AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Omicron Variant: ಮುಂದೆ ಯಾವುದೇ ಪರಿಸ್ಥಿತಿ ಬರಬಹುದು, ಎದುರಿಸಲು ಸಿದ್ಧರಾಗಿರಿ: ಏಮ್ಸ್​ ನಿರ್ದೇಶಕರಿಂದ ಎಚ್ಚರಿಕೆ

ಕೊರೊನಾದ ಹೊಸ ತಳಿ ಒಮಿಕ್ರಾನ್​ ಮೊದಲು ಪತ್ತೆಯಾಗಿದ್ದು ದಕ್ಷಿಣ ಆಫ್ರಿಕಾದಲ್ಲಿ ನವೆಂಬರ್​ 25ರಂದು. ನಂತರ ಒಂದೊಂದೇ ದೇಶಗಳಿಗೆ ವ್ಯಾಪಿಸುತ್ತಿದೆ. ಇದೀಗ ಭಾರತಕ್ಕೂ ಕಾಲಿಟ್ಟಿದ್ದು ಮೂರನೇ ಅಲೆಯ ಸಾಧ್ಯತೆಯನ್ನು ಸೃಷ್ಟಿಸಿದೆ.

Omicron Variant: ಮುಂದೆ ಯಾವುದೇ ಪರಿಸ್ಥಿತಿ ಬರಬಹುದು, ಎದುರಿಸಲು ಸಿದ್ಧರಾಗಿರಿ: ಏಮ್ಸ್​ ನಿರ್ದೇಶಕರಿಂದ ಎಚ್ಚರಿಕೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Dec 20, 2021 | 9:00 AM

Share

ದೆಹಲಿ: ದೇಶದಲ್ಲಿ ಒಮಿಕ್ರಾನ್​ (Omicron) ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಕೊವಿಡ್​ 19 ಮೂರನೇ ಅಲೆಯ ಆತಂಕ ಎದುರಾಗಿದೆ. ಈ ಮಧ್ಯೆ ಏಮ್ಸ್​ ನಿರ್ದೇಶಕ ಡಾ. ರಣದೀಪ್​ ಗುಲೇರಿಯಾ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಹೀಗೆ ಮುಂದುವರಿದೆ ಶೀಘ್ರದಲ್ಲಿಯೇ ಯಾವುದೇ ಪರಿಸ್ಥಿತಿಯಾದರೂ ಎದುರಾಗಬಹುದು. ಹಾಗಾಗಿ ಆಡಳಿತಗಳು ಎಲ್ಲದಕ್ಕೂ ಸಿದ್ಧರಾಗಬೇಕು ಎಂದಿದ್ದಾರೆ. ಬ್ರಿಟನ್​​ನಲ್ಲಿ ಈಗ ಆಗುತ್ತಿರುವಂತೆ ಭಾರತದಲ್ಲೂ ಅಂಥ ಕೆಟ್ಟ ಪರಿಸ್ಥಿತಿ ಬರುವುದು ಬೇಡ ಎಂಬ ಆಶಯ ವ್ಯಕ್ತಪಡಿಸೋಣ. ಆದರೆ ಏನೇ ಬಂದರೂ ಎದುರಿಸಲು ಈಗಿನಿಂದಲೇ ನಾವು ಸಿದ್ಧರಾಗಬೇಕು. ಪ್ರಪಂಚದ ಯಾವುದೇ ದೇಶಗಳಲ್ಲಿ ವೈರಸ್​ ಕೇಸ್​ಗಳಲ್ಲಿ ಏರಿಕೆ ಕಂಡುಬಂದಾಗ ನಾವೂ ಅದನ್ನು ಮೇಲ್ವಿಚಾರಣೆ ಮಾಡಬೇಕಾಗುತ್ತದೆ. ಅಲ್ಲಿನ ಪರಿಸ್ಥಿತಿಗೆ ಸಂಬಂಧಿಸಿದಂತೆ ಹೆಚ್ಚಿನ ಡೇಟಾ ಸಂಗ್ರಹ ಮಾಡಬೇಕು ಎಂದೂ ಅವರು  ಹೇಳಿದ್ದಾಗಿ ಎಎನ್​ಐ ವರದಿ ಮಾಡಿದೆ.

ಇನ್ನು ದೇಶದಲ್ಲಿ ಒಟ್ಟು ಒಮಿಕ್ರಾನ್ ಸೋಂಕಿತರ ಸಂಖ್ಯೆ 153ಕ್ಕೆ ಏರಿಕೆಯಾಗಿದ್ದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ನಿನ್ನೆ ಮಹಾರಾಷ್ಟ್ರದಲ್ಲಿ 6 ಮತ್ತು ಗುಜರಾತ್​​ನಲ್ಲಿ ನಾಲ್ಕು ಒಮಿಕ್ರಾನ್​ ಸೋಂಕಿತರು ಪತ್ತೆಯಾಗಿದ್ದಾರೆ.  ಈಗಾಗಲೇ ಭಾರತದಲ್ಲಿ 11 ರಾಜ್ಯಗಳಿಗೆ ಒಮಿಕ್ರಾನ್ ವ್ಯಾಪಿಸಿದೆ. ಅದರಲ್ಲೂ ಮಹಾರಾಷ್ಟ್ರದಲ್ಲಿ ಅತ್ಯಂತ ಹೆಚ್ಚು ಎಂದರೆ ಒಟ್ಟು 54 ಕೇಸ್​ಗಳಿದ್ದು, ಅದು ಬಿಟ್ಟರೆ ರಾಷ್ಟ್ರರಾಜಧಾನಿ ದೆಹಲಿಯಲ್ಲಿ 22 ಒಮಿಕ್ರಾನ್​ ಪ್ರಕರಣಗಳು ದಾಖಲಾಗಿವೆ.  ಅದರ ಹೊರತಾಗಿ ರಾಜಸ್ಥಾನದಲ್ಲಿ 17, ಕರ್ನಾಟಕ 14, ತೆಲಂಗಾಣ 20, ಗುಜರಾತ್​ 11, ಕೇರಳ 11, ಆಂಧ್ರಪ್ರದೇಶ 1, ಚಂಡಿಗಢ್, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ ಒಂದು ಪ್ರಕರಣಗಳು ಇವೆ.

ಕೊರೊನಾದ ಹೊಸ ತಳಿ ಒಮಿಕ್ರಾನ್​ ಮೊದಲು ಪತ್ತೆಯಾಗಿದ್ದು ದಕ್ಷಿಣ ಆಫ್ರಿಕಾದಲ್ಲಿ ನವೆಂಬರ್​ 25ರಂದು. ನಂತರ ಒಂದೊಂದೇ ದೇಶಗಳಿಗೆ ವ್ಯಾಪಿಸುತ್ತಿದೆ. ಇದೀಗ ಭಾರತಕ್ಕೂ ಕಾಲಿಟ್ಟಿದ್ದು ಮೂರನೇ ಅಲೆಯ ಸಾಧ್ಯತೆಯನ್ನು ಸೃಷ್ಟಿಸಿದೆ. ಕೊರೊನಾದ ಈ ಹೊಸ ತಳಿ, ಈ ಹಿಂದಿನ ಉಳಿದ ತಳಿಗಳಿಗಿಂತ ವೇಗವಾಗಿ ಹಬ್ಬುತ್ತಿರುವುದು ಆರೋಗ್ಯ ತಜ್ಞರಿಗೆ, ಆಡಳಿತಗಳಿಗೆ ದೊಡ್ಡ ತಲೆನೋವು ಸೃಷ್ಟಿಸಿದೆ. ಅದರಲ್ಲೂ ಲಸಿಕೆಯ ದಕ್ಷತೆಯನ್ನೂ ಇದು ಕುಗ್ಗಿಸುತ್ತದೆ ಎಂದು ಹೇಳಲಾಗಿದ್ದು, ಮೂರನೇ ಡೋಸ್ ಕೊಡುವ ಬಗ್ಗೆಯೂ ಚಿಂತನೆ ನಡೆಯುತ್ತಿದೆ.

ಇದನ್ನೂ ಓದಿ: ದೆಹಲಿ ರೋಹಿಣಿ ಕೋರ್ಟ್ ಸ್ಫೋಟ ಪ್ರಕರಣ; ಹ್ಯಾಂಡ್​ವಾಶ್​ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಜೈಲಲ್ಲಿರುವ ಆರೋಪಿ ವಿಜ್ಞಾನಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ