ಪೋರ್ಷೆ ಕಾರು ಅಪಘಾತ ಪ್ರಕರಣ: ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ ಆರೋಪಿಗೆ ಪೊಲೀಸ್ ಕಸ್ಟಡಿಯಲ್ಲಿ ಪಿಜ್ಜಾ ನೀಡಲಾಗಿತ್ತು; ಕಾಂಗ್ರೆಸ್ ಆರೋಪ

ಪೊಲೀಸರ ಮೇಲೆ ಏನಾದರೂ ರಾಜಕೀಯ ಒತ್ತಡವಿದೆಯೇ? ಇದಕ್ಕೆ ಜನರಿಂದ ಉತ್ತರ ಸಿಗಬೇಕು. ಈ ಪ್ರಕರಣವನ್ನು ನಿಭಾಯಿಸಿದ ಎಲ್ಲ ಪೊಲೀಸರನ್ನು ಅಮಾನತುಗೊಳಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ಇತರ ನಾಗರಿಕರು ಅದೇ ರೀತಿಯ ಉಪಚಾರ ಪಡೆಯುತ್ತಾರೆಯೇ? ಎಂದು ಲೋಂಧೆ ಪ್ರಶ್ನಿಸಿದ್ದಾರೆ.

ಪೋರ್ಷೆ ಕಾರು ಅಪಘಾತ ಪ್ರಕರಣ: ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ ಆರೋಪಿಗೆ ಪೊಲೀಸ್ ಕಸ್ಟಡಿಯಲ್ಲಿ ಪಿಜ್ಜಾ ನೀಡಲಾಗಿತ್ತು; ಕಾಂಗ್ರೆಸ್ ಆರೋಪ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ

Updated on: May 21, 2024 | 8:56 PM

ಪುಣೆ ಮೇ 21: ಪುಣೆಯಲ್ಲಿ ಪೋರ್ಷೆ ಕಾರು (Porsche accident) ಡಿಕ್ಕಿ ಹೊಡೆದು ಇಬ್ಬರು ಮೋಟಾರ್‌ಬೈಕ್ ಸವಾರರ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಯಾಗಿರುವ ಅಪ್ರಾಪ್ತನಿಗೆ ಉತ್ತಮವಾದ ರೀತಿಯಲ್ಲಿ ಉಪಚರಿಸಿದ್ದರು ಎಂದು ಮಹಾರಾಷ್ಟ್ರದ ಕಾಂಗ್ರೆಸ್ (Congress) ಪಕ್ಷ ಹೇಳಿಕೊಂಡಿದೆ. ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿಯ (MPCC) ಮುಖ್ಯ ವಕ್ತಾರ ಅತುಲ್ ಲೊಂಧೆ, ಆರೋಪಿಗೆ ಬಂಧನದಲ್ಲಿದ್ದಾಗ ಆತನಿಗೆ “ಪಿಜ್ಜಾ ಮತ್ತು ಬರ್ಗರ್” ನೀಡಲಾಯಿತು ಎಂದು ಆರೋಪಿಸಿ, ಭಾಗಿಯಾಗಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ ಎಂದು ನ್ಯೂಸ್ 18 ವರದಿ ಮಾಡಿದೆ. ಏತನ್ಮಧ್ಯೆ, ಪೊಲೀಸರು ಪ್ರಕರಣದ ನಿರ್ವಹಣೆಯ ಮೇಲೆ ರಾಜಕೀಯ ಒತ್ತಡ ಪ್ರಭಾವ ಇದೆಯೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಪೊಲೀಸರ ಮೇಲೆ ಏನಾದರೂ ರಾಜಕೀಯ ಒತ್ತಡವಿದೆಯೇ? ಇದಕ್ಕೆ ಜನರಿಂದ ಉತ್ತರ ಸಿಗಬೇಕು. ಈ ಪ್ರಕರಣವನ್ನು ನಿಭಾಯಿಸಿದ ಎಲ್ಲ ಪೊಲೀಸರನ್ನು ಅಮಾನತುಗೊಳಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ಇತರ ನಾಗರಿಕರು ಅದೇ ರೀತಿಯ ಉಪಚಾರ ಪಡೆಯುತ್ತಾರೆಯೇ? ಎಂದು ಲೋಂಧೆ ಹೇಳಿರುವುದಾಗಿ ನ್ಯೂಸ್ 18 ವರದಿ ಮಾಡಿದೆ.

ಪೊಲೀಸರು ಮೊದಲಿನಿಂದಲೂ ಕಾನೂನು ಪ್ರಕಾರವೇ ನಡೆದುಕೊಂಡಿದ್ದು, ಯಾವುದೇ ಬಾಹ್ಯ ಒತ್ತಡವನ್ನು ನಿರಾಕರಿಸಿದ್ದಾರೆ ಎಂದು ಪುಣೆ ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಪೊಲೀಸರು ತೆಗೆದುಕೊಳ್ಳುವ ಪ್ರತಿಯೊಂದು ಕಾನೂನು ಕ್ರಮದ ಬಗ್ಗೆ ಚರ್ಚಿಸಲು ನಾವು ಸಿದ್ಧರಿದ್ದೇವೆ ಎಂದು ನಾನು ನಿನ್ನೆ ಹೇಳಿದ್ದೇನೆ ನಾವು ಸಾಧ್ಯವಾದಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಕಾನೂನು ತಜ್ಞರು ಹೆಚ್ಚು ಕಠಿಣ ನಿಬಂಧನೆಗಳು ಲಭ್ಯವಿವೆ ಎಂದು ಭಾವಿಸಿದರೆ, ಅವರು ಸಾರ್ವಜನಿಕ ಚರ್ಚೆಗೆ ಬರಬೇಕು ಎಂದು ಅವರು ಹೇಳಿದರು.

ಅಪ್ರಾಪ್ತನಿಗೆ ನೇರವಾಗಿ ಅಥವಾ ಪರೋಕ್ಷವಾಗಿ ಸಹಾಯ ಮಾಡುವುದು ಕಂಡುಬಂದಲ್ಲಿ ಪೊಲೀಸ್ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕುಮಾರ್ ಹೇಳಿದರು.

ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304 (ಅಪರಾಧೀಯ ನರಹತ್ಯೆ ಕೊಲೆಗೆ ಸಮನಾಗಿರುವುದಿಲ್ಲ) ಮತ್ತು ಬಾಲಾಪರಾಧಿಯನ್ನು ವಯಸ್ಕನಂತೆ ವಿಚಾರಣೆಗೆ ಒಳಪಡಿಸಲು ಪ್ರಯತ್ನಿಸಿದ್ದಾರೆ ಎಂದು ಹಿರಿಯ ಅಧಿಕಾರಿ ಹೇಳಿದ್ದಾರೆ. ಆದಾಗ್ಯೂ ಆರಂಭಿಕ ಅರ್ಜಿಯನ್ನು ನ್ಯಾಯಾಲಯವು ತಿರಸ್ಕರಿಸಿತು.

ಭಾನುವಾರ ಮುಂಜಾನೆ ಈ ಘಟನೆ ಸಂಭವಿಸಿದ್ದು, ಅಪ್ರಾಪ್ತ ಪೋರ್ಷೆ ಕಾರು ಚಲಾಯಿಸುತ್ತಿದ್ದಾಗ ಮೋಟಾರುಬೈಕಿಗೆ ಡಿಕ್ಕಿ ಹೊಡೆದು 24 ವರ್ಷದ ಐಟಿ ವೃತ್ತಿಪರರಾದ ಅನಿಸ್ ಅವಧಿಯಾ ಮತ್ತು ಅಶ್ವಿನಿ ಕೋಸ್ಟಾ ಸಾವಿಗೀಡಾಗಿದ್ದಾರೆ. ಅಪ್ರಾಪ್ತನನ್ನು ಬಾಲಾಪರಾಧ ನ್ಯಾಯ ಮಂಡಳಿಯಿಂದ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಬಾಲ ನ್ಯಾಯ ಮಂಡಳಿಯ ಜಾಮೀನು ಆದೇಶದ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದರು. ಮಂಡಳಿಯು ಅಪ್ರಾಪ್ತನಿಗೆ ಪ್ರಬಂಧ ಬರೆಯುವಂತಹ ಷರತ್ತುಗಳನ್ನು ವಿಧಿಸಿತ್ತು.

ಇದನ್ನೂ ಓದಿ: Lok Sabha Polls: ಜನ 140 ಸೀಟುಗಳಿಗೂ ಬಿಜೆಪಿ ಪರದಾಡುವಂತೆ ಮಾಡುತ್ತಾರೆ; ಅಖಿಲೇಶ್ ಯಾದವ್ ವಿಶ್ವಾಸ

ಪುಣೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಬಾಲಾಪರಾಧ ನ್ಯಾಯ ಮಂಡಳಿಯ ಆದೇಶವು ಹಿಂದಿನ ಪ್ರಕರಣದ ಕಾನೂನುಗಳನ್ನು ಪೊಲೀಸರು ಉಲ್ಲೇಖಿಸಿದ್ದರೂ ಆಘಾತಕಾರಿಯಾಗಿದೆ. “ಬಾಲಾಪರಾಧ ನ್ಯಾಯ ಮಂಡಳಿಯು ಆದೇಶವನ್ನು ಪರಿಶೀಲಿಸದಿದ್ದರೆ, ಪೊಲೀಸರು ಉನ್ನತ ನ್ಯಾಯಾಲಯವನ್ನು ಸಂಪರ್ಕಿಸುತ್ತಾರೆ” ಎಂದು ಫಡ್ನವಿಸ್ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Follow Us