AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋರ್ಷೆ ಕಾರು ಅಪಘಾತ, ಆರೋಪಿ ವೇದಾಂತ್ ತಂದೆ, ಅಜ್ಜನ ವಿರುದ್ಧ ಆತ್ಮಹತ್ಯೆ ಪ್ರಚೋದನೆ ಪ್ರಕರಣ ದಾಖಲು

ಪುಣೆ ಪೋರ್ಷೆ ಕಾರು ಅಪಘಾತದ ಆರೋಪಿ ವೇದಾಂತ್ ತಂದೆ ವಿಶಾಲ್ ಅಗರ್ವಾಲ್​ ಹಾಗೂ ಅಜ್ಜನ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಾಗಿದೆ.

ಪೋರ್ಷೆ ಕಾರು ಅಪಘಾತ, ಆರೋಪಿ ವೇದಾಂತ್ ತಂದೆ, ಅಜ್ಜನ ವಿರುದ್ಧ ಆತ್ಮಹತ್ಯೆ ಪ್ರಚೋದನೆ ಪ್ರಕರಣ ದಾಖಲು
ಕಾರು
ನಯನಾ ರಾಜೀವ್
|

Updated on: Jun 07, 2024 | 11:37 AM

Share

ಪುಣೆಯಲ್ಲಿ ನಡೆದ ಪೋರ್ಷೆ ಕಾರು ಅಪಘಾತ(Porsche Car Accident)ದ ಆರೋಪಿ ವೇದಾಂತ್​ ಅಗರ್ವಾಲ್​ ತಂದೆ ಹಾಗೂ ಅಜ್ಜನ ವಿರುದ್ಧ ಪೊಲೀಸರು ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣವನ್ನು ದಾಖಲಿಸಿದ್ದಾರೆ. ನಗರದಲ್ಲಿ ಉದ್ಯಮಿಯೊಬ್ಬರ ಮಗನ ಆತ್ಮಹತ್ಯೆಗೆ ಪ್ರಚೋದನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲಿಸಿದ್ದಾರೆ.

ಮೇ 19ರಂದು ಪುಣೆಯಲ್ಲಿ 17 ವರ್ಷದ ವೇದಾಂತ್​ ಅಗರ್ವಾಲ್​ ತನ್ನ ಐಷಾರಾಮಿ ಪೋರ್ಷೆ ಕಾರು ಅಪಘಾತ ಮಾಡಿ ಇಬ್ಬರ ಸಾವಿಗೆ ಕಾರಣನಾಗಿದ್ದ. ಚಾಲಕನಿಗೆ ತಾನೇ ಕಾರು ಚಲಾಯಿಸುತ್ತಿದ್ದೆ ಎಂದು ಒಪ್ಪಿಕೊಳ್ಳುವಂತೆ ಎಚ್ಚರಿಕೆ ನೀಡಿದ ಆರೋಪದ ಮೇಲೆ ವೇದಾಂತ್ ಅವರ ಅಜ್ಜನನ್ನು ಬಂಧಿಸಲಾಗಿದೆ.

ಹಾಗೆಯೇ ವೇದಾಂತ್ ರಕ್ತದ ಮಾದರಿಯನ್ನು ಬದಲಿಸಿದ್ದಕ್ಕೆ ವೇದಾಂತ್ ತಂದೆ ವಿಶಾಲ್ ಅಗರ್ವಾಲ್ ಹಾಗೂ ತಾಯಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಪಘಾತ ನಡೆದ ಬಳಿಕ ಆರೋಪಿ ವೇದಾಂತ್​ನನ್ನು ಪೊಲೀಸರು ಬಂಧಿಸಿದ್ದರು, ಬಳಿಕ ಬಾಲಾಪರಾಧಿ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ವಿಶಾಲ್​ ಅಗರ್ವಾಲ್​ರನ್ನು ಬಂಧಿಸಿತ್ತು.

ಇದಾದ ಬಳಿಕ ವಿಶಾಲ್ ಅಗರ್ವಾಲ್​ ತಮ್ಮ ಚಾಲಕನನ್ನು ಈ ಪ್ರಕರಣದಲ್ಲಿ ಸಿಲುಕಿಸುವ ಪ್ರಯತ್ನ ಮಾಡಿದ್ದರು. ಆದರೆ ಬಳಿಕ ಚಾಲಕ ವಿಶಾಲ್ ಅವರ ಹೇಳಿಕೆ ಮೇರೆಗೆ ನಾನು ಪ್ಯಾಸೆಂಜರ್​ ಸೀಟ್​ನಲ್ಲಿ ಕುಳಿತಿದ್ದೆ ವೇದಾಂತ್​ ಕಾರು ಚಲಾಯಿಸುತ್ತಿದ್ದ ಎಂದು ಹೇಳಿಕೆ ನೀಡಿದ್ದರು. ಆತನ ಸ್ನೇಹಿತ ಕೂಡ ವೇದಾಂತ್ ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿದ್ದು ಹೌದು ಎಂದು ಒಪ್ಪಿಕೊಂಡಿದ್ದಾನೆ.

ಮತ್ತಷ್ಟು ಓದಿ: Pune Porsche Crash: ಪೋರ್ಷೆ ಅಪಘಾತ ಪ್ರಕರಣ; ಅಪ್ರಾಪ್ತನ ಬದಲು ತಾಯಿಯ ರಕ್ತದ ಮಾದರಿ ಬದಲಿಸಿದ್ದು ಸಾಬೀತು

ಇದಾದ ಬಳಿಕ ಮಗ ಮದ್ಯ ಸೇವಿಸಿರಲಿಲ್ಲ ಎಂದು ಮಾಡಲು ವೇದಾಂತ್ ರಕ್ತದ ಮಾದರಿ ಜಾಗದಲ್ಲಿ ಬೇರೆ ಮಾದರಿಯನ್ನು ಇರಿಸಲಾಗಿತ್ತು. ಅದರ ಹಿಂದೆ ಆತನ ತಾಯಿಯ ಕೈವಾಡವಿರುವುದು ಸ್ಪಷ್ಟವಾಗಿತ್ತು. ಇದೀಗ ಈ ಪ್ರಕರಣದಲ್ಲಿ ಇಡೀ ಕುಟುಂಬವೇ ಜೈಲುಪಾಲಾದಂತಾಗಿದೆ.

ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿರುವ ಕಾಳೆ ಅವರಿಂದ  ಡಿ.ಎಸ್.ಕಟೂರ್ ಎಂಬ ವ್ಯಕ್ತಿಯ ಮಗ ಶಶಿಕಾಂತ್ ಕಾಟೂರ್ ಎಂಬಾತ ಕಟ್ಟಡ ಕಾಮಗಾರಿಗಾಗಿ ಸಾಲ ಪಡೆದಿದ್ದರು. ಸಕಾಲಕ್ಕೆ ಸಾಲ ಪಾವತಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಕಾಳೆ ಅಸಲು ಮೊತ್ತಕ್ಕೆ ಚಕ್ರಬಡ್ಡಿ ಸೇರಿಸಿ ಶಶಿಕಾಂತ್ ಕಾಟೂರೆಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ನಿರಂತರ ಕಿರುಕುಳದಿಂದ ಬೇಸತ್ತು ಶಶಿಕಾಂತ್ ಕಾಟೂರೆ ಈ  ಜನವರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಈ ಪ್ರಕರಣದಲ್ಲಿ ವೇದಾಂತ್​ ತಂದೆ ಹಾಗೂ ಅಜ್ಜ ಭಾಗಿಯಾಗಿದ್ದರು ಎಂದು ಆರೋಪಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ