AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಸಾಂ ಚಹಾ ಜಗತ್ತಿನಲ್ಲಿ ಜನಪ್ರಿಯ: ಬೃಹತ್​​ ಚಹಾ ತೋಟಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ

ಪ್ರಧಾನಿ ಮೋದಿ ಅವರು ಇಂದು ಅಸ್ಸಾಂನಲ್ಲಿ 18 ಸಾವಿರ ಕೋಟಿ ರೂ.ಗೂ ಅಧಿಕ ಮೊತ್ತದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದರ ಜತೆಗೆ ಅಸ್ಸಾಂನ ಬೃಹತ್​​ ಚಾಹ ತೋಟಕ್ಕೂ ಪ್ರಧಾನಿ ಮೋದಿ ಭೇಟಿ ನೀಡಿದ್ದಾರೆ.

ಅಸ್ಸಾಂ ಚಹಾ ಜಗತ್ತಿನಲ್ಲಿ ಜನಪ್ರಿಯ: ಬೃಹತ್​​ ಚಹಾ ತೋಟಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ
ನರೇಂದ್ರ ಮೋದಿ
ಅಕ್ಷಯ್​ ಪಲ್ಲಮಜಲು​​
|

Updated on:Mar 09, 2024 | 3:25 PM

Share

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು ಅಸ್ಸಾಂ ಪ್ರವಾಸದಲ್ಲಿದ್ದು, ಅಲ್ಲಿ ಬೃಹತ್​​​ ಕಾಫಿ ತೋಟಕ್ಕೆ ಭೇಟಿ ನೀಡಿ, ಕಾರ್ಮಿಕ ಶ್ರಮವನ್ನು ಶ್ಲಾಘಿಸಿದ್ದಾರೆ. ಅಸ್ಸಾಂ ತನ್ನ ಭವ್ಯವಾದ ಚಹಾ ತೋಟಗಳಿಗೆ ಹೆಸರುವಾಸಿಯಾಗಿದೆ ಮತ್ತು ಅಸ್ಸಾಂ ಚಹಾವು ಪ್ರಪಂಚದಾದ್ಯಂತ ದೊಡ್ಡ ಹೆಸರನ್ನು ಮಾಡಿಕೊಂಡಿದೆ. ಅಲ್ಲಿನ ಜನರ ಶ್ರಮವನ್ನು ಹಾಗೂ ಪ್ರಪಂಚದಾದ್ಯಂತ ಅಸ್ಸಾಂನ ಪ್ರತಿಷ್ಠೆಯನ್ನು ಹೆಚ್ಚಿಸುವ ಚಹಾ ತೋಟದ ತಂಡವನ್ನು ಶ್ಲಾಘಿಸಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಪ್ರವಾಸಿಗರು ಅಸ್ಸಾಂಗೆ ಭೇಟಿ ನೀಡಿದಾಗ ಖಂಡಿತ ಈ ಚಹಾ ತೋಟಕ್ಕೆ ಭೇಟಿ ನೀಡಲೇಬೇಕು ಎಂದು ಹೇಳಿದ್ದಾರೆ. ಇದರ ಜತೆಗೆ ನರೇಂದ್ರ ಮೋದಿ ಅವರು ತಮ್ಮ ಎಕ್ಸ್​​ ಖಾತೆಯಲ್ಲಿ ಈ ಬಗ್ಗೆ ಹಂಚಿಕೊಂಡಿದ್ದಾರೆ. ಪ್ರಧಾನಿ ಮೋದಿ ಅವರು ಅಸ್ಸಾಂನ ಹೃದಯಭಾಗದಲ್ಲಿರುವ ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಕಾಜಿರಂಗ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡಿದರು.

ತಮ್ಮ ಭೇಟಿಯ ಸಮಯದಲ್ಲಿ, ಪ್ರಧಾನಿ ಮೋದಿ ಅವರು ವಿವಿಧ ಅಧಿಕಾರಿಗಳು ಮತ್ತು ವನ್ಯಜೀವಿ ಪಾಲಕರೊಂದಿಗೆ ಸಂವಾದ ನಡೆಸಿದರು, ಜತೆಗೆ ಪರಿಸರ ಸಂರಕ್ಷಣೆಯ ಮಹತ್ವವನ್ನು ಒತ್ತಿ ಹೇಳಿದರು. ಹಾಗೂ ಇಂದು ಬೆಳಗ್ಗೆ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಜಂಗಲ್ ಸಫಾರಿ ಮಾಡಿದರು. ಆನೆಯ ಮೇಲೆ ಸವಾರಿ ಮಾಡುತ್ತಾ ಸೂರ್ಯೋದಯದ ಸುಂದರ ದೃಶ್ಯವನ್ನೂ ವೀಕ್ಷಣೆ ಮಾಡಿದರು.

ಇದನ್ನೂ ಓದಿ: ವಿಶ್ವದ ಅತಿ ಉದ್ದದ ಸೆಲಾ ಪಾಸ್ ಸುರಂಗ ಮಾರ್ಗ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ; ಇಲ್ಲಿದೆ ಇಂಟರೆಸ್ಟಿಂಗ್ ಮಾಹಿತಿ

ಪ್ರಧಾನಿ ಮೋದಿ ಇಂದು ಅಸ್ಸಾಂನಲ್ಲಿ 18 ಸಾವಿರ ಕೋಟಿ ರೂ.ಗೂ ಅಧಿಕ ಮೊತ್ತದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮಹಾನ್ ಅಹೋಮ್ ಕಮಾಂಡರ್ ಲಚಿತ್ ಬೊರ್ಫುಕನ್ ಅವರ 125 ಅಡಿ ಎತ್ತರದ ಪ್ರತಿಮೆಯನ್ನು ಸಹ ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 3:22 pm, Sat, 9 March 24

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು