AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತ ವ್ಯಕ್ತಿಯೊಂದಿಗಿನ ಲೈಂಗಿಕ ಕ್ರಿಯೆ ಅತ್ಯಾಚಾರವೇ ಹೊರತು ಸಮ್ಮತದ ಸೆಕ್ಸ್‌ ಅಲ್ಲ

ಕೇವಲ 13 ವರ್ಷದ ಅಪ್ರಾಪ್ತ ವ್ಯಕ್ತಿಯೊಂದಿಗೆ ನಡೆಸಿದ ಲೈಂಗಿಕ ಕ್ರಿಯೆಯಲ್ಲಿ, ಅಪ್ರಾಪ್ತನಿಗೆ ಯಾವುದೇ ಬಾಹ್ಯ ಗಾಯಗಳಾಗಿಲ್ಲದಿದ್ದರೂ ಅದನ್ನು ಒಮ್ಮತದಿಂದ ನಡೆದ ಲೈಂಗಿಕ ಕ್ರಿಯೆ ಎಂದು ಒಪ್ಪಿಕೊಳ್ಳಲು ಸಾಧ್ಯವಿಲ್ಲವೆಂದು ಬಾಂಬೆ ಹೈಕೋರ್ಟ್‌ ಸ್ಪಷ್ಟಪಡಿಸಿದೆ. ಮಕ್ಕಳ ಕಲ್ಯಾಣಕ್ಕಾಗಿ ಕೆಲಸ ಮಾಡುವ ಎನ್‌ಜಿಓ ಒಂದರಲ್ಲಿ ವಾಹನ ಚಾಲಕನಾಗಿ ಕೆಲಸ ಮಾಡುತ್ತಿದ್ದ ಸಾಗರ್ ಸಾಯಿ ಎಂಬ ವ್ಯಕ್ತಿ, 2015ರಲ್ಲಿ ಅಪ್ರಾಪ್ತ ವಯಸ್ಕನ ಮೇಲೆ ಅತ್ಯಾಚಾರ ಎಸಗಿದ್ದ. ಇದು ಸಾಬಿತಾಗಿ ಕಳೆದ ವರ್ಷ ನ್ಯಾಯಾಲಯ ಆತನಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ ವಿಧಿಸಿತ್ತು. ನ್ಯಾಯಾಲಯ […]

ಅಪ್ರಾಪ್ತ ವ್ಯಕ್ತಿಯೊಂದಿಗಿನ ಲೈಂಗಿಕ ಕ್ರಿಯೆ ಅತ್ಯಾಚಾರವೇ ಹೊರತು ಸಮ್ಮತದ ಸೆಕ್ಸ್‌ ಅಲ್ಲ
ಸಾಧು ಶ್ರೀನಾಥ್​
|

Updated on:Aug 14, 2020 | 8:43 PM

Share

ಕೇವಲ 13 ವರ್ಷದ ಅಪ್ರಾಪ್ತ ವ್ಯಕ್ತಿಯೊಂದಿಗೆ ನಡೆಸಿದ ಲೈಂಗಿಕ ಕ್ರಿಯೆಯಲ್ಲಿ, ಅಪ್ರಾಪ್ತನಿಗೆ ಯಾವುದೇ ಬಾಹ್ಯ ಗಾಯಗಳಾಗಿಲ್ಲದಿದ್ದರೂ ಅದನ್ನು ಒಮ್ಮತದಿಂದ ನಡೆದ ಲೈಂಗಿಕ ಕ್ರಿಯೆ ಎಂದು ಒಪ್ಪಿಕೊಳ್ಳಲು ಸಾಧ್ಯವಿಲ್ಲವೆಂದು ಬಾಂಬೆ ಹೈಕೋರ್ಟ್‌ ಸ್ಪಷ್ಟಪಡಿಸಿದೆ.

ಮಕ್ಕಳ ಕಲ್ಯಾಣಕ್ಕಾಗಿ ಕೆಲಸ ಮಾಡುವ ಎನ್‌ಜಿಓ ಒಂದರಲ್ಲಿ ವಾಹನ ಚಾಲಕನಾಗಿ ಕೆಲಸ ಮಾಡುತ್ತಿದ್ದ ಸಾಗರ್ ಸಾಯಿ ಎಂಬ ವ್ಯಕ್ತಿ, 2015ರಲ್ಲಿ ಅಪ್ರಾಪ್ತ ವಯಸ್ಕನ ಮೇಲೆ ಅತ್ಯಾಚಾರ ಎಸಗಿದ್ದ. ಇದು ಸಾಬಿತಾಗಿ ಕಳೆದ ವರ್ಷ ನ್ಯಾಯಾಲಯ ಆತನಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ ವಿಧಿಸಿತ್ತು. ನ್ಯಾಯಾಲಯ ವಿಧಿಸಿದ್ದ ಶಿಕ್ಷೆಯನ್ನು ಪ್ರಶ್ನಿಸಿ ಸಾಗರ ಸಾಯಿ ಬಾಂಬೆ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದ.

ಅತ್ಯಾಚಾರದಿಂದ ಬದುಕುಳಿದಿದ್ದ ವ್ಯಕ್ತಿಯ ಮೇಲೆ ಯಾವುದೇ ಬಾಹ್ಯ ಗಾಯಗಳಿಲ್ಲ ಎಂದು ವೈದ್ಯಕೀಯ ವರದಿಯಲ್ಲಿ ಸ್ಪಷ್ಟವಾಗಿದೆ. ಹೀಗಾಗಿ ಇದು ಒಮ್ಮತದಿಂದ ನಡೆದ ಕ್ರಿಯೆಯಾಗಿದ್ದು, ಅತ್ಯಾಚಾರವಲ್ಲ ಎಂದು ಆರೋಪಿ ಪರ ವಕೀಲರು ವಾದಿಸಿದ್ದರು.

ಆದರೆ ಈ ವಾದವನ್ನು ನ್ಯಾಯಮೂರ್ತಿ ಭಡಾಂಗ್ ಅವರ ನ್ಯಾಯಪೀಠ ತಳ್ಳಿ ಹಾಕಿದೆ. ಭಾರತೀಯ ದಂಡ ಸಂಹಿತೆಯ ಕಲಂ 375 ರ ಅಡಿಯಲ್ಲಿ ಅತ್ಯಾಚಾರದ ವ್ಯಾಖ್ಯಾನವನ್ನು ಉಲ್ಲೇಖಿಸುತ್ತಾ, ಬಾಹ್ಯ ಗಾಯಗಳ ಅನುಪಸ್ಥಿತಿಯನ್ನು ಆರೋಪಿಗಳ ಪರವಾಗಿ ಪರಿಗಣಿಸಲಾಗುವುದಿಲ್ಲ ಎಂದು ಹೇಳಿ ಆರೋಪಿಯ ಮೇಲ್ಮನವಿಯನ್ನು ತಳ್ಳಿಹಾಕಿದೆ.

Published On - 8:40 pm, Fri, 14 August 20

​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು