AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಸೇರಲಿದ್ದಾರೆ ಕನ್ಹಯ್ಯಾ ಕುಮಾರ್, ಜಿಗ್ನೇಶ್ ಮೇವಾನಿ; ದೆಹಲಿ ಕಾಂಗ್ರೆಸ್ ಕಚೇರಿ ಮುಂದೆ ಸ್ವಾಗತ ಫಲಕ

Kanhaiya Kumar: ಕನ್ಹಯ್ಯಾ ಕುಮಾರ್ ಅವರನ್ನು ಪಕ್ಷಕ್ಕೆ ಸ್ವಾಗತಿಸುವ ಪೋಸ್ಟರ್‌ಗಳು ಇಂದು ಬೆಳಿಗ್ಗೆ ದೆಹಲಿಯ ಕಾಂಗ್ರೆಸ್ ಕಚೇರಿಯ ಹೊರಗೆ ಕಾಣಿಸಿವೆ.

ಕಾಂಗ್ರೆಸ್ ಸೇರಲಿದ್ದಾರೆ ಕನ್ಹಯ್ಯಾ ಕುಮಾರ್, ಜಿಗ್ನೇಶ್ ಮೇವಾನಿ; ದೆಹಲಿ ಕಾಂಗ್ರೆಸ್ ಕಚೇರಿ ಮುಂದೆ ಸ್ವಾಗತ ಫಲಕ
ಕನ್ಹಯ್ಯಾ ಕುಮಾರ್​​ಗೆ ಸ್ವಾಗತ ಕೋರಿರುವ ಫಲಕ
TV9 Web
| Edited By: |

Updated on: Sep 28, 2021 | 11:55 AM

Share

ದೆಹಲಿ: ಜೆಎನ್​​ಯು ವಿದ್ಯಾರ್ಥಿ ಸಂಘಟನೆಯ ನಾಯಕನಾಗಿದ್ದ ಕನ್ಹಯ್ಯಾ ಕುಮಾರ್ ಮತ್ತು ಗುಜರಾತ್ ದಲಿತ ನಾಯಕ ಜಿಗ್ನೇಶ್ ಮೇವಾನಿ ಇಂದು ಕಾಂಗ್ರೆಸ್ ಸೇರಲಿದ್ದಾರೆ. ಕನ್ಹಯ್ಯಾ ಕುಮಾರ್ ಅವರನ್ನು ಪಕ್ಷಕ್ಕೆ ಸ್ವಾಗತಿಸುವ ಪೋಸ್ಟರ್‌ಗಳು ಇಂದು ಬೆಳಿಗ್ಗೆ ದೆಹಲಿಯ ಕಾಂಗ್ರೆಸ್ ಕಚೇರಿಯ ಹೊರಗೆ ಕಾಣಿಸಿವೆ. ಕನ್ಹಯ್ಯಾ ಕುಮಾರ್ ಅವರು 2019 ರ ಸಾರ್ವತ್ರಿಕ ಚುನಾವಣೆಗೆ ಮುನ್ನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಸೇರಿದ್ದರು. ನಂತರ ಅವರು ತಮ್ಮ ಊರು ಬಿಹಾರದ ಬೇಗುಸರೈಯಿಂದ ಬಿಜೆಪಿಯ ಗಿರಿರಾಜ್ ಸಿಂಗ್ ವಿರುದ್ಧ ಸ್ಪರ್ಧಿಸಿ ಪರಾಭವಗೊಂಡರು. ಜೆಎನ್​​ಯು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯಾ ಕುಮಾರ್ ಅವರು ಸಂಸತ್ ದಾಳಿಯ ಮಾಸ್ಟರ್ ಮೈಂಡ್ ಗಲ್ಲುಶಿಕ್ಷೆಗೊಳಗಾದ ಅಫ್ಜಲ್ ಗುರು ಸಾವಿನ ಒಂದನೇ ವರ್ಷ ನಿಮಿತ್ತ ನಡೆದ ಸಮಾರಂಭದಲ್ಲಿ “ದೇಶವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ ಎಂಬ ಆರೋಪದಲ್ಲಿ ಜೈಲುಶಿಕ್ಷೆ ಅನುಭವಿಸಿದ್ದರು. ಗುಜರಾತ್‌ನಲ್ಲಿ ವಡ್ಗಾಮ್ ಕ್ಷೇತ್ರವನ್ನು ಪ್ರತಿನಿಧಿಸುವ ಶಾಸಕರಾದ ಜಿಗ್ನೇಶ್ ಮೇವಾನಿ ಕಾಂಗ್ರೆಸ್ ಸೇರುವುದರಿಂದ ಮುಂದಿನ ವರ್ಷ ನಡೆಯಲಿರುವ ಚುನಾವಣೆಯಲ್ಲಿ ಪ್ರಧಾನ ಪಾತ್ರವಹಿಸಲಿದ್ದಾರೆ.

ವಕೀಲ ಮತ್ತು ಮಾಜಿ ಪತ್ರಕರ್ತರಾದ ಮೇವಾನಿ, ಕಾಂಗ್ರೆಸ್ ತನ್ನ ಸಾಂಪ್ರದಾಯಿಕ ಬೆಂಬಲ ನೆಲೆಯಾದ ಪರಿಶಿಷ್ಟ ಜಾತಿ ಸಮುದಾಯವನ್ನು ತಲುಪುತ್ತಿರುವ ಸಮಯದಲ್ಲಿ ಕಾಂಗ್ರೆಸ್‌ಗೆ ಸೇರುತ್ತಿದ್ದಾರೆ.ಪಂಜಾಬ್ ನಲ್ಲಿ ಕಾಂಗ್ರೆಸ್ ಪಕ್ಷ ಅಮರಿಂದರ್ ಸಿಂಗ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಿಸಿ ದಲಿತ ಸಮುದಾಯಕ್ಕೆ ಸೇರಿದ ಚರಣ್​​ಜಿತ್ ಸಿಂಗ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿತ್ತು.

ಕಾಂಗ್ರೆಸ್ ನ ಈ ನಿರ್ಧಾರವನ್ನು ಬೆಂಬಲಿಸಿ ಟ್ವೀಟ್ ಮಾಡಿದ ಮೇವಾನಿ ಚರಣ್​​ಜಿತ್ ಸಿಂಗ್ ಅವರನ್ನು ಪಂಜಾಬ್ ಸಿಎಂ ಆಗಿ ನೇಮಿಸುವ ನಿರ್ಧಾರವು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನೀಡಿದ ಸಂದೇಶವಾಗಿದೆ. ಇದು ಕೇವಲ ದಲಿತರು ಮಾತ್ರವಲ್ಲದೆ ಎಲ್ಲಾ ಉಪಜಾತಿಗಳ ನಡುವೆ ತೀವ್ರ ಪರಿಣಾಮವನ್ನು ಬೀರುತ್ತದೆ. ದಲಿತರಿಗೆ ಸಂಬಂಧಪಟ್ಟಂತೆ ಈ ನಡೆಯು ಕೇವಲ ಅದ್ಭುತವಲ್ಲ ಹಿತವಾದದ್ದು ಕೂಡ ಎಂದಿದ್ದರು.

ಮೂಲಗಳ ಪ್ರಕಾರ ಕನ್ಹಯ್ಯಾ ಕುಮಾರ್ ಅವರು ಈಗಾಗಲೇ ಎರಡು ವಾರಗಳಲ್ಲಿ ಎರಡು ಬಾರಿ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಭೇಟಿ ಮಾಡಿದ್ದಾರೆ.

ಇದನ್ನೂ ಓದಿ: Explainer | ದೇಶದ್ರೋಹ ಪ್ರಕರಣ: ಐಪಿಸಿ ಹೇಳುವುದೇನು? ಸುಪ್ರೀಂಕೋರ್ಟ್ ಹೇಗೆ ವ್ಯಾಖ್ಯಾನಿಸಿದೆ?

ಇದನ್ನೂ ಓದಿ: ಅಕ್ಟೋಬರ್ 30ಕ್ಕೆ ಮೂರು ಲೋಕಸಭಾ, 30 ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ: ನವೆಂಬರ್ 2ರಂದು ಮತ ಎಣಿಕೆ

(Posters welcoming Kanhaiya Kumar to the party were put up outside the Congress office in Delhi )

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ