Sign In

By signing in or creating an account, you agree with Associated Broadcasting Company's Terms & Conditions and Privacy Policy.

Coal Crisis: ಕಲ್ಲಿದ್ದಲು ಪೂರೈಕೆಯಲ್ಲಿ ವ್ಯತ್ಯಯ ಹಿನ್ನೆಲೆ ಕೇಂದ್ರ ಇಂಧನ ಸಚಿವರ ಸಭೆ; ದೆಹಲಿ ಪರಿಸ್ಥಿತಿ ಅವಲೋಕನ

Coal Crisis: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್ ಕೂಡ ದೆಹಲಿಯಲ್ಲಿ ವಿದ್ಯುತ್ ಬಿಕ್ಕಟ್ಟು ಉಂಟಾಗಬಹುದು ಎಂದು ಹೇಳಿಕೆ ನೀಡಿದ್ದರು. ನಾನು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದೇನೆ. ನಾವು ಈ ಸ್ಥಿತಿಯನ್ನು ತಡೆಯಲು ಪೂರ್ಣ ಪ್ರಯತ್ನ ಮಾಡುತ್ತಿದ್ದೇವೆ ಎಂದು ಟ್ವೀಟ್ ಮಾಡಿದ್ದರು.

Coal Crisis: ಕಲ್ಲಿದ್ದಲು ಪೂರೈಕೆಯಲ್ಲಿ ವ್ಯತ್ಯಯ ಹಿನ್ನೆಲೆ ಕೇಂದ್ರ ಇಂಧನ ಸಚಿವರ ಸಭೆ; ದೆಹಲಿ ಪರಿಸ್ಥಿತಿ ಅವಲೋಕನ
ಕೇಂದ್ರ ಇಂಧನ ಸಚಿವರ ಸಭೆ
Follow us
TV9 Web
| Updated By: ganapathi bhat

Updated on: Oct 10, 2021 | 4:39 PM

ದೆಹಲಿ: ಕಲ್ಲಿದ್ದಲು ಕೊರತೆ ಕಾರಣದಿಂದ ವಿದ್ಯುತ್ ಪೂರೈಕೆ ಬಿಕ್ಕಟ್ಟು ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ದೆಹಲಿ ಇಂಧನ ಸಚಿವಾಲಯ, ಬಿಎಸ್​ಇಎಸ್ ಮತ್ತು ಟಾಟಾ ಪವರ್ ಅಧಿಕಾರಿಗಳು ಕೇಂದ್ರ ಇಂಧನ ಸಚಿವ ಆರ್​ಕೆ ಸಿಂಗ್ ನಿವಾಸದತ್ತ ಭಾನುವಾರ ದೌಡಾಯಿಸಿದ್ದಾರೆ. ಅವರು ಪವರ್ ಪ್ಲಾಂಟ್​ಗಳಲ್ಲಿ ಕಲ್ಲಿದ್ದಲು ಕೊರತೆ ಉಂಟಾಗಿರುವ ಕುರಿತು ಸಭೆ ನಡೆಸಲಿದ್ದಾರೆ.

ದೇಶದ ರಾಜಧಾನಿ ದೆಹಲಿಗೆ ವಿದ್ಯುತ್ ಸರಬರಾಜು ಮಾಡುವ ಪವರ್ ಪ್ಲಾಂಟ್​ಗಳಿಗೆ ಕೂಡಲೇ ಕಲ್ಲಿದ್ದಲು ಪೂರೈಕೆ ಆಗದಿದ್ದರೆ ಇನ್ನೆರಡು ದಿನದಲ್ಲಿ ದೆಹಲಿಯಲ್ಲಿ ಸಂಪೂರ್ಣ ವಿದ್ಯುತ್ ಸರಬರಾಜು ವ್ಯತ್ಯಯ ಆಗಬಹುದು ಎಂದು ದೆಹಲಿ ಇಂಧನ ಸಚಿವ ಸತ್ಯೇಂದರ್ ಜೈನ್ ನಿನ್ನೆ ಹೇಳಿಕೆ ನೀಡಿದ್ದರು. ಈ ಬಿಕ್ಕಟ್ಟು ಸರಿಪಡಿಸಲು ದೆಹಲಿ ಸರ್ಕಾರ ದುಂದುವೆಚ್ಚ ಮಾಡಲು ಕೂಡ ಸದ್ಯ ಸಿದ್ಧವಾಗಿದೆ ಎಂದು ಅವರು ಹೇಳಿದ್ದರು.

ಇಂದು (ಅಕ್ಟೋಬರ್ 10) ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್ ಕೂಡ ದೆಹಲಿಯಲ್ಲಿ ವಿದ್ಯುತ್ ಬಿಕ್ಕಟ್ಟು ಉಂಟಾಗಬಹುದು ಎಂದು ಹೇಳಿಕೆ ನೀಡಿದ್ದರು. ನಾನು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದೇನೆ. ನಾವು ಈ ಸ್ಥಿತಿಯನ್ನು ತಡೆಯಲು ಪೂರ್ಣ ಪ್ರಯತ್ನ ಮಾಡುತ್ತಿದ್ದೇವೆ ಎಂದು ಅವರು ಟ್ವೀಟ್ ಮಾಡಿದ್ದರು.

ಅರವಿಂದ್ ಕೇಜ್ರೀವಾಲ್ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಶನಿವಾರ ಪತ್ರ ಬರೆದಿದ್ದರು. ಇಲ್ಲಿ ಕಲ್ಲಿದ್ದಲು ಬಿಕ್ಕಟ್ಟಿನಿಂದ ಸಮಸ್ಯೆ ಉಂಟಾಗಿದೆ. ಅದರಿಂದ ದೆಹಲಿಗೆ ವಿದ್ಯುತ್ ಸರಬರಾಜಿಗೆ ಕೂಡ ತೊಡಕು ಉಂಟಾಗಿದೆ. ಈ ಬಗ್ಗೆ ಮಧ್ಯಪ್ರವೇಶಿಸಿ ಗಮನ ಹರಿಸಬೇಕು ಎಂದು ಮೋದಿಗೆ ಬರೆದ ಪತ್ರದಲ್ಲಿ ಕೇಳಿಕೊಂಡಿದ್ದರು.

ಇದನ್ನೂ ಓದಿ: Coal Crisis: ‘ಕಲ್ಲಿದ್ದಲು ಅಭಾವ..ವಿದ್ಯುತ್​ ಪೂರೈಕೆ ವ್ಯತ್ಯಯಗಳೆಲ್ಲ ತಪ್ಪು ಕಲ್ಪನೆ, ಆತಂಕ ಬೇಡ’-ಕೇಂದ್ರ ಸರ್ಕಾರ

ಇದನ್ನೂ ಓದಿ: Coal Crisis: ‘ಕಲ್ಲಿದ್ದಲು ಕೊರತೆಯಾಗಿಲ್ಲ’ ಎಂದು ಅಚ್ಚರಿಯ ಹೇಳಿಕೆ ನೀಡಿದ ಗಣಿ ಮತ್ತು ಭೂವಿಜ್ಞಾನ ಸಚಿವ ಹಾಲಪ್ಪ ಆಚಾರ್!

ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?