Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಸಾಂ ಚಹಾ ಜಗತ್ತಿನಲ್ಲಿ ಜನಪ್ರಿಯ: ಬೃಹತ್​​ ಚಹಾ ತೋಟಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ

ಪ್ರಧಾನಿ ಮೋದಿ ಅವರು ಇಂದು ಅಸ್ಸಾಂನಲ್ಲಿ 18 ಸಾವಿರ ಕೋಟಿ ರೂ.ಗೂ ಅಧಿಕ ಮೊತ್ತದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದರ ಜತೆಗೆ ಅಸ್ಸಾಂನ ಬೃಹತ್​​ ಚಾಹ ತೋಟಕ್ಕೂ ಪ್ರಧಾನಿ ಮೋದಿ ಭೇಟಿ ನೀಡಿದ್ದಾರೆ.

ಅಸ್ಸಾಂ ಚಹಾ ಜಗತ್ತಿನಲ್ಲಿ ಜನಪ್ರಿಯ: ಬೃಹತ್​​ ಚಹಾ ತೋಟಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ
ನರೇಂದ್ರ ಮೋದಿ
Follow us
ಅಕ್ಷಯ್​ ಪಲ್ಲಮಜಲು​​
|

Updated on:Mar 09, 2024 | 3:25 PM

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು ಅಸ್ಸಾಂ ಪ್ರವಾಸದಲ್ಲಿದ್ದು, ಅಲ್ಲಿ ಬೃಹತ್​​​ ಕಾಫಿ ತೋಟಕ್ಕೆ ಭೇಟಿ ನೀಡಿ, ಕಾರ್ಮಿಕ ಶ್ರಮವನ್ನು ಶ್ಲಾಘಿಸಿದ್ದಾರೆ. ಅಸ್ಸಾಂ ತನ್ನ ಭವ್ಯವಾದ ಚಹಾ ತೋಟಗಳಿಗೆ ಹೆಸರುವಾಸಿಯಾಗಿದೆ ಮತ್ತು ಅಸ್ಸಾಂ ಚಹಾವು ಪ್ರಪಂಚದಾದ್ಯಂತ ದೊಡ್ಡ ಹೆಸರನ್ನು ಮಾಡಿಕೊಂಡಿದೆ. ಅಲ್ಲಿನ ಜನರ ಶ್ರಮವನ್ನು ಹಾಗೂ ಪ್ರಪಂಚದಾದ್ಯಂತ ಅಸ್ಸಾಂನ ಪ್ರತಿಷ್ಠೆಯನ್ನು ಹೆಚ್ಚಿಸುವ ಚಹಾ ತೋಟದ ತಂಡವನ್ನು ಶ್ಲಾಘಿಸಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಪ್ರವಾಸಿಗರು ಅಸ್ಸಾಂಗೆ ಭೇಟಿ ನೀಡಿದಾಗ ಖಂಡಿತ ಈ ಚಹಾ ತೋಟಕ್ಕೆ ಭೇಟಿ ನೀಡಲೇಬೇಕು ಎಂದು ಹೇಳಿದ್ದಾರೆ. ಇದರ ಜತೆಗೆ ನರೇಂದ್ರ ಮೋದಿ ಅವರು ತಮ್ಮ ಎಕ್ಸ್​​ ಖಾತೆಯಲ್ಲಿ ಈ ಬಗ್ಗೆ ಹಂಚಿಕೊಂಡಿದ್ದಾರೆ. ಪ್ರಧಾನಿ ಮೋದಿ ಅವರು ಅಸ್ಸಾಂನ ಹೃದಯಭಾಗದಲ್ಲಿರುವ ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಕಾಜಿರಂಗ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡಿದರು.

ತಮ್ಮ ಭೇಟಿಯ ಸಮಯದಲ್ಲಿ, ಪ್ರಧಾನಿ ಮೋದಿ ಅವರು ವಿವಿಧ ಅಧಿಕಾರಿಗಳು ಮತ್ತು ವನ್ಯಜೀವಿ ಪಾಲಕರೊಂದಿಗೆ ಸಂವಾದ ನಡೆಸಿದರು, ಜತೆಗೆ ಪರಿಸರ ಸಂರಕ್ಷಣೆಯ ಮಹತ್ವವನ್ನು ಒತ್ತಿ ಹೇಳಿದರು. ಹಾಗೂ ಇಂದು ಬೆಳಗ್ಗೆ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಜಂಗಲ್ ಸಫಾರಿ ಮಾಡಿದರು. ಆನೆಯ ಮೇಲೆ ಸವಾರಿ ಮಾಡುತ್ತಾ ಸೂರ್ಯೋದಯದ ಸುಂದರ ದೃಶ್ಯವನ್ನೂ ವೀಕ್ಷಣೆ ಮಾಡಿದರು.

ಇದನ್ನೂ ಓದಿ: ವಿಶ್ವದ ಅತಿ ಉದ್ದದ ಸೆಲಾ ಪಾಸ್ ಸುರಂಗ ಮಾರ್ಗ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ; ಇಲ್ಲಿದೆ ಇಂಟರೆಸ್ಟಿಂಗ್ ಮಾಹಿತಿ

ಪ್ರಧಾನಿ ಮೋದಿ ಇಂದು ಅಸ್ಸಾಂನಲ್ಲಿ 18 ಸಾವಿರ ಕೋಟಿ ರೂ.ಗೂ ಅಧಿಕ ಮೊತ್ತದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮಹಾನ್ ಅಹೋಮ್ ಕಮಾಂಡರ್ ಲಚಿತ್ ಬೊರ್ಫುಕನ್ ಅವರ 125 ಅಡಿ ಎತ್ತರದ ಪ್ರತಿಮೆಯನ್ನು ಸಹ ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 3:22 pm, Sat, 9 March 24

ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಪ್ರತಿಭಟನೆ ಹೆಸರಲ್ಲಿ ಕುಟುಂಬವೊಂದರ ವೈಭವೀಕರಣ ನಡೆಯಬಾರದು: ಯತ್ನಾಳ್
ಪ್ರತಿಭಟನೆ ಹೆಸರಲ್ಲಿ ಕುಟುಂಬವೊಂದರ ವೈಭವೀಕರಣ ನಡೆಯಬಾರದು: ಯತ್ನಾಳ್
ಫಿಲ್ ಸಾಲ್ಟ್​ನ ಔಟ್ ಮಾಡಿದ ಬೌಲರ್​ನ ಅಭಿನಂದಿಸಿದ ವಿರಾಟ್ ಕೊಹ್ಲಿ
ಫಿಲ್ ಸಾಲ್ಟ್​ನ ಔಟ್ ಮಾಡಿದ ಬೌಲರ್​ನ ಅಭಿನಂದಿಸಿದ ವಿರಾಟ್ ಕೊಹ್ಲಿ
ಮಗನಿಗಾಗಿ ಮುಡಿಕೊಟ್ಟು ತಿರುಪತಿಯಲ್ಲಿ ದೇವರ ದರ್ಶನ ಮಾಡಿದ ಪವನ್ ಪತ್ನಿ
ಮಗನಿಗಾಗಿ ಮುಡಿಕೊಟ್ಟು ತಿರುಪತಿಯಲ್ಲಿ ದೇವರ ದರ್ಶನ ಮಾಡಿದ ಪವನ್ ಪತ್ನಿ
ಮಚ್ಚುಹಿಡಿದಿದ್ದ ಶ್ರೀನಿವಾಸ ಪೂಜಾರಿಯನ್ನು ಕೂಡಲೇ ವಶಕ್ಕೆ ಪಡೆದ ಪೊಲೀಸ್
ಮಚ್ಚುಹಿಡಿದಿದ್ದ ಶ್ರೀನಿವಾಸ ಪೂಜಾರಿಯನ್ನು ಕೂಡಲೇ ವಶಕ್ಕೆ ಪಡೆದ ಪೊಲೀಸ್
‘ಬ್ಯಾಂಕ್ ಜನಾರ್ಧನ್ ಭೇಟಿ ಮಾಡಲು ಇತ್ತೀಚೆಗೆ ಆಗಲೇ ಇಲ್ಲ’; ಸುಧಾರಾಣಿ
‘ಬ್ಯಾಂಕ್ ಜನಾರ್ಧನ್ ಭೇಟಿ ಮಾಡಲು ಇತ್ತೀಚೆಗೆ ಆಗಲೇ ಇಲ್ಲ’; ಸುಧಾರಾಣಿ
ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ
ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ
ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ
ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ
ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ