AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯ ವಿದ್ಯುತ್ ಕಡಿತಗೊಳಿಸಲು ಬಂದ ಅಧಿಕಾರಿಗಳ ಮೇಲೆ ಮಹಿಳೆಯರಿಂದ ಹಲ್ಲೆ

ಮನೆಯ ವಿದ್ಯುತ್ ಸರಬರಾಜು ಕಡಿತ ಮಾಡಲು ಬಂದ ಅಧಿಕಾರಿ ಮೇಲೆ ಮಹಿಳೆಯರು ಹಲ್ಲೆ ನಡೆಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯಲ್ಲಿ ಗ್ರಾಹಕರೊಬ್ಬರ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಹೋದ ನಂತರ ವಿದ್ಯುತ್ ಇಲಾಖೆಯ ಅಧಿಕಾರಿಗಳು ಮತ್ತು ಜೂನಿಯರ್ ಇಂಜಿನಿಯರ್ ತಂಡವನ್ನು ನಿಂದಿಸಿ ಥಳಿಸಲಾಗಿದೆ ಎಂದು ಆರೋಪಿಸಲಾಗಿದೆ.

ಮನೆಯ ವಿದ್ಯುತ್ ಕಡಿತಗೊಳಿಸಲು ಬಂದ ಅಧಿಕಾರಿಗಳ ಮೇಲೆ ಮಹಿಳೆಯರಿಂದ ಹಲ್ಲೆ
Image Credit source: India Today
Follow us
ನಯನಾ ರಾಜೀವ್
|

Updated on: Apr 15, 2024 | 7:45 AM

ಮನೆಯ ವಿದ್ಯುತ್ ಸರಬರಾಜು ಕಡಿತ ಮಾಡಲು ಬಂದ ಅಧಿಕಾರಿ ಮೇಲೆ ಮಹಿಳೆಯರು ಹಲ್ಲೆ ನಡೆಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯಲ್ಲಿ ಗ್ರಾಹಕರೊಬ್ಬರ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಹೋದ ನಂತರ ವಿದ್ಯುತ್ ಇಲಾಖೆಯ ಅಧಿಕಾರಿಗಳು ಮತ್ತು ಜೂನಿಯರ್ ಇಂಜಿನಿಯರ್ ತಂಡವನ್ನು ನಿಂದಿಸಿ ಥಳಿಸಲಾಗಿದೆ ಎಂದು ಆರೋಪಿಸಲಾಗಿದೆ.

ಬಾಕಿ ಬಿಲ್‌ಗಳನ್ನು ಪಾವತಿಸದ ಕಾರಣಕ್ಕೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಅವರ ಮನೆಗೆ ಬಂದ ನಂತರ ಜಮೀಲಾ ಖಾತುನ್, ಅವರ ಮಗಳು ಟೀನಾ, ಅಳಿಯ ಮತ್ತು ಇತರ ಕುಟುಂಬ ಸದಸ್ಯರು ಅಧಿಕಾರಿಗಳ ಮೇಲೆ ದಾಳಿ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜೆಇ ಸಾಗರ್ ಮಾಳವಿಯಾ ಅವರು ಜನವರಿ 29 ರಂದು ವಿಜಿಲೆನ್ಸ್ ತಂಡವು ಜಮೀಲಾ ಖಾತೂನ್ ವಿರುದ್ಧ ವಿದ್ಯುತ್ ಕಳ್ಳತನದ ಆರೋಪವನ್ನು 98,207 ರೂ. ದಂಡ ವಿಧಿಸಿತ್ತು. ಆದರೆ ಮಹಿಳೆ ಕೇವಲ 40 ಸಾವಿರ ರೂ. ಹಣ ಕಟ್ಟಿದ್ದರು. ಬಾಕಿ ಹಣ ಪಾವತಿಸದ ಹಿನ್ನೆಲೆಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಆದೇಶವನ್ನು ಹೊರಡಿಸಲಾಯಿತು.

ಮತ್ತಷ್ಟು ಓದಿ: ಆಂಧ್ರಪ್ರದೇಶದಲ್ಲಿ ರಥೋತ್ಸವದ ವೇಳೆ ದುರಂತ, 13 ಮಕ್ಕಳಿಗೆ ವಿದ್ಯುತ್​ ಸ್ಪರ್ಶ

ಅಧಿಕಾರಿಗಳ ತಂಡವು ಆದೇಶದ ಮೇರೆಗೆ ವಿದ್ಯುತ್ ಕಡಿತಗೊಳಿಸಲು ಅವರ ಮನೆಗೆ ತೆರಳಿತ್ತು. ಆಗ ಮಹಿಳೆ ಹಾಗೂ ಆಕೆಯ ಕುಟುಂಬ ಸದಸ್ಯರು ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಐವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್