ್ನು ತರಲಾಗುವುದು ಎಂದು CAQM ಹೇಳಿದೆ.

ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್ (GRAP) ಯ ಹಂತ-III ಅಡಿಯಲ್ಲಿ ಹಲವು ನಿರ್ಬಂಧಗಳನ್ನು ತರಲಾಗುವುದು. ದೆಹಲಿ-ಎನ್‌ಸಿಆರ್‌ನಲ್ಲಿ ಅನಿವಾರ್ಯವಲ್ಲದ ನಿರ್ಮಾಣ ಕಾರ್ಯ, ಕಲ್ಲು ಪುಡಿಮಾಡುವಿಕೆ ಮತ್ತು ಗಣಿಗಾರಿಕೆಯನ್ನು ನಿಷೇಧಿಸಲು ಆದೇಶ ನೀಡಲಾಗಿದೆ. GRAP ಹಂತ-III ಅಡಿಯಲ್ಲಿ, ದೆಹಲಿ, ಗುರುಗ್ರಾಮ್, ಫರಿದಾಬಾದ್, ಗಾಜಿಯಾಬಾದ್ ಮತ್ತು ಗೌತಮ್ ಬುಧ್ ನಗರದಲ್ಲಿ BS-III ಪೆಟ್ರೋಲ್ ಮತ್ತು BS-IV ಡೀಸೆಲ್ ನಾಲ್ಕು-ಚಕ್ರಗಳ ವಾಹನಗಳ ಓಡಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಇದನ್ನೂ ಓದಿ: ವಾಯುಮಾಲಿನ್ಯದ ಎಫೆಕ್ಟ್​; ನಿಮ್ಮ ರೋಗನಿರೋಧಕ ಶಕ್ತಿ ಹೆಚ್ಚಿಸುವ 4 ಆಹಾರಗಳಿವು

ನಗರವು 9.6 ಡಿಗ್ರಿ ಸೆಲ್ಸಿಯಸ್‌ನ ಕನಿಷ್ಠ ತಾಪಮಾನವನ್ನು ಹೊಂದಿದೆ. ಇದು ಈ ಕಾಲದಲ್ಲಿ ಉಂಟಾಗುವ ತಾಪಮಾನಕ್ಕಿಂತ ಹೆಚ್ಚಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಹಗಲಿನಲ್ಲಿ ಸಾಧಾರಣ ಮಂಜು ಇರುತ್ತದೆ. ಹಾಗೂ ಗರಿಷ್ಠ ತಾಪಮಾನವು ಸುಮಾರು 23 ಡಿಗ್ರಿ ಸೆಲ್ಸಿಯಸ್‌ನಲ್ಲಿರುವ ಸಾಧ್ಯತೆಗಳು ಇದೆ ಎಂದು ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:39 pm, Sat, 23 December 23

ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್