AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Power Crisis: ಕಲ್ಲಿದ್ದಲು ಸಾಗಣೆಗಾಗಿ 1100 ಪ್ಯಾಸೆಂಜರ್ ರೈಲುಗಳು ರದ್ದು

ದೇಶದ ವಿವಿಧೆಡೆ ಶಾಖೋತ್ಪನ್ನ ವಿದ್ಯುತ್ ಘಟಕಗಳಲ್ಲಿ ಕಲ್ಲಿದ್ದಲು ಕೊರತೆಯಿಂದ ಎದುರಾಗಬಹುದಾದ ಸಂಭಾವ್ಯ ಅಪಾಯಗಳನ್ನು ಮನಗಂಡಿರುವ ಭಾರತ ಸರ್ಕಾರವು ಕಲ್ಲಿದ್ದಲು ತುರ್ತು ಸಾಗಣೆಗೆ ಒತ್ತು ನೀಡುತ್ತಿದೆ.

Power Crisis: ಕಲ್ಲಿದ್ದಲು ಸಾಗಣೆಗಾಗಿ 1100 ಪ್ಯಾಸೆಂಜರ್ ರೈಲುಗಳು ರದ್ದು
ಕಲ್ಲಿದ್ದಲು ಸಾಗಣೆ ರೈಲು
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:May 05, 2022 | 11:48 AM

Share

ದೆಹಲಿ: ದೇಶದ ವಿವಿಧೆಡೆ ಶಾಖೋತ್ಪನ್ನ ವಿದ್ಯುತ್ ಘಟಕಗಳಲ್ಲಿ ಕಲ್ಲಿದ್ದಲು ಕೊರತೆಯಿಂದ ಎದುರಾಗಬಹುದಾದ ಸಂಭಾವ್ಯ ಅಪಾಯಗಳನ್ನು ಮನಗಂಡಿರುವ ಭಾರತ ಸರ್ಕಾರವು ಕಲ್ಲಿದ್ದಲು ತುರ್ತು ಸಾಗಣೆಗೆ ಒತ್ತು ನೀಡುತ್ತಿದೆ. ಈ ಪ್ರಯತ್ನದ ಭಾಗವಾಗಿ ಭಾರತೀಯ ರೈಲ್ವೆ ಮತ್ತಷ್ಟು ಪ್ಯಾಸೆಂಜರ್ ರೈಲುಗಳನ್ನು ರದ್ದುಪಡಿಸಿದ್ದು, ಹಳಿ ಮತ್ತು ಇತರ ರೈಲ್ವೆ ಸೌಕರ್ಯಗಳನ್ನು ಕಲ್ಲಿದ್ದಲು ಸಾಗಣೆಗೆ ಮೀಸಲಿಡಲು ಮುಂದಾಗಿದೆ. ಮೇ 24ರವರೆಗೆ ಒಟ್ಟು 1,100 ಪ್ಯಾಸೆಂಜರ್ ರೈಲುಗಳನ್ನು ರದ್ದುಪಡಿಸಿರುವುದಾಗಿ ಭಾರತೀಯ ರೈಲ್ವೆ ಹೇಳಿದೆ. ಎಕ್ಸ್​ಪ್ರೆಸ್​ ರೈಲುಗಳ 500, ಪ್ಯಾಸೆಂಜರ್ ರೈಲುಗಳ 580 ಟ್ರಿಪ್​ಗಳನ್ನು ರದ್ದುಪಡಿಸಲಾಗಿದೆ. ಕಳೆದ ಏಪ್ರಿಲ್ 29ರಂದು 240 ರೈಲುಗಳನ್ನು ರದ್ದುಪಡಿಸಿ ರೈಲ್ವೆ ಇಲಾಖೆಯು ಆದೇಶ ಹೊರಡಿಸಿತ್ತು. ಪ್ರಸ್ತುತ ಕಲ್ಲಿದ್ದಲು ಸಾಗಣೆಗೆ ಮೀಸಲಿರುವ ಸುಮಾರು 400 ಕಲ್ಲಿದ್ದಲು ರೈಲುಗಳು ದೇಶಾದ್ಯಂತ ಸಂಚರಿಸುತ್ತಿವೆ.

ಈ ತಿಂಗಳ ಮಧ್ಯದಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಾಗಬಹುದು ಎಂದು ಕೇಂದ್ರ ಸರ್ಕಾರವು ಅಂದಾಜಿಸಿದೆ. ಹೀಗಾಗಿಯೇ ವಿವಿಧ ವಿದ್ಯುತ್ ಉತ್ಪಾದನಾ ಘಟಕಗಳಿಗೆ ಕಲ್ಲಿದ್ದಲು ಸಾಗಣೆ ಪ್ರಮಾಣ ಹೆಚ್ಚಿಸಲು ಒತ್ತು ನೀಡುತ್ತಿದೆ. ದೇಶೀಯ ಕಲ್ಲಿದ್ದಲು ಘಟಕಗಳಲ್ಲಿ ಕಾರ್ಮಿಕರು ಮುಷ್ಕರ ನಡೆಸಿದ್ದು, ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲು ಮುಖ್ಯ ಕಾರಣವಾಯಿತು.

ದೆಹಲಿ, ರಾಜಸ್ತಾನ, ಪಂಜಾಬ್, ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರಗಳಲ್ಲಿ ವಿದ್ಯುತ್ ಕೊರತೆ ಸಮಸ್ಯೆ ತೀವ್ರವಾಗಿದೆ. ಮುಂದಿನ ದಿನಗಳಲ್ಲಿ ಇದೇ ರಾಜ್ಯಗಳಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ವಿದ್ಯುತ್ ಬೇಡಿಕೆ ಹೆಚ್ಚಾಗುವ ನಿರೀಕ್ಷೆಯಿದೆ. ದೇಶದಲ್ಲಿರುವ ಒಟ್ಟು 173 ಶಾಖೋತ್ಪನ್ನ ಘಟಕಗಳ ಪೈಕಿ, 108 ಘಟಕಗಳಲ್ಲಿ ಕಲ್ಲಿದ್ದಲಿನ ತೀವ್ರ ಕೊರತೆ ಎದುರಾಗಿದೆ. ಮುಂದಿನ ಕೆಲವೇ ದಿನಗಳ ಬೇಡಿಕೆ ಪೂರೈಸುವ ಸಾಮರ್ಥ್ಯ ಈ ಘಟಕಗಳಿಗೆ ಇವೆ.

ಇದನ್ನೂ ಓದಿ: ಆರ್ಥಿಕತೆ ಉತ್ತಮವಾಗಿದೆ, ಬಿಸಿಲು ಭಯಂಕರವಾಗಿದೆ; ಹಾಗಾಗಿ ವಿದ್ಯುತ್​ ಬೇಡಿಕೆ ಅಗಾಧವಾಗಿದೆ- ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ

ಇದನ್ನೂ ಓದಿ: ವಿದ್ಯುತ್ ಸ್ಥಾವರದಲ್ಲಿ ಕಲ್ಲಿದ್ದಲು ದಾಸ್ತಾನು ಇಲ್ಲ ಎಂದ ದೆಹಲಿ ಸರ್ಕಾರ; ಎನ್​ಟಿಪಿಸಿ ಹೇಳಿದ್ದೇ ಬೇರೆ

Published On - 11:48 am, Thu, 5 May 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ