AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ರಾತ್ರಿ ಹೊತ್ತು ಪ್ರಕಾಶಮಾನವಾಗಿ ಬೆಳಗುತ್ತದೆ: ವಿದ್ಯುತ್ ಸಚಿವ ಆರ್‌ಕೆ ಸಿಂಗ್

"ಪ್ರಧಾನಿ ನರೇಂದ್ರ ಮೋದಿ ಎಲ್ಲಾ ಹಳ್ಳಿಗಳಿಗೆ ವಿದ್ಯುತ್ ತಲುಪುವುದನ್ನು ಖಚಿತಪಡಿಸಿಕೊಳ್ಳಲು 1,000 ದಿನಗಳ ಕಾಲಾವಧಿಯನ್ನು ನೀಡಿದ್ದರು. ಗಡುವಿನ ಕೆಲವು ದಿನಗಳ ಮೊದಲೇ ಇದು ಸಂಭವಿಸಿದೆ ಎಂದು ಸಿಂಗ್ ಹೇಳಿದ್ದಾರೆ.

ಭಾರತ ರಾತ್ರಿ ಹೊತ್ತು ಪ್ರಕಾಶಮಾನವಾಗಿ ಬೆಳಗುತ್ತದೆ: ವಿದ್ಯುತ್ ಸಚಿವ ಆರ್‌ಕೆ ಸಿಂಗ್
ಪ್ರಾತಿನಿಧಿಕ ಚಿತ್ರ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jan 30, 2023 | 9:11 PM

Share

ದೆಹಲಿ: ರಾತ್ರಿಯ ದೀಪಗಳು ಅಥವಾ ಎನ್‌ಎಲ್‌ಟಿ ಶೇಕಡಾ 43 ರಷ್ಟು ಹೆಚ್ಚಳವಾಗಿರುವುದರಿಂದ ಸೂರ್ಯಾಸ್ತದ ನಂತರ ಭಾರತವು ಪ್ರಕಾಶಮಾನವಾಗಿ ಹೊಳೆಯುತ್ತಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(Indian Space Research Organisation) ಅಂಕಿಅಂಶಗಳು ಹೇಳಿವೆ. “ಹೆಚ್ಚಿನ ಹಳ್ಳಿಗಳು ಪ್ರಕಾಶಿಸಲ್ಪಟ್ಟಿರುವುದರಿಂದ ಭಾರತವು ನಿಜವಾಗಿಯೂ ಹೊಳೆಯುತ್ತಿದೆ. ದತ್ತಾಂಶವು ಶೇಕಡಾ 43 ರಷ್ಟು ಹೆಚ್ಚಳವನ್ನು ತೋರಿಸುತ್ತದೆ, ಅಂದರೆ 2012 ಕ್ಕೆ ಹೋಲಿಸಿದರೆ ಹೆಚ್ಚಿನ ಸ್ಥಳಗಳು ವಿದ್ಯುತ್ ಸಂಪರ್ಕ ಹೊಂದಿವೆ” ಎಂದು ವಿದ್ಯುತ್ ಸಚಿವ ಆರ್‌ಕೆ ಸಿಂಗ್ (RK Singh) ಎನ್‌ಡಿಟಿವಿಗೆ ತಿಳಿಸಿದರು.ಹಳ್ಳಿಗಳಿಗೆ ವಿದ್ಯುತ್ ಪೂರೈಕೆ ಸುಮಾರು 50 ಪ್ರತಿಶತದಷ್ಟು ಹೆಚ್ಚಾಗಿದೆ. ‘ಕೆಲವು ಹಿಂದುಳಿದ ಪ್ರದೇಶಗಳಿಗೆ ಸಿಗುತ್ತಿದ್ದ ವಿದ್ಯುತ್‌ಗಿಂತ ನಾಲ್ಕು ಪಟ್ಟು ಹೆಚ್ಚು ವಿದ್ಯುತ್‌ ಸಿಗುತ್ತಿದೆ’ ಎಂದ ಅವರು, ಬಿಹಾರಕ್ಕೆ 10 ವರ್ಷಗಳ ಹಿಂದೆ ಸಿಗುತ್ತಿದ್ದ ವಿದ್ಯುತ್‌ಗಿಂತ ನಾಲ್ಕು ಪಟ್ಟು ಹೆಚ್ಚು ವಿದ್ಯುತ್‌ ಸಿಗುತ್ತಿದೆ. 10 ವರ್ಷಗಳ ಹಿಂದಿನ ನಗರಗಳಿಗೆ ಹೋಲಿಸಿದರೆ ನಗರಗಳು ಶೇ.60 ರಷ್ಟು ಹೆಚ್ಚು ವಿದ್ಯುತ್ ಪಡೆಯುತ್ತಿವೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ

“ಪ್ರಧಾನಿ (ನರೇಂದ್ರ ಮೋದಿ) ಎಲ್ಲಾ ಹಳ್ಳಿಗಳಿಗೆ ವಿದ್ಯುತ್ ತಲುಪುವುದನ್ನು ಖಚಿತಪಡಿಸಿಕೊಳ್ಳಲು 1,000 ದಿನಗಳ ಕಾಲಾವಧಿಯನ್ನು ನೀಡಿದ್ದರು. ಗಡುವಿನ ಕೆಲವು ದಿನಗಳ ಮೊದಲೇ ಇದು ಸಂಭವಿಸಿದೆ ಎಂದು ಸಿಂಗ್ ಹೇಳಿದ್ದಾರೆ.

ಅಂಕಿಅಂಶಗಳು ಹಳ್ಳಿಗಳಿಗೆ ಸರಾಸರಿ 12-22 ಗಂಟೆಗಳ ವಿದ್ಯುತ್ ಮತ್ತು ನಗರಗಳು 24 ಗಂಟೆ ವಿದ್ಯುತ್ ಪಡೆಯುತ್ತಿವೆ ಎಂದು ಅವರು ಹೇಳಿದರು.

“ನಮಗೆ, ಗಡಿ ಪ್ರದೇಶಗಳು ಆದ್ಯತೆಯಾಗಿದೆ. ವಿದ್ಯುತ್ ಸರಬರಾಜು ದೂರದ ಪ್ರದೇಶಗಳನ್ನು ತಲುಪುವಂತೆ ಖಚಿತಪಡಿಸಿದ ನಮ್ಮ ಎಲ್ಲಾ ಕಾರ್ಮಿಕರು ಮತ್ತು ಎಂಜಿನಿಯರ್‌ಗಳಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದು ಅವರು ಹೇಳಿದರು.

ವಿದ್ಯುತ್ ಉತ್ಪಾದನೆ ಮತ್ತು ವಿತರಣೆಯಲ್ಲಿ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರಗಳಿಗೆ ಸಮನಾಗಿದೆ ಎಂದು ಸಚಿವರು ಹೇಳಿದರು. “ನಾವು ನಮ್ಮ ಪೂರೈಕೆಯನ್ನು ಮೀರಿಸಿದ್ದೇವೆ ಮತ್ತು ಇದರಿಂದಾಗಿ ನಾವು ನೇಪಾಳ ಮತ್ತು ಬಾಂಗ್ಲಾದೇಶಕ್ಕೆ ವಿದ್ಯುತ್ ಅನ್ನು ರಫ್ತು ಮಾಡುತ್ತಿದ್ದೇವೆ”. ಯುರೋಪಿನಲ್ಲಿ ಪ್ರತಿದಿನ ಬೆಲೆಗಳನ್ನು ಹೆಚ್ಚಿಸಲಾಗುತ್ತಿದೆ ಆದರೆ ಭಾರತದಲ್ಲಿ ಬೆಲೆಗಳು ಸ್ಥಿರವಾಗಿವೆ ಎಂದು ಸಿಂಗ್ ಹೇಳಿದರು. ಇದು ಆರ್ಥಿಕ ಅಭಿವೃದ್ಧಿಯ ಸೂಚಕವಾಗಿದೆ ಎಂದು ಅವರು ಹೇಳಿದರು.

ವಿದ್ಯುತ್ ಸಚಿವಾಲಯವು ಇಡೀ ದೇಶದ ಗ್ರಿಡ್ ವ್ಯವಸ್ಥೆಯನ್ನು ಸಂಪರ್ಕಿಸಿದೆ. “1.73 ಲಕ್ಷ ಗ್ರಿಡ್ ಲೈನ್‌ಗಳನ್ನು ಸಂಪರ್ಕಿಸಲಾಗಿದೆ. ಇದು ಒಂದು ದೊಡ್ಡ ಕಾರ್ಯವಾಗಿತ್ತು. ನಮಗೆ ಎಲ್ಲಾ ಬೆಂಬಲ ಸಿಕ್ಕಿದೆ ಎಂದು ಖಚಿತಪಡಿಸಿಕೊಂಡ ಪ್ರಧಾನಿ ಮೋದಿ ಅವರನ್ನು ಅಭಿನಂದನೆಗಳು” ಎಂದು ಸಿಂಗ್ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:00 pm, Mon, 30 January 23

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್