AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Omicron Variant: ಮುಂದೆ ಯಾವುದೇ ಪರಿಸ್ಥಿತಿ ಬರಬಹುದು, ಎದುರಿಸಲು ಸಿದ್ಧರಾಗಿರಿ: ಏಮ್ಸ್​ ನಿರ್ದೇಶಕರಿಂದ ಎಚ್ಚರಿಕೆ

ಕೊರೊನಾದ ಹೊಸ ತಳಿ ಒಮಿಕ್ರಾನ್​ ಮೊದಲು ಪತ್ತೆಯಾಗಿದ್ದು ದಕ್ಷಿಣ ಆಫ್ರಿಕಾದಲ್ಲಿ ನವೆಂಬರ್​ 25ರಂದು. ನಂತರ ಒಂದೊಂದೇ ದೇಶಗಳಿಗೆ ವ್ಯಾಪಿಸುತ್ತಿದೆ. ಇದೀಗ ಭಾರತಕ್ಕೂ ಕಾಲಿಟ್ಟಿದ್ದು ಮೂರನೇ ಅಲೆಯ ಸಾಧ್ಯತೆಯನ್ನು ಸೃಷ್ಟಿಸಿದೆ.

Omicron Variant: ಮುಂದೆ ಯಾವುದೇ ಪರಿಸ್ಥಿತಿ ಬರಬಹುದು, ಎದುರಿಸಲು ಸಿದ್ಧರಾಗಿರಿ: ಏಮ್ಸ್​ ನಿರ್ದೇಶಕರಿಂದ ಎಚ್ಚರಿಕೆ
ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on: Dec 20, 2021 | 9:00 AM

Share

ದೆಹಲಿ: ದೇಶದಲ್ಲಿ ಒಮಿಕ್ರಾನ್​ (Omicron) ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಕೊವಿಡ್​ 19 ಮೂರನೇ ಅಲೆಯ ಆತಂಕ ಎದುರಾಗಿದೆ. ಈ ಮಧ್ಯೆ ಏಮ್ಸ್​ ನಿರ್ದೇಶಕ ಡಾ. ರಣದೀಪ್​ ಗುಲೇರಿಯಾ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಹೀಗೆ ಮುಂದುವರಿದೆ ಶೀಘ್ರದಲ್ಲಿಯೇ ಯಾವುದೇ ಪರಿಸ್ಥಿತಿಯಾದರೂ ಎದುರಾಗಬಹುದು. ಹಾಗಾಗಿ ಆಡಳಿತಗಳು ಎಲ್ಲದಕ್ಕೂ ಸಿದ್ಧರಾಗಬೇಕು ಎಂದಿದ್ದಾರೆ. ಬ್ರಿಟನ್​​ನಲ್ಲಿ ಈಗ ಆಗುತ್ತಿರುವಂತೆ ಭಾರತದಲ್ಲೂ ಅಂಥ ಕೆಟ್ಟ ಪರಿಸ್ಥಿತಿ ಬರುವುದು ಬೇಡ ಎಂಬ ಆಶಯ ವ್ಯಕ್ತಪಡಿಸೋಣ. ಆದರೆ ಏನೇ ಬಂದರೂ ಎದುರಿಸಲು ಈಗಿನಿಂದಲೇ ನಾವು ಸಿದ್ಧರಾಗಬೇಕು. ಪ್ರಪಂಚದ ಯಾವುದೇ ದೇಶಗಳಲ್ಲಿ ವೈರಸ್​ ಕೇಸ್​ಗಳಲ್ಲಿ ಏರಿಕೆ ಕಂಡುಬಂದಾಗ ನಾವೂ ಅದನ್ನು ಮೇಲ್ವಿಚಾರಣೆ ಮಾಡಬೇಕಾಗುತ್ತದೆ. ಅಲ್ಲಿನ ಪರಿಸ್ಥಿತಿಗೆ ಸಂಬಂಧಿಸಿದಂತೆ ಹೆಚ್ಚಿನ ಡೇಟಾ ಸಂಗ್ರಹ ಮಾಡಬೇಕು ಎಂದೂ ಅವರು  ಹೇಳಿದ್ದಾಗಿ ಎಎನ್​ಐ ವರದಿ ಮಾಡಿದೆ.

ಇನ್ನು ದೇಶದಲ್ಲಿ ಒಟ್ಟು ಒಮಿಕ್ರಾನ್ ಸೋಂಕಿತರ ಸಂಖ್ಯೆ 153ಕ್ಕೆ ಏರಿಕೆಯಾಗಿದ್ದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ನಿನ್ನೆ ಮಹಾರಾಷ್ಟ್ರದಲ್ಲಿ 6 ಮತ್ತು ಗುಜರಾತ್​​ನಲ್ಲಿ ನಾಲ್ಕು ಒಮಿಕ್ರಾನ್​ ಸೋಂಕಿತರು ಪತ್ತೆಯಾಗಿದ್ದಾರೆ.  ಈಗಾಗಲೇ ಭಾರತದಲ್ಲಿ 11 ರಾಜ್ಯಗಳಿಗೆ ಒಮಿಕ್ರಾನ್ ವ್ಯಾಪಿಸಿದೆ. ಅದರಲ್ಲೂ ಮಹಾರಾಷ್ಟ್ರದಲ್ಲಿ ಅತ್ಯಂತ ಹೆಚ್ಚು ಎಂದರೆ ಒಟ್ಟು 54 ಕೇಸ್​ಗಳಿದ್ದು, ಅದು ಬಿಟ್ಟರೆ ರಾಷ್ಟ್ರರಾಜಧಾನಿ ದೆಹಲಿಯಲ್ಲಿ 22 ಒಮಿಕ್ರಾನ್​ ಪ್ರಕರಣಗಳು ದಾಖಲಾಗಿವೆ.  ಅದರ ಹೊರತಾಗಿ ರಾಜಸ್ಥಾನದಲ್ಲಿ 17, ಕರ್ನಾಟಕ 14, ತೆಲಂಗಾಣ 20, ಗುಜರಾತ್​ 11, ಕೇರಳ 11, ಆಂಧ್ರಪ್ರದೇಶ 1, ಚಂಡಿಗಢ್, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ ಒಂದು ಪ್ರಕರಣಗಳು ಇವೆ.

ಕೊರೊನಾದ ಹೊಸ ತಳಿ ಒಮಿಕ್ರಾನ್​ ಮೊದಲು ಪತ್ತೆಯಾಗಿದ್ದು ದಕ್ಷಿಣ ಆಫ್ರಿಕಾದಲ್ಲಿ ನವೆಂಬರ್​ 25ರಂದು. ನಂತರ ಒಂದೊಂದೇ ದೇಶಗಳಿಗೆ ವ್ಯಾಪಿಸುತ್ತಿದೆ. ಇದೀಗ ಭಾರತಕ್ಕೂ ಕಾಲಿಟ್ಟಿದ್ದು ಮೂರನೇ ಅಲೆಯ ಸಾಧ್ಯತೆಯನ್ನು ಸೃಷ್ಟಿಸಿದೆ. ಕೊರೊನಾದ ಈ ಹೊಸ ತಳಿ, ಈ ಹಿಂದಿನ ಉಳಿದ ತಳಿಗಳಿಗಿಂತ ವೇಗವಾಗಿ ಹಬ್ಬುತ್ತಿರುವುದು ಆರೋಗ್ಯ ತಜ್ಞರಿಗೆ, ಆಡಳಿತಗಳಿಗೆ ದೊಡ್ಡ ತಲೆನೋವು ಸೃಷ್ಟಿಸಿದೆ. ಅದರಲ್ಲೂ ಲಸಿಕೆಯ ದಕ್ಷತೆಯನ್ನೂ ಇದು ಕುಗ್ಗಿಸುತ್ತದೆ ಎಂದು ಹೇಳಲಾಗಿದ್ದು, ಮೂರನೇ ಡೋಸ್ ಕೊಡುವ ಬಗ್ಗೆಯೂ ಚಿಂತನೆ ನಡೆಯುತ್ತಿದೆ.

ಇದನ್ನೂ ಓದಿ: ದೆಹಲಿ ರೋಹಿಣಿ ಕೋರ್ಟ್ ಸ್ಫೋಟ ಪ್ರಕರಣ; ಹ್ಯಾಂಡ್​ವಾಶ್​ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಜೈಲಲ್ಲಿರುವ ಆರೋಪಿ ವಿಜ್ಞಾನಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ