AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Omicron Variant: ಮುಂದೆ ಯಾವುದೇ ಪರಿಸ್ಥಿತಿ ಬರಬಹುದು, ಎದುರಿಸಲು ಸಿದ್ಧರಾಗಿರಿ: ಏಮ್ಸ್​ ನಿರ್ದೇಶಕರಿಂದ ಎಚ್ಚರಿಕೆ

ಕೊರೊನಾದ ಹೊಸ ತಳಿ ಒಮಿಕ್ರಾನ್​ ಮೊದಲು ಪತ್ತೆಯಾಗಿದ್ದು ದಕ್ಷಿಣ ಆಫ್ರಿಕಾದಲ್ಲಿ ನವೆಂಬರ್​ 25ರಂದು. ನಂತರ ಒಂದೊಂದೇ ದೇಶಗಳಿಗೆ ವ್ಯಾಪಿಸುತ್ತಿದೆ. ಇದೀಗ ಭಾರತಕ್ಕೂ ಕಾಲಿಟ್ಟಿದ್ದು ಮೂರನೇ ಅಲೆಯ ಸಾಧ್ಯತೆಯನ್ನು ಸೃಷ್ಟಿಸಿದೆ.

Omicron Variant: ಮುಂದೆ ಯಾವುದೇ ಪರಿಸ್ಥಿತಿ ಬರಬಹುದು, ಎದುರಿಸಲು ಸಿದ್ಧರಾಗಿರಿ: ಏಮ್ಸ್​ ನಿರ್ದೇಶಕರಿಂದ ಎಚ್ಚರಿಕೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Dec 20, 2021 | 9:00 AM

Share

ದೆಹಲಿ: ದೇಶದಲ್ಲಿ ಒಮಿಕ್ರಾನ್​ (Omicron) ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಕೊವಿಡ್​ 19 ಮೂರನೇ ಅಲೆಯ ಆತಂಕ ಎದುರಾಗಿದೆ. ಈ ಮಧ್ಯೆ ಏಮ್ಸ್​ ನಿರ್ದೇಶಕ ಡಾ. ರಣದೀಪ್​ ಗುಲೇರಿಯಾ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಹೀಗೆ ಮುಂದುವರಿದೆ ಶೀಘ್ರದಲ್ಲಿಯೇ ಯಾವುದೇ ಪರಿಸ್ಥಿತಿಯಾದರೂ ಎದುರಾಗಬಹುದು. ಹಾಗಾಗಿ ಆಡಳಿತಗಳು ಎಲ್ಲದಕ್ಕೂ ಸಿದ್ಧರಾಗಬೇಕು ಎಂದಿದ್ದಾರೆ. ಬ್ರಿಟನ್​​ನಲ್ಲಿ ಈಗ ಆಗುತ್ತಿರುವಂತೆ ಭಾರತದಲ್ಲೂ ಅಂಥ ಕೆಟ್ಟ ಪರಿಸ್ಥಿತಿ ಬರುವುದು ಬೇಡ ಎಂಬ ಆಶಯ ವ್ಯಕ್ತಪಡಿಸೋಣ. ಆದರೆ ಏನೇ ಬಂದರೂ ಎದುರಿಸಲು ಈಗಿನಿಂದಲೇ ನಾವು ಸಿದ್ಧರಾಗಬೇಕು. ಪ್ರಪಂಚದ ಯಾವುದೇ ದೇಶಗಳಲ್ಲಿ ವೈರಸ್​ ಕೇಸ್​ಗಳಲ್ಲಿ ಏರಿಕೆ ಕಂಡುಬಂದಾಗ ನಾವೂ ಅದನ್ನು ಮೇಲ್ವಿಚಾರಣೆ ಮಾಡಬೇಕಾಗುತ್ತದೆ. ಅಲ್ಲಿನ ಪರಿಸ್ಥಿತಿಗೆ ಸಂಬಂಧಿಸಿದಂತೆ ಹೆಚ್ಚಿನ ಡೇಟಾ ಸಂಗ್ರಹ ಮಾಡಬೇಕು ಎಂದೂ ಅವರು  ಹೇಳಿದ್ದಾಗಿ ಎಎನ್​ಐ ವರದಿ ಮಾಡಿದೆ.

ಇನ್ನು ದೇಶದಲ್ಲಿ ಒಟ್ಟು ಒಮಿಕ್ರಾನ್ ಸೋಂಕಿತರ ಸಂಖ್ಯೆ 153ಕ್ಕೆ ಏರಿಕೆಯಾಗಿದ್ದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ನಿನ್ನೆ ಮಹಾರಾಷ್ಟ್ರದಲ್ಲಿ 6 ಮತ್ತು ಗುಜರಾತ್​​ನಲ್ಲಿ ನಾಲ್ಕು ಒಮಿಕ್ರಾನ್​ ಸೋಂಕಿತರು ಪತ್ತೆಯಾಗಿದ್ದಾರೆ.  ಈಗಾಗಲೇ ಭಾರತದಲ್ಲಿ 11 ರಾಜ್ಯಗಳಿಗೆ ಒಮಿಕ್ರಾನ್ ವ್ಯಾಪಿಸಿದೆ. ಅದರಲ್ಲೂ ಮಹಾರಾಷ್ಟ್ರದಲ್ಲಿ ಅತ್ಯಂತ ಹೆಚ್ಚು ಎಂದರೆ ಒಟ್ಟು 54 ಕೇಸ್​ಗಳಿದ್ದು, ಅದು ಬಿಟ್ಟರೆ ರಾಷ್ಟ್ರರಾಜಧಾನಿ ದೆಹಲಿಯಲ್ಲಿ 22 ಒಮಿಕ್ರಾನ್​ ಪ್ರಕರಣಗಳು ದಾಖಲಾಗಿವೆ.  ಅದರ ಹೊರತಾಗಿ ರಾಜಸ್ಥಾನದಲ್ಲಿ 17, ಕರ್ನಾಟಕ 14, ತೆಲಂಗಾಣ 20, ಗುಜರಾತ್​ 11, ಕೇರಳ 11, ಆಂಧ್ರಪ್ರದೇಶ 1, ಚಂಡಿಗಢ್, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ ಒಂದು ಪ್ರಕರಣಗಳು ಇವೆ.

ಕೊರೊನಾದ ಹೊಸ ತಳಿ ಒಮಿಕ್ರಾನ್​ ಮೊದಲು ಪತ್ತೆಯಾಗಿದ್ದು ದಕ್ಷಿಣ ಆಫ್ರಿಕಾದಲ್ಲಿ ನವೆಂಬರ್​ 25ರಂದು. ನಂತರ ಒಂದೊಂದೇ ದೇಶಗಳಿಗೆ ವ್ಯಾಪಿಸುತ್ತಿದೆ. ಇದೀಗ ಭಾರತಕ್ಕೂ ಕಾಲಿಟ್ಟಿದ್ದು ಮೂರನೇ ಅಲೆಯ ಸಾಧ್ಯತೆಯನ್ನು ಸೃಷ್ಟಿಸಿದೆ. ಕೊರೊನಾದ ಈ ಹೊಸ ತಳಿ, ಈ ಹಿಂದಿನ ಉಳಿದ ತಳಿಗಳಿಗಿಂತ ವೇಗವಾಗಿ ಹಬ್ಬುತ್ತಿರುವುದು ಆರೋಗ್ಯ ತಜ್ಞರಿಗೆ, ಆಡಳಿತಗಳಿಗೆ ದೊಡ್ಡ ತಲೆನೋವು ಸೃಷ್ಟಿಸಿದೆ. ಅದರಲ್ಲೂ ಲಸಿಕೆಯ ದಕ್ಷತೆಯನ್ನೂ ಇದು ಕುಗ್ಗಿಸುತ್ತದೆ ಎಂದು ಹೇಳಲಾಗಿದ್ದು, ಮೂರನೇ ಡೋಸ್ ಕೊಡುವ ಬಗ್ಗೆಯೂ ಚಿಂತನೆ ನಡೆಯುತ್ತಿದೆ.

ಇದನ್ನೂ ಓದಿ: ದೆಹಲಿ ರೋಹಿಣಿ ಕೋರ್ಟ್ ಸ್ಫೋಟ ಪ್ರಕರಣ; ಹ್ಯಾಂಡ್​ವಾಶ್​ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಜೈಲಲ್ಲಿರುವ ಆರೋಪಿ ವಿಜ್ಞಾನಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!