Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶ್ಮೀರ ಬಗ್ಗೆ ಪೋಸ್ಟ್: ಹುಂಡೈ ಬೆನ್ನಲ್ಲೇ ಕೆಎಫ್‌ಸಿ, ಪಿಜ್ಜಾ ಹಟ್ ವಿರುದ್ಧ ಸಿಡಿದೆದ್ದ ನೆಟ್ಟಿಗರು

#BoycottKFC ಮತ್ತು #BoycottPizzaHut ಟ್ವಿಟರ್​​ನಲ್ಲಿ ಟ್ರೆಂಡ್ ಆದ ನಂತರ KFC ಮತ್ತು Pizza Hut ಎರಡೂ ಸಹ ತಮ್ಮ ಪೋಸ್ಟ್‌ಗಳನ್ನು ತೆಗೆದುಹಾಕಿವೆ.

ಕಾಶ್ಮೀರ ಬಗ್ಗೆ ಪೋಸ್ಟ್: ಹುಂಡೈ ಬೆನ್ನಲ್ಲೇ ಕೆಎಫ್‌ಸಿ, ಪಿಜ್ಜಾ ಹಟ್ ವಿರುದ್ಧ ಸಿಡಿದೆದ್ದ ನೆಟ್ಟಿಗರು
ಕೆಎಫ್​​ಸಿ- ಪಿಜ್ಜಾಹಟ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Feb 08, 2022 | 12:25 PM

ದೆಹಲಿ: ಕಾರು ತಯಾರಕ ಹುಂಡೈ, ಫಾಸ್ಟ್ ಫುಡ್ ರೆಸ್ಟೋರೆಂಟ್‌ಗಳಾದ ಕೆಎಫ್‌ಸಿ (KFC) ಮತ್ತು ಪಿಜ್ಜಾ ಹಟ್ (Pizza Hut) ತಮ್ಮ ಪಾಕಿಸ್ತಾನ ಮೂಲದ ಫ್ರಾಂಚೈಸ್‌ನಿಂದ ಕಾಶ್ಮೀರದ (Kashmir) ಬಗ್ಗೆ ಪೋಸ್ಟ್‌ ಹಾಕಿದ್ದಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕ್ವಿಕ್ ಸರ್ವಿಸ್ ರೆಸ್ಟೋರೆಂಟ್ (QSR) ಕೆಎಫ್‌ಸಿ, ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಕಾಶ್ಮೀರದಲ್ಲಿನ ಪ್ರತ್ಯೇಕತಾವಾದಿಗಳನ್ನು ಬೆಂಬಲಿಸುತ್ತದೆ ಮತ್ತು “ಕಾಶ್ಮೀರ ಕಾಶ್ಮೀರಿಗಳಿಗೆ ಸೇರಿದೆ” ಎಂದು ಪೋಸ್ಟ್ ಮಾಡಿತ್ತು. ಅದೇ ವೇಳೆ Pizzahutpak ಎಂಬ ವೈರಿಫೈಡ್ ಇನ್​​ಸ್ಟಾಗ್ರಾಂ ಖಾತೆಯಲ್ಲಿ We stand with you. Kashmir Solidarity Day ಎಂದು ಪೋಸ್ಟ್ ಮಾಡಲಾಗಿದೆ. ಕೆಎಫ್ ಸಿ ಮತ್ತು ಪಿಜ್ಜಾಹಟ್ ಕ್ಯುಎಸ್ಆರ್ ಸರಣಿಯ ಅಮೆರಿಕ ಮೂಲದ Yum! ಬ್ರಾಂಡ್‌ನ ಅಂಗಸಂಸ್ಥೆಗಳಾಗಿವೆ. ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಕೆಎಫ್ ಸಿ ಪೋಸ್ಟ್ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಕ್ಷಮೆಯಾಚಿಸಿದ್ದು ನಾವು “ಭಾರತವನ್ನು ಗೌರವಿಸುತ್ತೇವೆ” ಎಂದು ಹೇಳಿದೆ.  “ದೇಶದ ಹೊರಗಿನ ಕೆಲವು ಕೆಎಫ್‌ಸಿ ಸಾಮಾಜಿಕ ಮಾಧ್ಯಮ ಚಾನೆಲ್‌ಗಳಲ್ಲಿ ಪ್ರಕಟವಾದ ಪೋಸ್ಟ್‌ಗಾಗಿ ನಾವು ಕ್ಷಮೆಯಾಚಿಸುತ್ತೇವೆ. ನಾವು ಭಾರತವನ್ನು ಗೌರವಿಸುತ್ತೇವೆ. ಎಲ್ಲಾ ಭಾರತೀಯರಿಗೆ ಹೆಮ್ಮೆಯಿಂದ ಸೇವೆ ಸಲ್ಲಿಸುವ ನಮ್ಮ ಬದ್ಧತೆಯಲ್ಲಿ ದೃಢವಾಗಿರುತ್ತೇವೆ ಎಂದು ಕೆಎಫ್‌ಸಿ ಇಂಡಿಯಾ ಟ್ವಿಟರ್ ಅಧಿಕೃತ ಹ್ಯಾಂಡಲ್‌ನಲ್ಲಿನ ಸಂದೇಶದಲ್ಲಿ ತಿಳಿಸಲಾಗಿದೆ. ಪಿಜ್ಜಾ ಹಟ್ ಸಹ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುವ ಪೋಸ್ಟ್‌ನ ವಿಷಯಗಳನ್ನು ಕ್ಷಮಿಸುವುದಿಲ್ಲ, ಬೆಂಬಲಿಸುವುದಿಲ್ಲ ಅಥವಾ ಒಪ್ಪುವುದಿಲ್ಲ” ಎಂದು ಹೇಳಿದೆ. 

“ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುವ ಪೋಸ್ಟ್‌ನ ವಿಷಯಗಳನ್ನು ಕ್ಷಮಿಸುವುದಿಲ್ಲ, ಬೆಂಬಲಿಸುವುದಿಲ್ಲ ಅಥವಾ ಒಪ್ಪುವುದಿಲ್ಲ. ನಮ್ಮ ಎಲ್ಲಾ ಸಹೋದರ ಸಹೋದರಿಯರಿಗೆ ಹೆಮ್ಮೆಯಿಂದ ಸೇವೆ ಸಲ್ಲಿಸುವ ನಮ್ಮ ಬದ್ಧತೆಯಲ್ಲಿ ನಾವು ದೃಢವಾಗಿರುತ್ತೇವೆ, ”ಎಂದು ಪಿಜ್ಜಾ ಹಟ್ ಹೇಳಿದೆ.

#BoycottKFC ಮತ್ತು #BoycottPizzaHut ಟ್ವಿಟರ್​​ನಲ್ಲಿ ಟ್ರೆಂಡ್ ಆದ ನಂತರ ನಂತರ KFC ಮತ್ತು Pizza Hut ಎರಡೂ ಸಹ ತಮ್ಮ ಪೋಸ್ಟ್‌ಗಳನ್ನು ತೆಗೆದುಹಾಕಿವೆ.

ಈ ಹಿಂದೆ ಪಾಕಿಸ್ತಾನದ ಡೀಲರ್ ಸಾಮಾಜಿಕ ಮಾಧ್ಯಮದಲ್ಲಿ ಇದೇ ರೀತಿಯ ಸಂದೇಶವನ್ನು ಪೋಸ್ಟ್ ಮಾಡಿದ ನಂತರ ವಾಹನ ತಯಾರಕ ಹುಂಡೈ ತೀವ್ರ ಟೀಕೆಗೆ ಒಳಗಾಯಿತು.

ಈ ಪೋಸ್ಟ್ ಬೆನ್ನಲ್ಲೇ #BoycottHyundai ಭಾರತದಲ್ಲಿ ಟ್ವಿಟರ್‌ನಲ್ಲಿ ಟ್ರೆಂಡಿಂಗ್ ಪ್ರಾರಂಭಿಸಿತು.  ದೇಶದಲ್ಲಿ ಕಂಪನಿಯ ಉತ್ಪನ್ನಗಳನ್ನು ಖರೀದಿಸುವುದನ್ನು ನಿಲ್ಲಿಸುವಂತೆ ಹಲವಾರು ನೆಟ್ಟಿಗರು ಒತ್ತಾಯಿಸಿದರು. ಆದಾಗ್ಯೂ, ಹುಂಡೈ ಮೋಟಾರ್ಸ್ ಇಂಡಿಯಾ ನಂತರ ಸಾಮಾಜಿಕ ಮಾಧ್ಯಮದಲ್ಲಿ ಸಂದೇಶವನ್ನು ಪೋಸ್ಟ್ ಮಾಡಿದ್ದು, ರಾಷ್ಟ್ರೀಯತೆಯನ್ನು ಗೌರವಿಸುವ ತನ್ನ “ಬಲವಾದ ನೀತಿ” ಗಾಗಿ ದೃಢವಾಗಿ ನಿಂತಿದೆ ಎಂದು ಹೇಳಿದೆ.

“ಹುಂಡೈ ಮೋಟಾರ್ ಇಂಡಿಯಾ ಈಗ 25 ವರ್ಷಗಳಿಗೂ ಹೆಚ್ಚು ಕಾಲ ಭಾರತೀಯ ಮಾರುಕಟ್ಟೆಗೆ ಬದ್ಧವಾಗಿದೆ ಮತ್ತು ರಾಷ್ಟ್ರೀಯತೆಯನ್ನು ಗೌರವಿಸುವ ನಮ್ಮ ಬಲವಾದ ನೀತಿಗಾಗಿ ನಾವು ದೃಢವಾಗಿ ನಿಲ್ಲುತ್ತೇವೆ” ನಾವುರು ಸೂಕ್ಷ್ಮವಲ್ಲದ ಸಂವಹನದ ಕಡೆಗೆ “ಶೂನ್ಯ-ಸಹಿಷ್ಣು ನೀತಿಯನ್ನು” ಹೊಂದಿದ್ದೇವೆ ಎಂದು ಕಂಪನಿ ಹೇಳಿದೆ.

ಇದನ್ನೂ ಓದಿ: Hyundai India: ಪಾಕ್ ಹ್ಯಾಂಡಲ್‌ನಿಂದ ಕಾಶ್ಮೀರ ಬಗ್ಗೆ ಟ್ವೀಟ್‌; ನೆಟ್ಟಿಗರು ಸಿಟ್ಟಾದ ನಂತರ ಹ್ಯುಂಡೈ ಸ್ಪಷ್ಟನೆ

ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು