AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coal Crisis: ಕಲ್ಲಿದ್ದಲು ಪೂರೈಕೆಯಲ್ಲಿ ವ್ಯತ್ಯಯ ಹಿನ್ನೆಲೆ ಕೇಂದ್ರ ಇಂಧನ ಸಚಿವರ ಸಭೆ; ದೆಹಲಿ ಪರಿಸ್ಥಿತಿ ಅವಲೋಕನ

Coal Crisis: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್ ಕೂಡ ದೆಹಲಿಯಲ್ಲಿ ವಿದ್ಯುತ್ ಬಿಕ್ಕಟ್ಟು ಉಂಟಾಗಬಹುದು ಎಂದು ಹೇಳಿಕೆ ನೀಡಿದ್ದರು. ನಾನು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದೇನೆ. ನಾವು ಈ ಸ್ಥಿತಿಯನ್ನು ತಡೆಯಲು ಪೂರ್ಣ ಪ್ರಯತ್ನ ಮಾಡುತ್ತಿದ್ದೇವೆ ಎಂದು ಟ್ವೀಟ್ ಮಾಡಿದ್ದರು.

Coal Crisis: ಕಲ್ಲಿದ್ದಲು ಪೂರೈಕೆಯಲ್ಲಿ ವ್ಯತ್ಯಯ ಹಿನ್ನೆಲೆ ಕೇಂದ್ರ ಇಂಧನ ಸಚಿವರ ಸಭೆ; ದೆಹಲಿ ಪರಿಸ್ಥಿತಿ ಅವಲೋಕನ
ಕೇಂದ್ರ ಇಂಧನ ಸಚಿವರ ಸಭೆ
TV9 Web
| Edited By: |

Updated on: Oct 10, 2021 | 4:39 PM

Share

ದೆಹಲಿ: ಕಲ್ಲಿದ್ದಲು ಕೊರತೆ ಕಾರಣದಿಂದ ವಿದ್ಯುತ್ ಪೂರೈಕೆ ಬಿಕ್ಕಟ್ಟು ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ದೆಹಲಿ ಇಂಧನ ಸಚಿವಾಲಯ, ಬಿಎಸ್​ಇಎಸ್ ಮತ್ತು ಟಾಟಾ ಪವರ್ ಅಧಿಕಾರಿಗಳು ಕೇಂದ್ರ ಇಂಧನ ಸಚಿವ ಆರ್​ಕೆ ಸಿಂಗ್ ನಿವಾಸದತ್ತ ಭಾನುವಾರ ದೌಡಾಯಿಸಿದ್ದಾರೆ. ಅವರು ಪವರ್ ಪ್ಲಾಂಟ್​ಗಳಲ್ಲಿ ಕಲ್ಲಿದ್ದಲು ಕೊರತೆ ಉಂಟಾಗಿರುವ ಕುರಿತು ಸಭೆ ನಡೆಸಲಿದ್ದಾರೆ.

ದೇಶದ ರಾಜಧಾನಿ ದೆಹಲಿಗೆ ವಿದ್ಯುತ್ ಸರಬರಾಜು ಮಾಡುವ ಪವರ್ ಪ್ಲಾಂಟ್​ಗಳಿಗೆ ಕೂಡಲೇ ಕಲ್ಲಿದ್ದಲು ಪೂರೈಕೆ ಆಗದಿದ್ದರೆ ಇನ್ನೆರಡು ದಿನದಲ್ಲಿ ದೆಹಲಿಯಲ್ಲಿ ಸಂಪೂರ್ಣ ವಿದ್ಯುತ್ ಸರಬರಾಜು ವ್ಯತ್ಯಯ ಆಗಬಹುದು ಎಂದು ದೆಹಲಿ ಇಂಧನ ಸಚಿವ ಸತ್ಯೇಂದರ್ ಜೈನ್ ನಿನ್ನೆ ಹೇಳಿಕೆ ನೀಡಿದ್ದರು. ಈ ಬಿಕ್ಕಟ್ಟು ಸರಿಪಡಿಸಲು ದೆಹಲಿ ಸರ್ಕಾರ ದುಂದುವೆಚ್ಚ ಮಾಡಲು ಕೂಡ ಸದ್ಯ ಸಿದ್ಧವಾಗಿದೆ ಎಂದು ಅವರು ಹೇಳಿದ್ದರು.

ಇಂದು (ಅಕ್ಟೋಬರ್ 10) ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್ ಕೂಡ ದೆಹಲಿಯಲ್ಲಿ ವಿದ್ಯುತ್ ಬಿಕ್ಕಟ್ಟು ಉಂಟಾಗಬಹುದು ಎಂದು ಹೇಳಿಕೆ ನೀಡಿದ್ದರು. ನಾನು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದೇನೆ. ನಾವು ಈ ಸ್ಥಿತಿಯನ್ನು ತಡೆಯಲು ಪೂರ್ಣ ಪ್ರಯತ್ನ ಮಾಡುತ್ತಿದ್ದೇವೆ ಎಂದು ಅವರು ಟ್ವೀಟ್ ಮಾಡಿದ್ದರು.

ಅರವಿಂದ್ ಕೇಜ್ರೀವಾಲ್ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಶನಿವಾರ ಪತ್ರ ಬರೆದಿದ್ದರು. ಇಲ್ಲಿ ಕಲ್ಲಿದ್ದಲು ಬಿಕ್ಕಟ್ಟಿನಿಂದ ಸಮಸ್ಯೆ ಉಂಟಾಗಿದೆ. ಅದರಿಂದ ದೆಹಲಿಗೆ ವಿದ್ಯುತ್ ಸರಬರಾಜಿಗೆ ಕೂಡ ತೊಡಕು ಉಂಟಾಗಿದೆ. ಈ ಬಗ್ಗೆ ಮಧ್ಯಪ್ರವೇಶಿಸಿ ಗಮನ ಹರಿಸಬೇಕು ಎಂದು ಮೋದಿಗೆ ಬರೆದ ಪತ್ರದಲ್ಲಿ ಕೇಳಿಕೊಂಡಿದ್ದರು.

ಇದನ್ನೂ ಓದಿ: Coal Crisis: ‘ಕಲ್ಲಿದ್ದಲು ಅಭಾವ..ವಿದ್ಯುತ್​ ಪೂರೈಕೆ ವ್ಯತ್ಯಯಗಳೆಲ್ಲ ತಪ್ಪು ಕಲ್ಪನೆ, ಆತಂಕ ಬೇಡ’-ಕೇಂದ್ರ ಸರ್ಕಾರ

ಇದನ್ನೂ ಓದಿ: Coal Crisis: ‘ಕಲ್ಲಿದ್ದಲು ಕೊರತೆಯಾಗಿಲ್ಲ’ ಎಂದು ಅಚ್ಚರಿಯ ಹೇಳಿಕೆ ನೀಡಿದ ಗಣಿ ಮತ್ತು ಭೂವಿಜ್ಞಾನ ಸಚಿವ ಹಾಲಪ್ಪ ಆಚಾರ್!

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ